ನೀವು ನಮಗೆಲ್ಲಾ ತಾಯಿ ಇದ್ದ ಹಾಗೆ, ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸಬೇಕು: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ

ತೆಲಂಗಾಣ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಸೋನಿಯಾಗಾಂಧಿಯವರಿಗೆ ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸಲು ಮನವಿ ಮಾಡಿದ್ದಾರೆ. ನಿನ್ನೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ತೆಲಂಗಾಣ ಕಾಂಗ್ರೆಸ್ ನಿಮ್ಮ ಬಗ್ಗೆ ನಿರ್ಣಯ ಅಂಗೀಕರಿಸಿದ್ದು, ಅದರಲ್ಲಿ ತೆಲಂಗಾಣದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂದು ಗಾಂಧಿ ಅವರಿಗೆ ತಿಳಿಸಿದರು.

ನೀವು ನಮಗೆಲ್ಲಾ ತಾಯಿ ಇದ್ದ ಹಾಗೆ, ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸಬೇಕು: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ
ರೇವಂತ್ ರೆಡ್ಡಿ
Image Credit source: Deccan Herald

Updated on: Feb 06, 2024 | 9:26 AM

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ(Revant Reddy) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವಂತೆ  ಸೋನಿಯಾ ಗಾಂಧಿ(Sonia Gandhi)ಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕವು ರಾಜ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ . ತೆಲಂಗಾಣಕ್ಕೆ ರಾಜ್ಯ ಸ್ಥಾನಮಾನ ನೀಡಿದ ತಾಯಿ ಎಂದು ಜನರು ನೋಡುವುದರಿಂದ ರಾಜ್ಯದಿಂದ ಸ್ಪರ್ಧಿಸಲು ವಿನಂತಿಸಲಾಗುತ್ತಿದೆ ಎಂದು ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ರಾಜ್ಯ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರೊಂದಿಗೆ ಆಗಮಿಸಿದ ರೇವಂತ್ ರೆಡ್ಡಿ ಅವರು ತಮ್ಮ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಭರವಸೆಗಳ ಬಗ್ಗೆ ತಿಳಿಸಿದರು.

ಕಾಂಗ್ರೆಸ್‌ನ ಆರು ಚುನಾವಣಾ ‘ಖಾತರಿ’ಗಳಲ್ಲಿ, ಸರ್ಕಾರಿ ಸ್ವಾಮ್ಯದ ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಬಡವರಿಗೆ 10 ಲಕ್ಷ ರೂಪಾಯಿಗಳ ಆರೋಗ್ಯ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಮತ್ತು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂಬ ಇನ್ನೆರಡು ಭರವಸೆಗಳನ್ನು ಶೀಘ್ರದಲ್ಲೇ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ‘ಜಾತಿ ಗಣತಿ’ ನಡೆಸಲು ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಸಿದ್ಧತೆ ಆರಂಭವಾಗಿದೆ ಎಂದೂ ಅವರು ತಿಳಿಸಿದರು.

ಮತ್ತಷ್ಟು ಓದಿ: ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು (ಒಟ್ಟು 17 ಸ್ಥಾನಗಳ ಪೈಕಿ) ಸ್ಥಾನಗಳನ್ನು ಗೆಲ್ಲಲು ಪಕ್ಷದ ರಾಜ್ಯ ಘಟಕವು ಪ್ರಯತ್ನ ನಡೆಸುತ್ತಿದೆ ಎಂಬುದನ್ನು ಗಮನಿಸಿದ ರೇವಂತ್ ರೆಡ್ಡಿ, ಗುರಿ ಸಾಧಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಏತನ್ಮಧ್ಯೆ, ರೇವಂತ್ ರೆಡ್ಡಿ ಅವರು ರಾಂಚಿಯಲ್ಲಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದರು.

ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ತೆಲಂಗಾಣದಿಂದ ಸ್ಪರ್ಧಿಸುವಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

Published On - 9:26 am, Tue, 6 February 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us