ನೀವು ನಮಗೆಲ್ಲಾ ತಾಯಿ ಇದ್ದ ಹಾಗೆ, ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸಬೇಕು: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ

ತೆಲಂಗಾಣ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಸೋನಿಯಾಗಾಂಧಿಯವರಿಗೆ ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸಲು ಮನವಿ ಮಾಡಿದ್ದಾರೆ. ನಿನ್ನೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ತೆಲಂಗಾಣ ಕಾಂಗ್ರೆಸ್ ನಿಮ್ಮ ಬಗ್ಗೆ ನಿರ್ಣಯ ಅಂಗೀಕರಿಸಿದ್ದು, ಅದರಲ್ಲಿ ತೆಲಂಗಾಣದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂದು ಗಾಂಧಿ ಅವರಿಗೆ ತಿಳಿಸಿದರು.

ನೀವು ನಮಗೆಲ್ಲಾ ತಾಯಿ ಇದ್ದ ಹಾಗೆ, ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸಬೇಕು: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ
ರೇವಂತ್ ರೆಡ್ಡಿImage Credit source: Deccan Herald
Follow us
|

Updated on:Feb 06, 2024 | 9:26 AM

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ(Revant Reddy) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವಂತೆ  ಸೋನಿಯಾ ಗಾಂಧಿ(Sonia Gandhi)ಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕವು ರಾಜ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ . ತೆಲಂಗಾಣಕ್ಕೆ ರಾಜ್ಯ ಸ್ಥಾನಮಾನ ನೀಡಿದ ತಾಯಿ ಎಂದು ಜನರು ನೋಡುವುದರಿಂದ ರಾಜ್ಯದಿಂದ ಸ್ಪರ್ಧಿಸಲು ವಿನಂತಿಸಲಾಗುತ್ತಿದೆ ಎಂದು ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ರಾಜ್ಯ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರೊಂದಿಗೆ ಆಗಮಿಸಿದ ರೇವಂತ್ ರೆಡ್ಡಿ ಅವರು ತಮ್ಮ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಭರವಸೆಗಳ ಬಗ್ಗೆ ತಿಳಿಸಿದರು.

ಕಾಂಗ್ರೆಸ್‌ನ ಆರು ಚುನಾವಣಾ ‘ಖಾತರಿ’ಗಳಲ್ಲಿ, ಸರ್ಕಾರಿ ಸ್ವಾಮ್ಯದ ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಬಡವರಿಗೆ 10 ಲಕ್ಷ ರೂಪಾಯಿಗಳ ಆರೋಗ್ಯ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಮತ್ತು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂಬ ಇನ್ನೆರಡು ಭರವಸೆಗಳನ್ನು ಶೀಘ್ರದಲ್ಲೇ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ‘ಜಾತಿ ಗಣತಿ’ ನಡೆಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಸಿದ್ಧತೆ ಆರಂಭವಾಗಿದೆ ಎಂದೂ ಅವರು ತಿಳಿಸಿದರು.

ಮತ್ತಷ್ಟು ಓದಿ: ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು (ಒಟ್ಟು 17 ಸ್ಥಾನಗಳ ಪೈಕಿ) ಸ್ಥಾನಗಳನ್ನು ಗೆಲ್ಲಲು ಪಕ್ಷದ ರಾಜ್ಯ ಘಟಕವು ಪ್ರಯತ್ನ ನಡೆಸುತ್ತಿದೆ ಎಂಬುದನ್ನು ಗಮನಿಸಿದ ರೇವಂತ್ ರೆಡ್ಡಿ, ಗುರಿ ಸಾಧಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು. ಏತನ್ಮಧ್ಯೆ, ರೇವಂತ್ ರೆಡ್ಡಿ ಅವರು ರಾಂಚಿಯಲ್ಲಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದರು.

ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ತೆಲಂಗಾಣದಿಂದ ಸ್ಪರ್ಧಿಸುವಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:26 am, Tue, 6 February 24

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್