AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತುಬ್ ಮಿನಾರ್ ಕಾಂಪ್ಲೆಕ್ಸ್​​ನಿಂದ ಗಣೇಶ ಮೂರ್ತಿಗಳನ್ನು ತೆಗೆಯುವ ಯೋಚನೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇರಲಿಲ್ಲ: ದೆಹಲಿ ಕೋರ್ಟ್

ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ದೇವತೆಗಳು ಮತ್ತು ವಿಗ್ರಹಗಳನ್ನು ಗೌರವಯುತವಾಗಿ ನಿರ್ವಹಿಸುವುದು ಎಎಸ್‌ಐ ನಿರ್ದೇಶಕರ ಕರ್ತವ್ಯ ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ.

ಕುತುಬ್ ಮಿನಾರ್ ಕಾಂಪ್ಲೆಕ್ಸ್​​ನಿಂದ ಗಣೇಶ ಮೂರ್ತಿಗಳನ್ನು ತೆಗೆಯುವ ಯೋಚನೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇರಲಿಲ್ಲ: ದೆಹಲಿ ಕೋರ್ಟ್
ಕುತುಬ್ ಮಿನಾರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 18, 2022 | 4:46 PM

Share

ದೆಹಲಿ: ಕುತುಬ್ ಮಿನಾರ್ ಕಾಂಪ್ಲೆಕ್ಸ್‌ನಿಂದ (Qutub Minar complex) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಎರಡು ಗಣೇಶ ಮೂರ್ತಿಗಳನ್ನು ತೆಗೆಯುವುತಡೆಯುವಂತೆ ಕೋರಿ ಮೊಕದ್ದಮೆ ಹೂಡಿರುವ ಮೇಲ್ಮನವಿದಾರರ ಕಾಳಜಿಯನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ನ್ಯಾಯಾಲಯ (Delhi court) ಹೇಳಿದ್ದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಕುತುಬ್ ಮಿನಾರ್ ಸಂಕೀರ್ಣದಿಂದ ಎರಡು ಗಣೇಶ ಮೂರ್ತಿಗಳನ್ನು ಹಿಂಪಡೆಯಲು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರ (NMA) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕೇಳಿಕೊಂಡಿದೆ. ಪ್ರಾಧಿಕಾರದ ಅಧ್ಯಕ್ಷರು “ವಿಗ್ರಹಗಳನ್ನು ಅಲ್ಲಿ ಇರಿಸುವುದು ಅಗೌರವ” ಎಂದು ಹೇಳಿದ್ದು ಅವುಗಳನ್ನು ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಗಣೇಶನ ವಿಗ್ರಹವನ್ನು ತೆಗೆಯದಂತೆ ಎಎಸ್‌ಐಗೆ ನಿರ್ಬಂಧ ವಿಧಿಸಲು ಮತ್ತು “ಮೊಕದ್ದಮೆಯಲ್ಲಿ ಒಳಗೊಂಡಿರುವ ಆಸ್ತಿಯೊಳಗೆ ಗೌರವಾನ್ವಿತ ಸ್ಥಳದಲ್ಲಿ ವಿಗ್ರಹವನ್ನು ಇರಿಸುವಂತೆ” ನ್ಯಾಯಾಲಯವನ್ನು ಕೇಳಲು  ರಿಷಭ್ ದೇವ್ ಅವರು ಮೊಕದ್ದಮೆ ಹೂಡಿದ್ದಾರೆ. ಸಾಕೇತ್ ನ್ಯಾಯಾಲಯದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು ಮೇಲ್ಮನವಿದಾರರ ಕಾಳಜಿಯನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅರ್ಜಿಯ ನಿರ್ವಹಣೆಯ ಬಗ್ಗೆ ವಾದಗಳನ್ನು ಆಲಿಸಿದಾಗ ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯವು ಪ್ರತಿವಾದಿಗಳಿಗೆ ಹೇಳಿದೆ.  ಮೇಲ್ಮನವಿದಾರರ ಕಾಳಜಿಯನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರತಿವಾದಿಗಳು/ಎಎಸ್‌ಐ ಪರ ವಕೀಲರು ಸದ್ಯದಲ್ಲಿಯೇ ವಿಗ್ರಹಗಳನ್ನು ಸ್ಥಳಾಂತರಿಸುವ ಸಾಧ್ಯತೆ ಇದೆಯೇ ಎಂಬುದರ ಬಗ್ಗೆ ತಮಗೆ ಯಾವುದೇ ನಿರ್ದೇಶನವಿಲ್ಲ ಎಂದು ಪ್ರಾಮಾಣಿಕವಾಗಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ವಕೀಲ ಹರಿಶಂಕರ್ ಜೈನ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಮೊಕದ್ದಮೆ ಕೂಡಾ ಎಎಸ್‌ಐಗೆ ವಿಗ್ರಹವನ್ನು ತೆಗೆದು ರಾಷ್ಟ್ರೀಯ ವಸ್ತುಸಂಗ್ರಹಾಲಯ ಅಥವಾ ಯಾವುದೇ ಆಸ್ತಿಯಲ್ಲಿ ಇರಿಸದಂತೆ ತಡೆಯಬೇಕೆಂದು  ಮನವಿ ಮಾಡಿದೆ. ಕೋಟ್ಯಂತರ ಹಿಂದೂಗಳು ಪೂಜಿಸುವ ಗಣಪತಿಯು “ಅತ್ಯಂತ ದಯನೀಯ ಸ್ಥಿತಿಯಲ್ಲಿ ಮಲಗಿದ್ದು, ಭಕ್ತರ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ” ಎಂದು ದಾವೆಯಲ್ಲಿ ಹೇಳಲಾಗಿದೆ.

ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ದೇವತೆಗಳು ಮತ್ತು ವಿಗ್ರಹಗಳನ್ನು ಗೌರವಯುತವಾಗಿ ನಿರ್ವಹಿಸುವುದು ಎಎಸ್‌ಐ ನಿರ್ದೇಶಕರ ಕರ್ತವ್ಯ ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ. “ಎನ್‌ಎಂಐ ಅಧ್ಯಕ್ಷರು ಸೂಚಿಸಿದಂತೆ ಆಸ್ತಿಯ ಪ್ರದೇಶದ ಹೊರಗೆ ಗಣೇಶನ ವಿಗ್ರಹವನ್ನು ಕಳುಹಿಸಲು ಎಎಸ್‌ಐಗೆ ಯಾವುದೇ ಅಧಿಕಾರ ಅಥವಾ ಅಧಿಕಾರ ವ್ಯಾಪ್ತಿ ಇಲ್ಲ” ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ.

ಎರಡು ವಿಗ್ರಹಗಳು “ಉಲ್ಟಾ ಗಣೇಶ್” ಮತ್ತು “ಪಂಜರದಲ್ಲಿನ ಗಣೇಶ” ಎಂದು ಕರೆಯಲಾಗುತ್ತದೆ. ಇದು 1993 ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗೊತ್ತುಪಡಿಸಿದ 12 ನೇ ಶತಮಾನದ ಸ್ಮಾರಕದ ಆವರಣದಲ್ಲಿದೆ. “ಉಲ್ಟಾ ಗಣೇಶ್” (ತಲೆಕೆಳಗಾದ) ಸಂಕೀರ್ಣದಲ್ಲಿರುವ ಕುವ್ವಾತ್ ಉಲ್ ಇಸ್ಲಾಂ ಮಸೀದಿಯ ದಕ್ಷಿಣಾಭಿಮುಖ ಗೋಡೆಯ ಭಾಗವಾಗಿದೆ. ಕಬ್ಬಿಣದ ಪಂಜರದಲ್ಲಿ ಸುತ್ತುವರಿದ ಇನ್ನೊಂದು ವಿಗ್ರಹವು ನೆಲಮಟ್ಟಕ್ಕೆ ಹತ್ತಿರದಲ್ಲಿದೆ ಮತ್ತು ಅದೇ ಮಸೀದಿಯ ಭಾಗವಾಗಿದೆ.

ಇದನ್ನೂ ಓದಿ: Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರದ ತನಿಖೆ ನಿಷ್ಪಕ್ಷಪಾತವಾಗಿದೆ: ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್