AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಕೊವಿಡ್​ 19 ನಿಯಂತ್ರಣ ನಿಯಮಗಳಲ್ಲಿ ಸಡಿಲಿಕೆ; ಮಧ್ಯರಾತ್ರಿ 12ಗಂಟೆವರೆಗೂ ಓಪನ್​ ಇರಲಿವೆ ರೆಸ್ಟೋರೆಂಟ್​, ಹೋಟೆಲ್​ಗಳು

ಮಹಾರಾಷ್ಟ್ರ ರಾಜ್ಯ ಸರ್ಕಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮುಂಬರುವ ಹಬ್ಬದ ಸೀಸನ್​ ದೃಷ್ಟಿಯಿಂದ ಅಂಗಡಿ, ರೆಸ್ಟೋರೆಂಟ್​, ಹೋಟೆಲ್​ಗಳ ಸಮಯ ವ್ಯಾಪ್ತಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

Maharashtra: ಕೊವಿಡ್​ 19 ನಿಯಂತ್ರಣ ನಿಯಮಗಳಲ್ಲಿ ಸಡಿಲಿಕೆ; ಮಧ್ಯರಾತ್ರಿ 12ಗಂಟೆವರೆಗೂ ಓಪನ್​ ಇರಲಿವೆ ರೆಸ್ಟೋರೆಂಟ್​, ಹೋಟೆಲ್​ಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 19, 2021 | 5:01 PM

Share

ಮುಂಬೈ:  ಮಹಾರಾಷ್ಟ್ರದಲ್ಲಿ ಕೊವಿಡ್​ 19 (Covid 19) ನಿಯಂತ್ರಣ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಇನ್ನು ಮುಂದೆ ಇಲ್ಲಿನ ರೆಸ್ಟೋರೆಂಟ್​ ಮತ್ತು ಹೋಟೆಲ್​​ಗಳು ಮಧ್ಯರಾತ್ರಿ 12ಗಂಟೆಯವರೆಗೂ ತೆರೆದಿರಲಿವೆ. ಹಾಗೇ, ಅಂಗಡಿ-ಮುಗ್ಗಟ್ಟುಗಳನ್ನು ರಾತ್ರಿ 11ಗಂಟೆಯವರೆಗೆ ತೆರೆದಿಡಲು ಅವಕಾಶ ಕಲ್ಪಿಸಲಾಗಿದೆ.  ಈ ಹಿಂದೆ ರೆಸ್ಟೋರೆಂಟ್​, ಹೋಟೆಲ್​, ಅಂಗಡಿಗಳನ್ನಲ್ಲೆ ರಾತ್ರಿ 10ಕ್ಕೆ ಬಂದ್ ಮಾಡಬೇಕಿತ್ತು. 

ಮಹಾರಾಷ್ಟ್ರ ರಾಜ್ಯ ಸರ್ಕಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮುಂಬರುವ ಹಬ್ಬದ ಸೀಸನ್​ ದೃಷ್ಟಿಯಿಂದ ಅಂಗಡಿ, ರೆಸ್ಟೋರೆಂಟ್​, ಹೋಟೆಲ್​ಗಳ ಸಮಯ ವ್ಯಾಪ್ತಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.  ಹಬ್ಬಗಳ ಹಿನ್ನೆಲೆಯಲ್ಲಿ ಖರೀದಿಗಾಗಿ ಬರುವ ಜನರ ಸಂಖ್ಯೆ ಹೆಚ್ಚಿರುತ್ತದೆ. ರಾತ್ರಿ 10ಗಂಟೆಗೆ ಎಲ್ಲವೂ ಬಂದ್ ಆಗುತ್ತದೆ ಎಂಬ ಕಾರಣಕ್ಕೆ ಒಂದೇ ಬಾರಿಗೆ ಹೆಚ್ಚೆಚ್ಚು ಜನರು ಬರುತ್ತಾರೆ. ಹೀಗಾದರೆ ಜನಸಂದಣಿ ಅಧಿಕಗೊಳ್ಳುತ್ತದೆ. ಇದನ್ನು ತಪ್ಪಿಸಲು ಎಲ್ಲ ರೀತಿಯ ಅಂಗಡಿಗಳು, ಹೋಟೆಲ್​, ರೆಸ್ಟೋರೆಂಟ್​​ಗಳ ಸಮಯವನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ.

ಈಗ ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಅದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್​ ಕುಂಟೆ ಅವರ ಸಹಿ ಇದೆ. ಹಾಗೇ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇದರ ಉಸ್ತುವಾರಿ ನೋಡಿಕೊಳ್ಳಬೇಕು ಎಂದೂ ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಕೊವಿಡ್ 19 ಸೋಂಕಿನ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮುಂಬೈನಲ್ಲಿ ಭಾನುವಾರ ಕೊರೊನಾದಿಂದ ಒಬ್ಬರೂ ಮೃತಪಟ್ಟಿದ್ದು ವರದಿಯಾಗಿಲ್ಲ. 2020ರ ಮಾರ್ಚ್​​ 26ರಿಂದ ಇಲ್ಲಿಯವರೆಗೆ ಇದೇ ಮೊದಲ ಬಾರಿಗೆ ಮುಂಬೈನಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿದ್ದು ವರದಿಯಾಗಿಲ್ಲ. ಹಾಗೇ, ಅಕ್ಟೋಬರ್​ 22ರಿಂದ ರಾಜ್ಯದ ಅಮ್ಯೂಸ್​ಮೆಂಟ್​ ಪಾರ್ಕ್​​ಗಳು ಕಾರ್ಯನಿರ್ವಹಿಸಬಹುದು ಎಂದು ಸೋಮವಾರವಷ್ಟೇ ಮಹಾರಾಷ್ಟ್ರ ಸರ್ಕಾರ ಹೇಳಿತ್ತು. ಹಾಗೇ, ಅಕ್ಟೋಬರ್​ 22ರಿಂದ ಸಿನಿಮಾ ಹಾಲ್​ಗಳು, ರಂಗಭೂಮಿ ವೇದಿಕೆಗಳನ್ನೂ ತೆರೆಯಬಹುದು, ಆದರೆ ಶೇ.50ರಷ್ಟು ಪ್ರೇಕ್ಷಕರ ಸಾಮರ್ಥ್ಯದಲ್ಲಿ ಪ್ರದರ್ಶನಗಳು ನಡೆಯಬೇಕು ಎಂದು ಕೂಡ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಹುತೇಕ ಉಪಚುನಾವಣೆಗಳಲ್ಲಿ ನಾವು ಸೋತಿದ್ದೇವೆ, ಕಷ್ಟದಲ್ಲಿದ್ದೇವೆ: ಎಚ್​ಡಿ ಕುಮಾರಸ್ವಾಮಿ

‘ಈಗ ಎಲ್ಲ ಮಕ್ಕಳೂ ಕುಡಿಯುತ್ತಾರೆ..ಅದೇನೂ ದೊಡ್ಡ ವಿಷಯವಲ್ಲ, ನನ್ನ ಸೋದರಳಿಯನ ಬಿಟ್ಟುಬಿಡಿ’-ಪೊಲೀಸರಿಗೆ ತಾಕೀತು ಮಾಡಿದ ಕಾಂಗ್ರೆಸ್​ ಶಾಸಕಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ