AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವಾರಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಸ್ಥಿರವಾಗಲಿದೆ: ಕೇಂದ್ರ ಆಹಾರ ಕಾರ್ಯದರ್ಶಿ

ದಕ್ಷಿಣ ಭಾರತದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವುದರಿಂದ ಬೆಲೆ ಏರಿಕೆಯಾಗಿದೆ" ಎಂದು ಪಾಂಡೆ ಸುದ್ದಿಗಾರರಿಗೆ ತಿಳಿಸಿದರು.

ಎರಡು ವಾರಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಸ್ಥಿರವಾಗಲಿದೆ: ಕೇಂದ್ರ ಆಹಾರ ಕಾರ್ಯದರ್ಶಿ
ಟೊಮೆಟೊ
TV9 Web
| Edited By: |

Updated on: Jun 02, 2022 | 9:14 PM

Share

ದೆಹಲಿ: ಮಳೆಯಿಂದಾದ ಬೆಳೆ ಹಾನಿಯಿಂದಾಗಿ (crop damage) ದರಗಳು ತೀವ್ರವಾಗಿ ಹೆಚ್ಚಿರುವ ದಕ್ಷಿಣ ರಾಜ್ಯಗಳಲ್ಲಿ ಚಿಲ್ಲರೆ ಟೊಮೆಟೊ ಬೆಲೆಗಳು (tomato price) ಮುಂದಿನ ಎರಡು ವಾರಗಳಲ್ಲಿ ಸ್ಥಿರವಾಗಲಿದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ (Sudhanshu Pandey) ಗುರುವಾರ ಹೇಳಿದ್ದಾರೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಚಿಲ್ಲರೆ ಟೊಮೆಟೊ ಬೆಲೆಗಳು ಹಲವಾರು ಸ್ಥಳಗಳಲ್ಲಿ ಕೆಜಿಗೆ 50 ರಿಂದ 106 ರೂ. ಏರಿಕೆ ಆಗಿದೆ. ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ಇದೆ. ದೆಹಲಿಯಲ್ಲಿ ಪ್ರತಿ ಕೆಜಿಗೆ 40 ರೂ.ಗೆ ಟೊಮೆಟೊ ಮಾರಾಟವಾಗುತ್ತಿದ್ದು, ಇತರ ಮೆಟ್ರೋ ನಗರಗಳಲ್ಲಿ ಚಿಲ್ಲರೆ ಬೆಲೆಗಳು ಜೂನ್ 2ರಂದು ಗರಿಷ್ಠ ಮಟ್ಟದಲ್ಲಿವೆ. ಮುಂಬೈ ಮತ್ತು ಕೊಲ್ಕತ್ತಾದಲ್ಲಿ ಟೊಮೆಟೊ ಕೆಜಿಗೆ 77 ರೂ.ಗೆ ಆಗಿದ್ದು ಗುರುವಾರ ಚೆನ್ನೈನಲ್ಲಿ ಟೊಮೆಟೊ ಕೆಜಿಗೆ 60 ರೂ ಆಗಿದೆ. ದೆಹಲಿಯಲ್ಲಿ ಟೊಮೆಟೊ ಬೆಲೆ ಸ್ಥಿರವಾಗಿದೆ. ದಕ್ಷಿಣ ಭಾರತದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವುದರಿಂದ ಬೆಲೆ ಏರಿಕೆಯಾಗಿದೆ” ಎಂದು ಪಾಂಡೆ ಸುದ್ದಿಗಾರರಿಗೆ ತಿಳಿಸಿದರು. ಉತ್ಪಾದನೆ ಮತ್ತು ಆಗಮನ ಹೆಚ್ಚಾಗಿದೆ. ಉತ್ಪಾದನೆಯ ಭಾಗದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸರ್ಕಾರವು ಈ ವಿಷಯವನ್ನು ರಾಜ್ಯಗಳೊಂದಿಗೆ ಚರ್ಚಿಸಿದೆ ಎಂದು ಅವರು ಹೇಳಿದರು.

ಈ ಬೆಲೆಗಳು ಮುಂದಿನ ಎರಡು ವಾರಗಳಲ್ಲಿ ಸ್ಥಿರಗೊಳ್ಳಬೇಕು ಎಂದು ಅವರು ಹೇಳಿದರು. ಈರುಳ್ಳಿ ಉತ್ಪಾದನೆ ಮತ್ತು ಸಂಗ್ರಹಣೆ ಕೂಡ ಕಳೆದ ವರ್ಷದ ವೇಳಾಪಟ್ಟಿಗಿಂತ ಮುಂದಿದೆ ಎಂದು ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ. “ನಾವು ಈಗಾಗಲೇ ರಾಬಿ ಋತುವಿನಿಂದ ಇದುವರೆಗೆ 52,000 ಟನ್‌ಗಳನ್ನು ಸಂಗ್ರಹಿಸಿದ್ದೇವೆ, ಇದು ಕಳೆದ ವರ್ಷದ 30,000 ಟನ್‌ಗಳಿಗಿಂತ ಹೆಚ್ಚು” ಎಂದು ಅವರು ಹೇಳಿದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ