AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೂ ವಿಶ್ರಾಂತಿ ಬೇಕಿದೆ: ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಮೀರುವುದು ಬೇಡ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ

ಇದನ್ನು 65 ವರ್ಷಗಳಿಗೆ ಏರಿಸಬಹುದು. ಆದರೆ ಅದಕ್ಕಿಂತ ಹೆಚ್ಚು ಮಾಡುವುದು ಬೇಡ. ನ್ಯಾಯಾಧೀಶರಿಗೆ ಸ್ವಲ್ಪ ವಿಶ್ರಾಂತಿ ಬೇಕಿದೆ ಎಂದು ಹೇಳಿದರು.

ನಮಗೂ ವಿಶ್ರಾಂತಿ ಬೇಕಿದೆ: ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಮೀರುವುದು ಬೇಡ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ
ಸುಪ್ರೀಂಕೋರ್ಟ್​ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್
TV9 Web
| Edited By: |

Updated on: Nov 05, 2021 | 6:36 PM

Share

ದೆಹಲಿ: ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿಯ ವಯಸ್ಸು 65 ವರ್ಷಕ್ಕಿಂತ ಹೆಚ್ಚಾಗಬಾರದು ಎಂದು ಸುಪ್ರಿಂಕೋರ್ಟ್ ನ್ಯಾಯಮೂರ್ತಿ ರವೀಂದ್ರ ಭಟ್ ಶುಕ್ರವಾರ ಅಭಿಪ್ರಾಯಪಟ್ಟರು. ಪ್ರಸ್ತುತ ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿಯ ವಯಸ್ಸು 62 ವರ್ಷಕ್ಕೆ ನಿಗದಿಯಾಗಿದೆ. ಇದನ್ನು 65 ವರ್ಷಗಳಿಗೆ ಏರಿಸಬಹುದು. ಆದರೆ ಅದಕ್ಕಿಂತ ಹೆಚ್ಚು ಮಾಡುವುದು ಬೇಡ. ನ್ಯಾಯಾಧೀಶರಿಗೆ ಸ್ವಲ್ಪ ವಿಶ್ರಾಂತಿ ಬೇಕಿದೆ ಎಂದು ಹೇಳಿದರು.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್​ ನ್ಯಾಯಪೀಠಗಳಲ್ಲಿ ಯುವಜನರಿಗೆ ಅವಕಾಶಗಳು ಬೇಕು. ಯುವಜನರೊಂದಿಗೆ ಹೊಸ ವಿಚಾರಗಳೂ ನ್ಯಾಯಾಲಯವನ್ನು ಪ್ರವೇಶಿಸುತ್ತವೆ. ನ್ಯಾಯಾಲಯಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹೊಸತನ ಕಾಣಿಸಿಕೊಳ್ಳುತ್ತದೆ. ಸಮಕಾಲೀನ ವಿದ್ಯಮಾನಗಳ ಬಗ್ಗೆ ಅವರು ಹೊಸ ರೀತಿಯ ದೃಷ್ಟಿಕೋನ ಬೆಳೆಸಿಕೊಂಡಿರುತ್ತಾರೆ. ನಾವು ವಯಸ್ಸಾದವರು ಇಂಥವನ್ನು ಹೊಸದಾಗಿ ತಿಳಿದುಕೊಳ್ಳಬೇಕು. ಆದರೆ ಅನೇಕ ಸಂದರ್ಭಗಳಲ್ಲಿ ಇಂಥವಕ್ಕೆ ಪ್ರತಿರೋಧ ತೋರುತ್ತಿರುತ್ತೇವೆ ಎಂದು ಅವರು ನುಡಿದರು.

ಅಸೀಮ್ ಚಾವ್ಲಾ ಅವರ ಹೊಸ ಪುಸ್ತಕ ‘ಫೈಂಡಿಂಗ್ ಎ ಸ್ಟ್ರೇಟ್ ಲೈನ್ ಬಿಟ್​ವೀನ್ ಟ್ವಿಸ್ಟ್ಸ್​ ಅಂಡ್ ಟರ್ನ್ಸ್​’ ಬಿಡುಗಡೆ ಸಮಾರಂಭದಲ್ಲಿ ನ್ಯಾಯಮೂರ್ತಿ ರವೀಂದ್ರ ಭಟ್ ಮಾತನಾಡಿದರು. ಅಸೀಮ್ ಚಾವ್ಲಾ ಅವರ ಈ ಪುಸ್ತಕವು ಭಾರತದಲ್ಲಿ ತೆರಿಗೆ ಪದ್ಧತಿ ಬೆಳೆದುಬಂದ ಬಗೆಯನ್ನು ವಿವರಿಸುತ್ತದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿ ಹೈಕೋರ್ಟ್​ನ ನ್ಯಾಯಮೂರ್ತಿಗಳಾದ ವಿಪಿನ್ ಸಾಂಘ್ವಿ ಮತ್ತು ವಿಭು ಭಕ್ರು ಹಾಗೂ ಸೊಸೈಟಿ ಆಫ್ ಇಂಡಿಯನ್ ಲಾ ಫರ್ಮ್ಸ್​ನ ಅಧ್ಯಕ್ಷ ಡಾ.ಲಲಿತ್ ಭಾಸಿನ್ ಪಾಲ್ಗೊಂಡಿದ್ದರು.

ಸಾಮಾಜಿಕ ನ್ಯಾಯ ಮತ್ತು ಹಣಕಾಸು ನೀತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರವೀಂದ್ರ ಭಟ್​ ವಿದ್ವತ್ಪೂರ್ಣ ಉಪನ್ಯಾಸ ನೀಡಿದರು. ತೆರಿಗೆ ಪದ್ಧತಿಗಳು ಹೇಗೆ ರಾಜಕೀಯ ಚರ್ಚೆಗಳಲ್ಲಿ ಕೇಂದ್ರ ಸ್ಥಾನ ಪಡೆಯುತ್ತವೆ ಎಂದು ವಿವರಿಸಿದ ಅವರು, ಅಮೆರಿಕದ ಸ್ವಾತಂತ್ರ್ಯ ಹೋರಾಟವು ಹೇಗೆ ತೆರಿಗೆ ಪದ್ಧತಿಯೊಂದಿಗೆ ತಳಕು ಹಾಕಿಕೊಂಡಿತ್ತು ಎಂಬ ಬಗ್ಗೆ ಇಣುಕುನೋಟ ನೀಡಿದರು. ಈ ತೆರಿಗೆ ಪದ್ಧತಿಯ ಆಧಾರದ ಮೇಲೆಯೇ ಅಮೆರಿಕ ರಚನೆಯಾಗಿದೆ. ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ‘ಪ್ರಾತಿನಿಧ್ಯವಿಲ್ಲದೆ ತೆರಿಗೆ ಇಲ್ಲ’ ಎಂದು ಘೋಷಣೆ ಮೊಳಗಿಸಿದ್ದರು. ರಾಜಕೀಯ ಪ್ರಾತಿನಿಧ್ಯದ ಬೇಡಿಕೆಯು ತೆರಿಗೆಯಿಂದ ಆಚೆಗೆ ಹೋಗಿತ್ತು ಎಂದು ಹೇಳಿದರು.

ಫ್ರಾನ್ಸ್​ ಕ್ರಾಂತಿಯ ಮುಖ್ಯ ಕಾರಣಗಳಲ್ಲಿ ವಿಪರೀತ ತೆರಿಗೆಯೂ ಒಂದು. ತೆರಿಗೆ ಹೊರೆ ಹೆಚ್ಚಾಗುತ್ತಿದೆ ಎಂಬ ಭಾವ ಮೊಳೆತಾಗಲೆಲ್ಲಾ ಸಮಾಜಗಳು ಅದರ ವಿರುದ್ಧ ಎದ್ದು ನಿಂತಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Asghar Afghan: ಯುವ ಆಟಗಾರರಿಗೆ ಚಾನ್ಸ್ ಸಿಗಲು ಕಣ್ಣೀರಿನೊಂದಿಗೆ ನಿವೃತ್ತಿ ಘೋಷಿಸಿದ ಅಫ್ಘಾನ್ ಆಟಗಾರ ಇದನ್ನೂ ಓದಿ: ದಂಡ ವಿಧಿಸಿ ಸೆಂಟ್ರಲ್ ವಿಸ್ಟಾ ವಿರುದ್ಧದ ಮನವಿಯನ್ನು ವಜಾಗೊಳಿಸಿ: ಸುಪ್ರೀಂಕೋರ್ಟ್‌ಗೆ ಕೇಂದ್ರ ಒತ್ತಾಯ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ