AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ವಿಆರ್‌ಎಸ್ ತೆಗೆದುಕೊಂಡರು.. ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

Hyderabad Osmania Medical College: ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು.

ಸಾಧು ಶ್ರೀನಾಥ್​
|

Updated on: Jan 24, 2024 | 2:03 PM

Share

ಉತ್ತಮ ಶಿಕ್ಷಣ ನೀಡಿದ ಶಿಕ್ಷಕರು ಶಾಲೆ ಬಿಡುವಾಗ ವಿದ್ಯಾರ್ಥಿಗಳು ಹೆಮ್ಮೆಯಿಂದ ನಾನಾ ರೀತಿಗಳಲ್ಲಿ ತಮ್ಮ ಕೃತಜ್ಞತೆ ತೋರುತ್ತಾರೆ. ಕಾಲಕ್ಕೆ ತಕ್ಕಂತೆ ಅದನ್ನೆಲ್ಲಾ ವೀಡಿಯೋ ಮಾಡುತ್ತಾರೆ. ಅದರಲ್ಲಿ ಇನ್ನೂ ಏನಾದರೂ ವಿಶೇಷವಾದದ್ದು ಘಟಿಸಿದರೆ ಅಂತಹ ವಿಡಿಯೋಗಳು ವೈರಲ್ ಆಗಿ ಮತ್ತಷ್ಟು ಅವರ ಸಂಭ್ರವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು. ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಶಶಿಕಲಾ ಮೇಡಂ ಸಾಕಷ್ಟು ಶ್ರಮಿಸಿದ್ದರು ಎಂದು ವಿದ್ಯಾರ್ಥಿಗಳು ಅಭಿಮಾನದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಡಾ. ತಾಕಿವುದ್ದೀನ್, ಡಾ.ಕಿರಣ್ಮಯಿ, ಡಾ.ಜಯಾ, ಡಾ.ಪದ್ಮಾವತಿ, ಡಾ.ಸುಮಲತಾ, ಡಾ.ಅನಿತಾ, ಡಾ.ಭವಾನಿ ವೇಣುಗೋಪಾಲರೆಡ್ಡಿ ಉಪೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸ್ವಯಂಪ್ರೇರಿತವಾಗಿ ನಿವೃತ್ತರಾದ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ. ಶಶಿಕಲಾ ಅವರ ಮೇಲೆ ಪುಷ್ಪಗಳನ್ನು ಸುರಿಸಲಾಯಿತು. ಈ ಸಂದರ್ಭದಲ್ಲಿ ಉಸ್ಮಾನಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ. ನಾಗೇಂದ್ರ ಮಾತನಾಡಿ ಶಶಿಕಲಾ ರೆಡ್ಡಿ ಅವರು ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಮಾತನಾಡಿ, ಈ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುವುದು ಅತೀವ ಸಂತಸ ತಂದಿದೆ ಎಂದು ಅಭಿಮಾನದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು