AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ವಿಆರ್‌ಎಸ್ ತೆಗೆದುಕೊಂಡರು.. ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

Hyderabad Osmania Medical College: ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು.

ಸಾಧು ಶ್ರೀನಾಥ್​
|

Updated on: Jan 24, 2024 | 2:03 PM

Share

ಉತ್ತಮ ಶಿಕ್ಷಣ ನೀಡಿದ ಶಿಕ್ಷಕರು ಶಾಲೆ ಬಿಡುವಾಗ ವಿದ್ಯಾರ್ಥಿಗಳು ಹೆಮ್ಮೆಯಿಂದ ನಾನಾ ರೀತಿಗಳಲ್ಲಿ ತಮ್ಮ ಕೃತಜ್ಞತೆ ತೋರುತ್ತಾರೆ. ಕಾಲಕ್ಕೆ ತಕ್ಕಂತೆ ಅದನ್ನೆಲ್ಲಾ ವೀಡಿಯೋ ಮಾಡುತ್ತಾರೆ. ಅದರಲ್ಲಿ ಇನ್ನೂ ಏನಾದರೂ ವಿಶೇಷವಾದದ್ದು ಘಟಿಸಿದರೆ ಅಂತಹ ವಿಡಿಯೋಗಳು ವೈರಲ್ ಆಗಿ ಮತ್ತಷ್ಟು ಅವರ ಸಂಭ್ರವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು. ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಶಶಿಕಲಾ ಮೇಡಂ ಸಾಕಷ್ಟು ಶ್ರಮಿಸಿದ್ದರು ಎಂದು ವಿದ್ಯಾರ್ಥಿಗಳು ಅಭಿಮಾನದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಡಾ. ತಾಕಿವುದ್ದೀನ್, ಡಾ.ಕಿರಣ್ಮಯಿ, ಡಾ.ಜಯಾ, ಡಾ.ಪದ್ಮಾವತಿ, ಡಾ.ಸುಮಲತಾ, ಡಾ.ಅನಿತಾ, ಡಾ.ಭವಾನಿ ವೇಣುಗೋಪಾಲರೆಡ್ಡಿ ಉಪೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸ್ವಯಂಪ್ರೇರಿತವಾಗಿ ನಿವೃತ್ತರಾದ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ. ಶಶಿಕಲಾ ಅವರ ಮೇಲೆ ಪುಷ್ಪಗಳನ್ನು ಸುರಿಸಲಾಯಿತು. ಈ ಸಂದರ್ಭದಲ್ಲಿ ಉಸ್ಮಾನಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ. ನಾಗೇಂದ್ರ ಮಾತನಾಡಿ ಶಶಿಕಲಾ ರೆಡ್ಡಿ ಅವರು ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಮಾತನಾಡಿ, ಈ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುವುದು ಅತೀವ ಸಂತಸ ತಂದಿದೆ ಎಂದು ಅಭಿಮಾನದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!