ಆರ್​ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆದಿಲ್ವಾ? ಸಿಎಫ್​ಎಸ್​ಎಲ್​ ವರದಿ ಹೇಳೋದೇನು?

ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣವು ಇಡೀ ದೇಶವನ್ನೇ ಆತಂಕಕ್ಕೆ ದೂಡಿತ್ತು, ಸಾಕಷ್ಟು ಪ್ರತಿಭಟನೆಗಳು ಕೂಡ ನಡೆದಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸರ ವಿಶೇಷ ತನಿಖಾ ತಂಡ ಮತ್ತು ನಂತರ ಸಿಬಿಐ ತನಿಖೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಆರ್​ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆದಿಲ್ವಾ? ಸಿಎಫ್​ಎಸ್​ಎಲ್​ ವರದಿ ಹೇಳೋದೇನು?
ಪ್ರತಿಭಟನೆ-ಸಾಂದರ್ಭಿಕ ಚಿತ್ರ
Image Credit source: The Indian Express

Updated on: Dec 24, 2024 | 12:19 PM

ಕೋಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಿಎಫ್​ಎಸ್​ಎಲ್​ ವರದಿ ಮತ್ತೊಂದು ತಿರುವು ನೀಡಿದೆ. ಅಂದು ಅತ್ಯಾಚಾರ ನಡೆದಿದೆ ಎನ್ನಲಾದ ಸ್ಥಳದಲ್ಲಿ, ವೈದ್ಯೆ ನರಳಿರುವ, ಅಥವಾ ಆರೋಪಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿರುವ ಯಾವುದೇ ಕುರುಹಿಲ್ಲ ಎಂಬುದು ತಿಳಿದುಬಂದಿದೆ.
ಆಗಸ್ಟ್ 9 ರಂದು ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯರ ಶವ ಪತ್ತೆಯಾಗಿದ್ದು , ಇದು ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಆರೋಗ್ಯ ವೃತ್ತಿಪರರಿಂದ ವಾರಗಳ ಪ್ರತಿಭಟನೆಗೆ ಕಾರಣವಾಯಿತು. ಆರೋಪಿ ಸಂಜಯ್ ರಾಯ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.

ದೆಹಲಿಯ ಸಿಎಫ್‌ಎಸ್‌ಎಲ್‌ನ ತಜ್ಞರು ಆಗಸ್ಟ್ 14 ರಂದು ಆಸ್ಪತ್ರೆಯ ಆವರಣವನ್ನು ಪರಿಶೀಲಿಸಿದರು, ಪ್ರಶಿಕ್ಷಣಾರ್ಥಿ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾದ ಸೆಮಿನಾರ್ ಹಾಲ್‌ನಲ್ಲಿನ ಮರದ ಸ್ಟೇಜ್ ಹಾಸಿಗೆ ಸೇರಿದಂತೆ ಅಪರಾಧ ನಡೆದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದರು.

ಸೆಮಿನಾರ್ ಹಾಲ್​ನಲ್ಲೇ ಅಪರಾಧ ಎಸಗಲಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಬೇರೆಲ್ಲಾದರೂ ಕೊಲೆ ಮಾಡಿ ಆ ಪ್ರದೇಶಕ್ಕೆ ತಂದು ಎಸೆದಿರಬಹುದು ಎಂದು ಹೇಳಲಾಗುತ್ತಿದೆ.

ಆರೋಪಿ ಸೆಮಿನಾರ್ ಹಾಲ್​ಗೆ ಯಾರಿಗೂ ಗೊತ್ತಾಗದಂತೆ ಪ್ರವೇಶಿಸುವುದು ಅಸಂಭವ. ಘಟನೆಯ ನಂತರ ಘೋಷ್ ಅವರು ಆಗಸ್ಟ್ 12 ರಂದು ಸರ್ಕಾರಿ ಸಂಸ್ಥೆಯ ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಮತ್ತಷ್ಟು ಓದಿ: ಆರ್ ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಕೊಲೆ ಪ್ರಕರಣ: ಸಂಜಯ್ ರಾಯ್ ವಿರುದ್ಧ ಸಿಬಿಐ ಚಾರ್ಜ್ ಶೀಟ್

ಕೇಂದ್ರೀಯ ವಿಧಿವಿಜ್ಞಾನ ಸಂಶೋಧನಾ ಪ್ರಯೋಗಾಲಯ (ಸಿಎಫ್‌ಎಸ್‌ಎಲ್) ವರದಿಯು ಘಟನಾ ಸ್ಥಳದಲ್ಲಿ ಮೃತರು ಮತ್ತು ದಾಳಿಕೋರ ನಡುವೆ ಯಾವುದೇ ಗಲಾಟೆ ಅಥವಾ ಹಲ್ಲೆ ನಡೆದಿರುವ ಲಕ್ಷಣಗಳು ಕಾಣುತ್ತಿಲ್ಲ ಎಂದಿದ್ದಾರೆ.
ಸೆಮಿನಾರ್ ಕೊಠಡಿಯಲ್ಲಿಯೇ ಕಿರಿಯ ವೈದ್ಯರನ್ನು ಕೊಲೆ ಮಾಡಿ ಮತ್ತು ಹಲ್ಲೆ ಮಾಡಲಾಗಿದೆ ಎಂದು ವರದಿ ಮಾಡಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Tue, 24 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us