AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷರ ವಿರುದ್ಧ 150 ಕೋಟಿ ರೂ. ಅಕ್ರಮದ ಆರೋಪ; ರಾಜೀನಾಮೆಗೆ 15 ದಿನಗಳ ಗಡುವು

ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ವಿರುದ್ಧ ಬಿಸಿಐ ಸಹ-ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ ಮಾಡಿರುವ ಗಂಭೀರ ಅಕ್ರಮದ ಆರೋಪಗಳು ಇದೀಗ ತೀವ್ರ ಚರ್ಚೆಗೆ ಕಾರಣವಾಗಿವೆ. ಬಿಸಿಐ ಸಹ-ಅಧ್ಯಕ್ಷ ಹಾಗೂ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಸಂಸ್ಥೆಯ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರಿಗೆ ಪತ್ರ ಬರೆದು 15 ದಿನಗಳ ಒಳಗಾಗಿ ಹುದ್ದೆಗೆ ರಾಜೀನಾಮೆ ನೀಡುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ. ಸಂಸ್ಥೆಯನ್ನು ಸಾರ್ವಜನಿಕ ಟ್ರಸ್ಟ್‌ನಂತೆ ನಡೆಸುವ ಬದಲು ವೈಯಕ್ತಿಕ ಆಸ್ತಿಯಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಸದಾಶಿವ ರೆಡ್ಡಿ, ತಕ್ಷಣವೇ ಕೌನ್ಸಿಲ್‌ನ ಸಂಪೂರ್ಣ ಸಭೆಯನ್ನು ಕರೆಯಬೇಕು, ಎಲ್ಲಾ ಅನುಮಾನಾಸ್ಪದ ಪಾವತಿಗಳನ್ನು ತಡೆಹಿಡಿಯಬೇಕು ಮತ್ತು ಸ್ವತಂತ್ರ ಲೆಕ್ಕ ಪರಿಶೋಧನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷರ ವಿರುದ್ಧ 150 ಕೋಟಿ ರೂ. ಅಕ್ರಮದ ಆರೋಪ; ರಾಜೀನಾಮೆಗೆ 15 ದಿನಗಳ ಗಡುವು
Sadashiv ReddyImage Credit source: x
ಸುಷ್ಮಾ ಚಕ್ರೆ
|

Updated on: Aug 22, 2026 | 6:56 PM

Share

ನವದೆಹಲಿ, ಆಗಸ್ಟ್ 22: ಬಾರ್ ಕೌನ್ಸಿಲ್ ಆಫ್ ಇಂಡಿಯಾದ (BCI) ಆಡಳಿತ ವ್ಯವಸ್ಥೆಯಲ್ಲಿ ಭಾರಿ ಕೋಲಾಹಲ ಎದ್ದಿದ್ದು, ಬಿಸಿಐ ಸಹ-ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರಿಗೆ ಪತ್ರ ಬರೆದು 15 ದಿನಗಳ ಒಳಗಾಗಿ ಹುದ್ದೆಗೆ ರಾಜೀನಾಮೆ ನೀಡುವಂತೆ ಗಡುವು ನೀಡಿದ್ದಾರೆ. ಬಾರ್ ಕೌನ್ಸಿಲ್ ಅನ್ನು ಸಂಸ್ಥೆಯಾಗಿ ನಡೆಸುವ ಬದಲು ವೈಯಕ್ತಿಕ ಸ್ವತ್ತಿನಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಸದಾಶಿವ ರೆಡ್ಡಿ, ತಕ್ಷಣವೇ ಕೌನ್ಸಿಲ್‌ನ ಸಂಪೂರ್ಣ ಸಭೆಯನ್ನು ಕರೆಯಬೇಕು, ಎಲ್ಲಾ ಅನುಮಾನಾಸ್ಪದ ಪಾವತಿಗಳನ್ನು ತಡೆಹಿಡಿಯಬೇಕು ಮತ್ತು ಸ್ವತಂತ್ರ ಲೆಕ್ಕ ಪರಿಶೋಧನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿಸಿಐ ಅಧ್ಯಕ್ಷರ ವಿರುದ್ಧದ ಪ್ರಮುಖ ಆರೋಪಗಳು:

150 ಕೋಟಿ ರೂ. ನಿಧಿ ವರ್ಗಾವಣೆ:

ಮೂಲ ‘ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್’ ಅನ್ನು ಉದ್ದೇಶಪೂರ್ವಕವಾಗಿ ನಿಷ್ಕ್ರಿಯಗೊಳಿಸಿ, ಸೆಪ್ಟೆಂಬರ್ 2020ರಲ್ಲಿ ‘BCI Trust PEARL First’ ಎಂಬ ಖಾಸಗಿ ಸ್ವರೂಪದ ನೂತನ ಟ್ರಸ್ಟ್ ನೋಂದಾಯಿಸಲಾಗಿದೆ. ಮನನ್ ಕುಮಾರ್ ಮಿಶ್ರಾ ಅವರು ತಮಗೆ ಬೇಕಾದವರನ್ನೇ ಟ್ರಸ್ಟಿಗಳನ್ನಾಗಿ ನೇಮಿಸಿಕೊಂಡಿದ್ದು, ಬಿಸಿಐನ ಸುಮಾರು 150 ಕೋಟಿ ರೂ. ಹಣವನ್ನು ಈ ಟ್ರಸ್ಟ್‌ಗೆ ವರ್ಗಾಯಿಸಲು ನಿರ್ಣಯ ಅಂಗೀಕರಿಸಿದ್ದಾರೆ. ಇತರ ಸದಸ್ಯರ ವಿರೋಧವನ್ನೂ ಲೆಕ್ಕಿಸದೆ ಈ ನಿಧಿ ವರ್ಗಾವಣೆ ನಡೆಸಲಾಗಿದೆ.

ಇದನ್ನೂ ಓದಿ: ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಿಸಬೇಡಿ ಎಂದಿದ್ದ ನಲ್ಸಾರ್ ವಿದ್ಯಾರ್ಥಿಗಳ ಈ ವರ್ಷದ ನೋಂದಣಿ ತಡೆಹಿಡಿದ ಬಾರ್ ಕೌನ್ಸಿಲ್!

ಕಾನೂನು ಕಾಲೇಜುಗಳಿಂದ ಭಾರಿ ವಸೂಲಿ:

ದೇಶದ ಕಾನೂನು ಕಾಲೇಜುಗಳಿಗೆ ಬಿಸಿಐ ಮಾನ್ಯತೆ ನೀಡಲು ಅಥವಾ ನವೀಕರಿಸಲು ಭಾರಿ ಮೊತ್ತದ ಹಣವನ್ನು ನೀಡುವಂತೆ ಒತ್ತಡ ಹೇರಲಾಗುತ್ತಿದೆ. ನಿಯಂತ್ರಕ ಸಂಸ್ಥೆಯೊಂದು ತಾನು ನಿಯಂತ್ರಿಸುವ ಕಾಲೇಜುಗಳಿಂದಲೇ ಹಣ ಪಡೆಯುವುದು ವಿಪರ್ಯಾಸ.

ಅಕ್ರಮ ನೇಮಕಾತಿ:

ಬಾರ್ ಕೌನ್ಸಿಲ್ ಮತ್ತು ಅದರ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ತೀವ್ರ ಸ್ವಜನಪಕ್ಷಪಾತ ನಡೆದಿದೆ. ಯಾವುದೇ ಅಧಿಕೃತ ಜಾಹೀರಾತು ಅಥವಾ ಅರ್ಹತಾ ಪಟ್ಟಿ ಪ್ರಕಟಿಸದೇ, ಮಿಶ್ರಾ ಅವರ ಹತ್ತಿರದ ಸಂಬಂಧಿಕರು ಮತ್ತು ಕುಟುಂಬದವರನ್ನೇ ಉನ್ನತ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಾನು ಸಿಎಂ ಆಗಲು ಇಡೀ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಬಾರ್ ಕೌನ್ಸಿಲ್ ಅಧ್ಯಕ್ಷ

ವೃತ್ತಿಪರ ಸಂಸ್ಥೆಯ ಸಾರ್ವಭೌಮತ್ವ:

“ಬಾರ್ ಕೌನ್ಸಿಲ್ ಎನ್ನುವುದು ಇಡೀ ವಕೀಲರ ವೃತ್ತಿಪರ ಸಮುದಾಯಕ್ಕೆ ಸೇರಿದ್ದೇ ಹೊರತು, ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ” ಎಂದು ಸದಾಶಿವ ರೆಡ್ಡಿ ತಮ್ಮ ಪತ್ರದಲ್ಲಿ ಕಿಡಿಕಾರಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!