AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪಿಜಿ ಕೌನ್ಸಿಲಿಂಗ್​ ವಿಳಂಬ; ಕೇಂದ್ರ ಆರೋಗ್ಯ ಸಚಿವರ ಮನೆಯತ್ತ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ರೆಸಿಡೆಂಟ್​ ವೈದ್ಯರು ಪೊಲೀಸ್ ವಶಕ್ಕೆ

ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿದ ದೆಹಲಿ ಆಸ್ಪತ್ರೆಯ ಡಾ. ಗೌರವ್, ಇದು ಭಾರತದ ಇತಿಹಾಸದಲ್ಲೇ ಕರಾಳ ದಿನ. ವೈದ್ಯರ ಮೇಲೆ ಅದು ಹೇಗೆ ಪೊಲೀಸರು ಕೈಮಾಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನೀಟ್​ ಪಿಜಿ ಕೌನ್ಸಿಲಿಂಗ್​ ವಿಳಂಬ; ಕೇಂದ್ರ ಆರೋಗ್ಯ ಸಚಿವರ ಮನೆಯತ್ತ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ರೆಸಿಡೆಂಟ್​ ವೈದ್ಯರು ಪೊಲೀಸ್ ವಶಕ್ಕೆ
ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವೈದ್ಯರು
TV9 Web
| Edited By: |

Updated on:Dec 28, 2021 | 10:26 AM

Share

ನೀಟ್​ ಪಿಜಿ 2021ರ ಕೌನ್ಸಿಲಿಂಗ್​ಗೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ಹಲವು ರೆಸಿಡೆಂಟ್​ ವೈದ್ಯ(Resident Doctors)ರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಅಷ್ಟೇ ಅಲ್ಲ, ನಿನ್ನೆ ಸುಪ್ರೀಂಕೋರ್ಟ್ (Supreme Court)​​ನತ್ತ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದವರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದ ಕೋಪಗೊಂಡ ರೆಸಿಡೆಂಟ್ ವೈದ್ಯರು ಸಂಜೆ 8 ಗಂಟೆ ಹೊತ್ತಿಗೆ ಮತ್ತೆ ಎಲ್ಲರೂ ಒಟ್ಟು ಗೂಡಿ ಆರೋಗ್ಯ ಸಚಿವರ ಮನೆಯತ್ತ ಹೊರಟಿದ್ದರು. 

ಈ ಬಗ್ಗೆ ಆರ್​ಎಂಎಲ್​ ಆಸ್ಪತ್ರೆಯ ರೆಸಿಡೆಂಟ್​ ವೈದ್ಯ ಡಾ. ಸರ್ವೇಶ್​ ಮಾತನಾಡಿ, ನಾವು ನಿನ್ನೆ ಬೆಳಗ್ಗೆ ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ಪೊಲೀಸರು ನಮ್ಮ ಮೇಲೆ ಕೈ ಮಾಡಿದ್ದಾರೆ. ಮಹಿಳಾ ವೈದ್ಯರೂ ಸೇರಿ ಹಲವರು ಗಾಯಗೊಂಡಿದ್ದೇವೆ. ನಮ್ಮ ಮೇಲೆ ದೌರ್ಜನ್ಯ ನಡೆಸಿದ ಪೊಲೀಸರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಸುಮಾರು 300 ರೆಸಿಡೆಂಟ್ ವೈದ್ಯರು ಪೊಲೀಸರು ವಶಕ್ಕೆ ಪಡೆದಿದ್ದಾಗಿ ತಿಳಿದುಬಂದಿದೆ. ಹೀಗೆ ಪೊಲೀಸರು ತಮ್ಮನ್ನು ವಶಕ್ಕೆ ತೆಗೆದುಕೊಳ್ಳುವ ಹೊತ್ತಲ್ಲಿ ವೈದ್ಯರು ರಾಷ್ಟ್ರಗೀತೆ ಹಾಡುತ್ತಿದ್ದರು ಎನ್ನಲಾಗಿದೆ.

ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿದ ದೆಹಲಿ ಆಸ್ಪತ್ರೆಯ ಡಾ. ಗೌರವ್, ಇದು ಭಾರತದ ಇತಿಹಾಸದಲ್ಲೇ ಕರಾಳ ದಿನ. ವೈದ್ಯರ ಮೇಲೆ ಅದು ಹೇಗೆ ಪೊಲೀಸರು ಕೈಮಾಡುತ್ತಾರೆ? ಕೊರೊನಾ ಸಾಂಕ್ರಾಮಿಕ ವಿರುದ್ಧ ನಾವು ಹೋರಾಡಿದ್ದೇವೆ. ಪಿಜಿ ಕೌನ್ಸಿಲಿಂಗ್​ ಬೇಗ ನಡೆಸಬೇಕು ಎಂಬುದು ನಮ್ಮ ಬೇಡಿಕೆ. ಅದಕ್ಕಾಗಿ ನಾವು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.  ನೀಟ್​ ಪಿಜಿ ಪರೀಕ್ಷೆ ಸೆಪ್ಟೆಂಬರ್​ 12ರಲ್ಲಿ ನಡೆದಿದೆ. ಆದರೆ ಕೆಲವು ಕಾನೂನುಗಳಿಂದಾಗಿ ಕೌನ್ಸಿಲಿಂಗ್​ ಪ್ರಕ್ರಿಯೆ ತುಂಬ ವಿಳಂಬವಾಗುತ್ತಿರುವುದನ್ನು ರೆಸಿಡೆಂಟ್​ ವೈದ್ಯರು ವಿರೋಧಿಸುತ್ತಿದ್ದಾರೆ. ಇದರಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಬೇಕು ಎಂಬ ಬೇಡಿಕೆಯನ್ನೂ ಭಾರತೀಯ ವೈದ್ಯಕೀಯ ಸಂಘ ಮುಂದಿಟ್ಟಿದೆ.

ಇದನ್ನೂ ಓದಿ: ಆರ್ಡರ್​ ಮಾಡಿದ್ದು 1 ಲಕ್ಷ ರೂ ಐಫೋನ್​​, ಆನ್ಲೈನ್​ನಲ್ಲಿ ಬಂದಿದ್ದು ಮಾತ್ರ 2 ಕ್ಯಾಡ್ಬರಿ ಚಾಕೋಲೇಟ್​

Published On - 9:48 am, Tue, 28 December 21

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!