AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ವಿಆರ್‌ಎಸ್ ತೆಗೆದುಕೊಂಡರು.. ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

Hyderabad Osmania Medical College: ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು.

ಸಾಧು ಶ್ರೀನಾಥ್​
|

Updated on: Jan 24, 2024 | 2:03 PM

Share

ಉತ್ತಮ ಶಿಕ್ಷಣ ನೀಡಿದ ಶಿಕ್ಷಕರು ಶಾಲೆ ಬಿಡುವಾಗ ವಿದ್ಯಾರ್ಥಿಗಳು ಹೆಮ್ಮೆಯಿಂದ ನಾನಾ ರೀತಿಗಳಲ್ಲಿ ತಮ್ಮ ಕೃತಜ್ಞತೆ ತೋರುತ್ತಾರೆ. ಕಾಲಕ್ಕೆ ತಕ್ಕಂತೆ ಅದನ್ನೆಲ್ಲಾ ವೀಡಿಯೋ ಮಾಡುತ್ತಾರೆ. ಅದರಲ್ಲಿ ಇನ್ನೂ ಏನಾದರೂ ವಿಶೇಷವಾದದ್ದು ಘಟಿಸಿದರೆ ಅಂತಹ ವಿಡಿಯೋಗಳು ವೈರಲ್ ಆಗಿ ಮತ್ತಷ್ಟು ಅವರ ಸಂಭ್ರವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು. ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಶಶಿಕಲಾ ಮೇಡಂ ಸಾಕಷ್ಟು ಶ್ರಮಿಸಿದ್ದರು ಎಂದು ವಿದ್ಯಾರ್ಥಿಗಳು ಅಭಿಮಾನದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಡಾ. ತಾಕಿವುದ್ದೀನ್, ಡಾ.ಕಿರಣ್ಮಯಿ, ಡಾ.ಜಯಾ, ಡಾ.ಪದ್ಮಾವತಿ, ಡಾ.ಸುಮಲತಾ, ಡಾ.ಅನಿತಾ, ಡಾ.ಭವಾನಿ ವೇಣುಗೋಪಾಲರೆಡ್ಡಿ ಉಪೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸ್ವಯಂಪ್ರೇರಿತವಾಗಿ ನಿವೃತ್ತರಾದ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ. ಶಶಿಕಲಾ ಅವರ ಮೇಲೆ ಪುಷ್ಪಗಳನ್ನು ಸುರಿಸಲಾಯಿತು. ಈ ಸಂದರ್ಭದಲ್ಲಿ ಉಸ್ಮಾನಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ. ನಾಗೇಂದ್ರ ಮಾತನಾಡಿ ಶಶಿಕಲಾ ರೆಡ್ಡಿ ಅವರು ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಮಾತನಾಡಿ, ಈ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುವುದು ಅತೀವ ಸಂತಸ ತಂದಿದೆ ಎಂದು ಅಭಿಮಾನದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ