AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahatma Gandhi: ಮಹಾತ್ಮ ಗಾಂಧಿಗೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲು ನಿರ್ಣಯ ಮಂಡನೆ

ಗಾಂಧೀಜಿ ಅವರಿಗೆ ಅಮೆರಿಕದ ಅತ್ಯುನ್ನತ ಗೌರವವಾದ ಚಿನ್ನದ ಪದಕ ಪ್ರದಾನ ಮಾಡುವುದಾಗಿ ಘೋಷಿಸಿದರೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯ ಎಂಬ ಕೀರ್ತಿಗೆ ಮಹಾತ್ಮ ಗಾಂಧಿ ಪಾತ್ರರಾಗಲಿದ್ದಾರೆ.

Mahatma Gandhi: ಮಹಾತ್ಮ ಗಾಂಧಿಗೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲು ನಿರ್ಣಯ ಮಂಡನೆ
ಮಹಾತ್ಮ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 14, 2021 | 12:56 PM

ನವದೆಹಲಿ: ಶಾಂತಿ, ಅಹಿಂಸೆಯ ಪ್ರತಿಪಾದಕರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಮರಣೋತ್ತರವಾಗಿ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂಬ ನಿರ್ಣಯವನ್ನು ನ್ಯೂಯಾರ್ಕ್​ನ ಸಂಸದ ಅಮೆರಿಕದ ಸದನದಲ್ಲಿ (US House of Representatives) ಮರು ಮಂಡನೆ ಮಾಡಿದ್ದಾರೆ. ಒಂದುವೇಳೆ ಗಾಂಧೀಜಿ ಅವರಿಗೆ ಅಮೆರಿಕದ ಅತ್ಯುನ್ನತ ಗೌರವವಾದ ಚಿನ್ನದ ಪದಕ ಪ್ರದಾನ ಮಾಡುವುದಾಗಿ ಘೋಷಿಸಿದರೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯ ಎಂಬ ಕೀರ್ತಿಗೆ ಮಹಾತ್ಮ ಗಾಂಧಿ ಪಾತ್ರರಾಗಲಿದ್ದಾರೆ.

ಇದುವರೆಗೂ ಜಾರ್ಜ್ ವಾಷಿಂಗ್ಟನ್, ನೆಲ್ಸನ್ ಮಂಡೇಲಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಮದರ್ ತೆರೆಸಾ, ರೋಸಾ ಪಾರ್ಕ್ಸ್​ ಅವರಿಗೆ ಮರಣೋತ್ತರವಾಗಿ ಅಮೆರಿಕದ ಅತ್ಯುನ್ನತ ಗೌರವವಾದ ಈ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. ಸತ್ಯಾಗ್ರಹ, ಅಹಿಂಸಾವಾದದ ಮೂಲಕ ಇಡೀ ಪ್ರಪಂಚದಾದ್ಯಂತ ಪ್ರಭಾವ ಬೀರಿರುವ ಮಹಾತ್ಮ ಗಾಂಧಿ ಅವರಿಗೂ ಅಮೆರಿಕದ ಅತ್ಯುನ್ನತ ಗೌರವವಾದ ಚಿನ್ನದ ಪದಕ ಘೋಷಿಸಬೇಕು ಎಂದು ಅಮೆರಿಕದ ಸದನದಲ್ಲಿ ಚರ್ಚಿಸಲಾಗಿದೆ.

ಅಮೆರಿಕದ ಕಾಂಗ್ರೆಸ್ ಪ್ರತಿನಿಧಿಯಾಗಿರುವ ಕ್ಯಾರೊಲಿನ್ ಬಿ ಈ ಕುರಿತು ಮರುಮಂಡನೆ ಮಾಡಿದ್ದಾರೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರ ಜನಾಂಗೀಯ ಸಮಾನತೆಗಾಗಿ, ನೆಲ್ಸನ್ ಮಂಡೇಲಾ ಅವರ ವರ್ಣಭೇದ ನೀತಿಯ ವಿರುದ್ಧದ ಹೋರಾಟದಿಂದ ಅವರ ಪರಂಪರೆ ವಿಶ್ವದಾದ್ಯಂತ ನಾಗರಿಕ ಹಕ್ಕುಗಳ ಚಳುವಳಿಗಳಿಗೆ ಸ್ಫೂರ್ತಿ ನೀಡಿತು. ಒಬ್ಬ ಸಾರ್ವಜನಿಕ ಸೇವಕನಾಗಿ, ನಾನು ಅವರ ಧೈರ್ಯ ಮತ್ತು ಉದಾಹರಣೆಯಿಂದ ಪ್ರತಿದಿನ ಸ್ಫೂರ್ತಿ ಪಡೆಯುತ್ತೇನೆ ಎಂದಿದ್ದಾರೆ.

ಮಹಾತ್ಮ ಗಾಂಧೀಜಿ ವರ್ಣಭೇದ ನೀತಿ ವಿರುದ್ಧ ಹೋರಾಡಿ, ಸತ್ಯಾಗ್ರಹದ ಮೂಲಕ ಬ್ರಿಟಿಷರನ್ನು ಮಣಿಸಿ, ಅಹಿಂಸೆಯ ಬೋಧನೆ ಮಾಡಿ ಇಡೀ ವಿಶ್ವಾದ್ಯಂತ ಪ್ರಭಾವ ಬೀರಿದ್ದಾರೆ. ಈ ಜಗತ್ತಿನಲ್ಲಿ ಏನಾದರೂ ಬದಲಾವಣೆಯಾಗಬೇಕೆಂದರೆ ಅದು ನಿಮ್ಮಿಂದಲೇ ಪ್ರಾರಂಭವಾಗಲಿ ಎಂಬ ಗಾಂಧೀಜಿಯವರ ಮಾತನ್ನು ನಾವೆಲ್ಲರೂ ಪಾಲಿಸೋಣ ಎಂದು ಮೆಲೊನಿ ಹೇಳಿದ್ದಾರೆ.

ಇದನ್ನೂ ಓದಿ: ವಂಚನೆ ಆರೋಪ: ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ ನ್ಯಾಯಾಲಯ

ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ

(Resolution reintroduced In US Congress To Award Highest Civilian Award To Mahatma Gandhi)

Published On - 12:54 pm, Sat, 14 August 21

ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್