AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವಾರಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಸ್ಥಿರವಾಗಲಿದೆ: ಕೇಂದ್ರ ಆಹಾರ ಕಾರ್ಯದರ್ಶಿ

ದಕ್ಷಿಣ ಭಾರತದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವುದರಿಂದ ಬೆಲೆ ಏರಿಕೆಯಾಗಿದೆ" ಎಂದು ಪಾಂಡೆ ಸುದ್ದಿಗಾರರಿಗೆ ತಿಳಿಸಿದರು.

ಎರಡು ವಾರಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಸ್ಥಿರವಾಗಲಿದೆ: ಕೇಂದ್ರ ಆಹಾರ ಕಾರ್ಯದರ್ಶಿ
ಟೊಮೆಟೊ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 02, 2022 | 9:14 PM

Share

ದೆಹಲಿ: ಮಳೆಯಿಂದಾದ ಬೆಳೆ ಹಾನಿಯಿಂದಾಗಿ (crop damage) ದರಗಳು ತೀವ್ರವಾಗಿ ಹೆಚ್ಚಿರುವ ದಕ್ಷಿಣ ರಾಜ್ಯಗಳಲ್ಲಿ ಚಿಲ್ಲರೆ ಟೊಮೆಟೊ ಬೆಲೆಗಳು (tomato price) ಮುಂದಿನ ಎರಡು ವಾರಗಳಲ್ಲಿ ಸ್ಥಿರವಾಗಲಿದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ (Sudhanshu Pandey) ಗುರುವಾರ ಹೇಳಿದ್ದಾರೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಚಿಲ್ಲರೆ ಟೊಮೆಟೊ ಬೆಲೆಗಳು ಹಲವಾರು ಸ್ಥಳಗಳಲ್ಲಿ ಕೆಜಿಗೆ 50 ರಿಂದ 106 ರೂ. ಏರಿಕೆ ಆಗಿದೆ. ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ಇದೆ. ದೆಹಲಿಯಲ್ಲಿ ಪ್ರತಿ ಕೆಜಿಗೆ 40 ರೂ.ಗೆ ಟೊಮೆಟೊ ಮಾರಾಟವಾಗುತ್ತಿದ್ದು, ಇತರ ಮೆಟ್ರೋ ನಗರಗಳಲ್ಲಿ ಚಿಲ್ಲರೆ ಬೆಲೆಗಳು ಜೂನ್ 2ರಂದು ಗರಿಷ್ಠ ಮಟ್ಟದಲ್ಲಿವೆ. ಮುಂಬೈ ಮತ್ತು ಕೊಲ್ಕತ್ತಾದಲ್ಲಿ ಟೊಮೆಟೊ ಕೆಜಿಗೆ 77 ರೂ.ಗೆ ಆಗಿದ್ದು ಗುರುವಾರ ಚೆನ್ನೈನಲ್ಲಿ ಟೊಮೆಟೊ ಕೆಜಿಗೆ 60 ರೂ ಆಗಿದೆ. ದೆಹಲಿಯಲ್ಲಿ ಟೊಮೆಟೊ ಬೆಲೆ ಸ್ಥಿರವಾಗಿದೆ. ದಕ್ಷಿಣ ಭಾರತದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವುದರಿಂದ ಬೆಲೆ ಏರಿಕೆಯಾಗಿದೆ” ಎಂದು ಪಾಂಡೆ ಸುದ್ದಿಗಾರರಿಗೆ ತಿಳಿಸಿದರು. ಉತ್ಪಾದನೆ ಮತ್ತು ಆಗಮನ ಹೆಚ್ಚಾಗಿದೆ. ಉತ್ಪಾದನೆಯ ಭಾಗದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸರ್ಕಾರವು ಈ ವಿಷಯವನ್ನು ರಾಜ್ಯಗಳೊಂದಿಗೆ ಚರ್ಚಿಸಿದೆ ಎಂದು ಅವರು ಹೇಳಿದರು.

ಈ ಬೆಲೆಗಳು ಮುಂದಿನ ಎರಡು ವಾರಗಳಲ್ಲಿ ಸ್ಥಿರಗೊಳ್ಳಬೇಕು ಎಂದು ಅವರು ಹೇಳಿದರು. ಈರುಳ್ಳಿ ಉತ್ಪಾದನೆ ಮತ್ತು ಸಂಗ್ರಹಣೆ ಕೂಡ ಕಳೆದ ವರ್ಷದ ವೇಳಾಪಟ್ಟಿಗಿಂತ ಮುಂದಿದೆ ಎಂದು ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ. “ನಾವು ಈಗಾಗಲೇ ರಾಬಿ ಋತುವಿನಿಂದ ಇದುವರೆಗೆ 52,000 ಟನ್‌ಗಳನ್ನು ಸಂಗ್ರಹಿಸಿದ್ದೇವೆ, ಇದು ಕಳೆದ ವರ್ಷದ 30,000 ಟನ್‌ಗಳಿಗಿಂತ ಹೆಚ್ಚು” ಎಂದು ಅವರು ಹೇಳಿದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ