AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಿಜೋರಾಂ ಕ್ರೀಡಾ ಸಚಿವ !

ಮಿಜೋರಾಂ ಪ್ರತಿ ಚದರ ಮೀಟರ್​ಗೆ 52 ಜನರಂತೆ ಜನಸಂಖ್ಯಾ ಸಾಂದ್ರತೆ ಹೊಂದಿದೆ. ಇದು ರಾಷ್ಟ್ರೀಯ ಸರಾಸರಿ (380 ಇರಬೇಕು)ಗಿಂತ ತುಂಬ ಕಡಿಮೆ. ಮಿಜೋರಾಂನಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿರುವುದು ಹಲವು ದಿನಗಳಿಂದಲೂ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ರಾಬರ್ಟ್ ತಿಳಿಸಿದ್ದಾರೆ.

ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಿಜೋರಾಂ ಕ್ರೀಡಾ ಸಚಿವ !
ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ
TV9 Web
| Edited By: |

Updated on: Jun 22, 2021 | 5:48 PM

Share

ಅಸ್ಸಾಂ ಮತ್ತು ಉತ್ತರ ಪ್ರದೇಶ ಸೇರಿ ಕೆಲವು ರಾಜ್ಯಗಳು ನಿಧಾನವಾಗಿ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೇ ಮಿಜೋರಾಂ ಇದರ ವಿರುದ್ಧವಾಗಿ ಹೆಜ್ಜೆ ಇಡುತ್ತಿದೆ. ಅತ್ಯಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 1 ಲಕ್ಷ ರೂ.ಬಹುಮಾನ ಕೊಡುವುದಾಗಿ ಮಿಜೋರಾಂ ಸಚಿವರೊಬ್ಬರು ಘೋಷಣೆ ಮಾಡಿದ್ದಾರೆ. ಹಾಗಂತ ಇದು ಸದ್ಯಕ್ಕೇನೂ ಇಡೀ ರಾಜ್ಯಕ್ಕೆ ಅನ್ವಯ ಆಗಿಲ್ಲ. ತಮ್ಮ ಕ್ಷೇತ್ರದಲ್ಲಿ ಮಾತ್ರ ಅನ್ವಯಿಸಿದ್ದಾರೆ.

ಅಪ್ಪನ ದಿನಾಚರಣೆ ಸಂದರ್ಭದಲ್ಲಿ ಮಿಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಘೋಷಣೆ ಮಾಡಿದ್ದಾರೆ. ಇವರು ಐಜಾಲ್​ ಪೂರ್ವ-2 ಕ್ಷೇತ್ರದ ಶಾಸಕರಾಗಿದ್ದಾರೆ. ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ತುಂಬು ಕುಟುಂಬವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಘೋಷಣೆ ಮಾಡಿದ್ದಾಗಿ ತಿಳಿಸಿದ್ದಾರೆ. ಹಾಗೇ, 1 ಲಕ್ಷ ರೂ.ಬಹುಮಾನ ಪಡೆಯಲು ನಿರ್ದಿಷ್ಟವಾಗಿ ಎಷ್ಟು ಮಕ್ಕಳನ್ನು ಹೊಂದಿರಬೇಕು ಎಂಬುದನ್ನೇನೂ ಅವರು ಸ್ಪಷ್ಟಪಡಿಸಲಿಲ್ಲ.

ಮಿಜೋರಾಂ ಪ್ರತಿ ಚದರ ಮೀಟರ್​ಗೆ 52 ಜನರಂತೆ ಜನಸಂಖ್ಯಾ ಸಾಂದ್ರತೆ ಹೊಂದಿದೆ. ಇದು ರಾಷ್ಟ್ರೀಯ ಸರಾಸರಿ (380 ಇರಬೇಕು)ಗಿಂತ ತುಂಬ ಕಡಿಮೆ. ಮಿಜೋರಾಂನಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿರುವುದು ಹಲವು ದಿನಗಳಿಂದಲೂ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ರಾಬರ್ಟ್ ತಿಳಿಸಿದ್ದಾರೆ. ಹಾಗೇ ಬಹುಮಾನವನ್ನು ತನ್ನ ಮಗನ ಒಡೆತನದ ಈಶಾನ್ಯ ಕನ್ಸಲ್ಟೆನ್ಸಿ ಸರ್ವೀಸ್​ ಪ್ರಾಯೋಜಿಸಲಿದೆ ಎಂದೂ ಹೇಳಿದ್ದಾರೆ. ಇನ್ನೊಂದೆಡೆ ಅಸ್ಸಾಂ, ಉತ್ತರ ಪ್ರದೇಶದಂಥ ಕೆಲವು ರಾಜ್ಯಗಳು ಜನಸಂಖ್ಯೆ ನಿಯಂತ್ರಣಕ್ಕಾಗಿ ಎರಡು ಮಕ್ಕಳ ನೀತಿಯನ್ನು ಅಳವಡಿಸುತ್ತಿವೆ. ಇನ್ನು ಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರಿ ಸೌಲಭ್ಯಗಳಲ್ಲಿ ಕಡಿತ ಮಾಡಲಾಗುವುದು ಎಂಬಂಥ ಕಾನೂನನ್ನು ತರುತ್ತಿವೆ.

ಇದನ್ನೂ ಓದಿ: ಸ್ವದೇಶಿ ಕೊವ್ಯಾಕ್ಸಿನ್ ಲಸಿಕೆ ಪ್ರಭಾವ ಇಳಿಕೆಯಾಗಿದೆ: ಡಿಸಿಜಿಐ ಅಂತಿಮ ಡಾಟಾ ಏನು ಹೇಳುತ್ತದೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ