AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ದೇಶದಲ್ಲಿ ಕಮರ್ಷಿಯಲ್ ಎಲ್​ಪಿಜಿ ಬಿಕ್ಕಟ್ಟು ಉಂಟಾಗಿರುವುದರಿಂದ ಕೆಲವು ಹೋಟೆಲ್​ಗಳೇ ಬಾಗಿಲು ಮುಚ್ಚಿವೆ. ಇನ್ನು ಕೆಲವು ಹೋಟೆಲ್​ಗಳಲ್ಲಿ ದುಪ್ಪಟ್ಟು ಹಣ ಪಡೆಯಲಾಗುತ್ತಿದೆ. ಮತ್ತೆ ಕೆಲವು ರೆಸ್ಟೋರೆಂಟ್​ಗಳಲ್ಲಿ ಮೆನುವನ್ನು ಕಡಿತಗೊಳಿಸಲಾಗಿದೆ. ಹಾಗೇ, ಕೆಲವು ರೆಸ್ಟೋರೆಂಟ್ ಮತ್ತು ಹೋಟೆಲ್​ಗಳು ತಮ್ಮ ಬಿಲ್​ನಲ್ಲಿ ಎಲ್​ಪಿಜಿ ಗ್ಯಾಸ್​ ಶುಲ್ಕವನ್ನೂ ಸೇರಿಸುತ್ತಿರುವುದು ಬೆಳಕಿಗೆ ಬಂದಿದೆ. ಇನ್ಮುಂದೆ ನೀವು ಹೋಗುವ ಹೋಟೆಲ್​ಗಳ ಬಿಲ್​ನಲ್ಲಿ ಈ ಶುಲ್ಕ ಕಂಡುಬಂದರೆ ನೀವು ಸುಮ್ಮನೆ ಹಣ ಕೊಟ್ಟು ಬರಬೇಕಾಗಿಲ್ಲ. ಆ ರೀತಿ ಎಲ್​ಪಿಜಿ ಶುಲ್ಕ ವಿಧಿಸಿದ ಹೋಟೆಲ್ ವಿರುದ್ಧ ಗ್ರಾಹಕರು ಕ್ರಮ ಕೈಗೊಳ್ಳಬಹುದು. ಆ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?
Hotel BillImage Credit source: iStock
ಸುಷ್ಮಾ ಚಕ್ರೆ
|

Updated on:Mar 25, 2026 | 7:55 PM

Share

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಈ ರೀತಿ ಹಣ ವಸೂಲಿ ಮಾಡುವುದು ಅಕ್ರಮ. ಗ್ಯಾಸ್ ಸರ್‌ಚಾರ್ಜ್, ಇಂಧನ ರಿಕವರಿ ಹೆಸರಿನಲ್ಲಿ ಬಿಲ್ ಮಾಡೋದು ಶಿಕ್ಷಾರ್ಹ ಅಪರಾಧ. ಮೆನುವಿನಲ್ಲಿ ಉಲ್ಲೇಖಿಸಲಾದ ಬೆಲೆಗೆ ಅನ್ವಯವಾಗುವ ತೆರಿಗೆಗಳನ್ನು ಮಾತ್ರ ಸೇರಿಸಬಹುದು ಎಂದು ಸೂಚಿಸಿದೆ. ಹೆಚ್ಚುವರಿ ಶುಲ್ಕದಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ. ಆಹಾರದ ಬೆಲೆಯಲ್ಲೇ ವೆಚ್ಚ ಸೇರಿರಬೇಕು ಎಂದು ಸಿಸಿಪಿಎ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಮನೆಯಲ್ಲಿ ಪಿಎನ್​ಜಿ ಕನೆಕ್ಷನ್ ಇದ್ದರೂ ಬಳಸದಿದ್ದರೆ ಎಲ್​ಪಿಜಿ ಪೂರೈಕೆ ಸ್ಥಗಿತ; ಸರ್ಕಾರದಿಂದ ಎಚ್ಚರಿಕೆ

ಇಂಧನ, LPG, ವಿದ್ಯುತ್ ಮತ್ತು ಇತರ ಕಾರ್ಯಾಚರಣೆಯ ವೆಚ್ಚಗಳಂತಹ ಇನ್‌ಪುಟ್ ವೆಚ್ಚಗಳು ವ್ಯವಹಾರವನ್ನು ನಡೆಸುವ ವೆಚ್ಚದ ಭಾಗವಾಗಿದೆ. ಅದು ಮೆನು ಐಟಂಗಳ ಬೆಲೆಯಲ್ಲಿ ಸೇರಿಸಬೇಕು ಎಂದು CCPA ಸ್ಪಷ್ಟಪಡಿಸಿದೆ.

ಆಹಾರದ ಬೆಲೆಯಲ್ಲೇ ಇಂಧನ ಮತ್ತು ಸೇವೆಯ ವೆಚ್ಚ ಸೇರಿರಬೇಕೆಂದು ಸೂಚಿಸಲಾಗಿದೆ. ಬೆಲೆ ಮತ್ತು ಅನ್ವಯವಾಗುವ ತೆರಿಗೆ ಹೊರತುಪಡಿಸಿ ಬೇರೆ ಶುಲ್ಕ ವಿಧಿಸುವಂತಿಲ್ಲ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕದಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಹಾಗೇ, ಕಾನೂನಿನಿಂದ ಪಾರಾಗಲು ಹೊಸ ಹೆಸರಲ್ಲಿ ಹಣ ಪಡೆಯುವುದು ಕೂಡ ಅಪರಾಧವಾಗಿದೆ. ಸೇವಾ ಶುಲ್ಕದ ನಿಯಮ ತಪ್ಪಿಸಲು ಹಣ ಪಡೆಯುವುದು ಅಪರಾಧ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಹೆಚ್ಚು ಹಣ ಪಡೆದರೆ ನೀವೇನು ಮಾಡಬೇಕು?:

ಅನಗತ್ಯ ಚಾರ್ಜ್‌ಗಳ ವಿರುದ್ಧ ನೀವು ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ದೂರು ನೀಡಬಹುದು. ಹೆಲ್ಪ್​ಲೈನ್ 1915 ಅಥವಾ ಇ-ಜಾಗೃತಿ ಪೋರ್ಟಲ್ ಮೂಲಕ ದೂರು ಸಲ್ಲಿಸಬಹುದು. ಡಿಸಿ ಅಥವಾ ಸಿಸಿಪಿಎಗೆ ಇ-ಮೇಲ್ ಮೂಲಕವೂ ದೂರು ನೀಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Wed, 25 March 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು