AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಿಜೋರಾಂ ಕ್ರೀಡಾ ಸಚಿವ !

ಮಿಜೋರಾಂ ಪ್ರತಿ ಚದರ ಮೀಟರ್​ಗೆ 52 ಜನರಂತೆ ಜನಸಂಖ್ಯಾ ಸಾಂದ್ರತೆ ಹೊಂದಿದೆ. ಇದು ರಾಷ್ಟ್ರೀಯ ಸರಾಸರಿ (380 ಇರಬೇಕು)ಗಿಂತ ತುಂಬ ಕಡಿಮೆ. ಮಿಜೋರಾಂನಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿರುವುದು ಹಲವು ದಿನಗಳಿಂದಲೂ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ರಾಬರ್ಟ್ ತಿಳಿಸಿದ್ದಾರೆ.

ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಿಜೋರಾಂ ಕ್ರೀಡಾ ಸಚಿವ !
ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ
TV9 Web
| Edited By: |

Updated on: Jun 22, 2021 | 5:48 PM

Share

ಅಸ್ಸಾಂ ಮತ್ತು ಉತ್ತರ ಪ್ರದೇಶ ಸೇರಿ ಕೆಲವು ರಾಜ್ಯಗಳು ನಿಧಾನವಾಗಿ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೇ ಮಿಜೋರಾಂ ಇದರ ವಿರುದ್ಧವಾಗಿ ಹೆಜ್ಜೆ ಇಡುತ್ತಿದೆ. ಅತ್ಯಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 1 ಲಕ್ಷ ರೂ.ಬಹುಮಾನ ಕೊಡುವುದಾಗಿ ಮಿಜೋರಾಂ ಸಚಿವರೊಬ್ಬರು ಘೋಷಣೆ ಮಾಡಿದ್ದಾರೆ. ಹಾಗಂತ ಇದು ಸದ್ಯಕ್ಕೇನೂ ಇಡೀ ರಾಜ್ಯಕ್ಕೆ ಅನ್ವಯ ಆಗಿಲ್ಲ. ತಮ್ಮ ಕ್ಷೇತ್ರದಲ್ಲಿ ಮಾತ್ರ ಅನ್ವಯಿಸಿದ್ದಾರೆ.

ಅಪ್ಪನ ದಿನಾಚರಣೆ ಸಂದರ್ಭದಲ್ಲಿ ಮಿಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಘೋಷಣೆ ಮಾಡಿದ್ದಾರೆ. ಇವರು ಐಜಾಲ್​ ಪೂರ್ವ-2 ಕ್ಷೇತ್ರದ ಶಾಸಕರಾಗಿದ್ದಾರೆ. ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ತುಂಬು ಕುಟುಂಬವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಘೋಷಣೆ ಮಾಡಿದ್ದಾಗಿ ತಿಳಿಸಿದ್ದಾರೆ. ಹಾಗೇ, 1 ಲಕ್ಷ ರೂ.ಬಹುಮಾನ ಪಡೆಯಲು ನಿರ್ದಿಷ್ಟವಾಗಿ ಎಷ್ಟು ಮಕ್ಕಳನ್ನು ಹೊಂದಿರಬೇಕು ಎಂಬುದನ್ನೇನೂ ಅವರು ಸ್ಪಷ್ಟಪಡಿಸಲಿಲ್ಲ.

ಮಿಜೋರಾಂ ಪ್ರತಿ ಚದರ ಮೀಟರ್​ಗೆ 52 ಜನರಂತೆ ಜನಸಂಖ್ಯಾ ಸಾಂದ್ರತೆ ಹೊಂದಿದೆ. ಇದು ರಾಷ್ಟ್ರೀಯ ಸರಾಸರಿ (380 ಇರಬೇಕು)ಗಿಂತ ತುಂಬ ಕಡಿಮೆ. ಮಿಜೋರಾಂನಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಿರುವುದು ಹಲವು ದಿನಗಳಿಂದಲೂ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ರಾಬರ್ಟ್ ತಿಳಿಸಿದ್ದಾರೆ. ಹಾಗೇ ಬಹುಮಾನವನ್ನು ತನ್ನ ಮಗನ ಒಡೆತನದ ಈಶಾನ್ಯ ಕನ್ಸಲ್ಟೆನ್ಸಿ ಸರ್ವೀಸ್​ ಪ್ರಾಯೋಜಿಸಲಿದೆ ಎಂದೂ ಹೇಳಿದ್ದಾರೆ. ಇನ್ನೊಂದೆಡೆ ಅಸ್ಸಾಂ, ಉತ್ತರ ಪ್ರದೇಶದಂಥ ಕೆಲವು ರಾಜ್ಯಗಳು ಜನಸಂಖ್ಯೆ ನಿಯಂತ್ರಣಕ್ಕಾಗಿ ಎರಡು ಮಕ್ಕಳ ನೀತಿಯನ್ನು ಅಳವಡಿಸುತ್ತಿವೆ. ಇನ್ನು ಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರಿ ಸೌಲಭ್ಯಗಳಲ್ಲಿ ಕಡಿತ ಮಾಡಲಾಗುವುದು ಎಂಬಂಥ ಕಾನೂನನ್ನು ತರುತ್ತಿವೆ.

ಇದನ್ನೂ ಓದಿ: ಸ್ವದೇಶಿ ಕೊವ್ಯಾಕ್ಸಿನ್ ಲಸಿಕೆ ಪ್ರಭಾವ ಇಳಿಕೆಯಾಗಿದೆ: ಡಿಸಿಜಿಐ ಅಂತಿಮ ಡಾಟಾ ಏನು ಹೇಳುತ್ತದೆ?

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ