AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ವಿಆರ್‌ಎಸ್ ತೆಗೆದುಕೊಂಡರು.. ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

Hyderabad Osmania Medical College: ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 24, 2024 | 2:03 PM

Share

ಉತ್ತಮ ಶಿಕ್ಷಣ ನೀಡಿದ ಶಿಕ್ಷಕರು ಶಾಲೆ ಬಿಡುವಾಗ ವಿದ್ಯಾರ್ಥಿಗಳು ಹೆಮ್ಮೆಯಿಂದ ನಾನಾ ರೀತಿಗಳಲ್ಲಿ ತಮ್ಮ ಕೃತಜ್ಞತೆ ತೋರುತ್ತಾರೆ. ಕಾಲಕ್ಕೆ ತಕ್ಕಂತೆ ಅದನ್ನೆಲ್ಲಾ ವೀಡಿಯೋ ಮಾಡುತ್ತಾರೆ. ಅದರಲ್ಲಿ ಇನ್ನೂ ಏನಾದರೂ ವಿಶೇಷವಾದದ್ದು ಘಟಿಸಿದರೆ ಅಂತಹ ವಿಡಿಯೋಗಳು ವೈರಲ್ ಆಗಿ ಮತ್ತಷ್ಟು ಅವರ ಸಂಭ್ರವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು. ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಶಶಿಕಲಾ ಮೇಡಂ ಸಾಕಷ್ಟು ಶ್ರಮಿಸಿದ್ದರು ಎಂದು ವಿದ್ಯಾರ್ಥಿಗಳು ಅಭಿಮಾನದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಡಾ. ತಾಕಿವುದ್ದೀನ್, ಡಾ.ಕಿರಣ್ಮಯಿ, ಡಾ.ಜಯಾ, ಡಾ.ಪದ್ಮಾವತಿ, ಡಾ.ಸುಮಲತಾ, ಡಾ.ಅನಿತಾ, ಡಾ.ಭವಾನಿ ವೇಣುಗೋಪಾಲರೆಡ್ಡಿ ಉಪೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸ್ವಯಂಪ್ರೇರಿತವಾಗಿ ನಿವೃತ್ತರಾದ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ. ಶಶಿಕಲಾ ಅವರ ಮೇಲೆ ಪುಷ್ಪಗಳನ್ನು ಸುರಿಸಲಾಯಿತು. ಈ ಸಂದರ್ಭದಲ್ಲಿ ಉಸ್ಮಾನಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ. ನಾಗೇಂದ್ರ ಮಾತನಾಡಿ ಶಶಿಕಲಾ ರೆಡ್ಡಿ ಅವರು ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಮಾತನಾಡಿ, ಈ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುವುದು ಅತೀವ ಸಂತಸ ತಂದಿದೆ ಎಂದು ಅಭಿಮಾನದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ