AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಸಂಜಯ್ ರಾಯ್ ಅಪರಾಧಿ ಎಂದು ಸಾಬೀತು

ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಜಯ್ ರಾಯ್ ಅಪರಾಧಿ ಎಂದು ಸಾಬೀತಾಗಿದೆ. ಕೊಲ್ಕತ್ತಾದ ಸ್ಥಳೀಯ ನ್ಯಾಯಾಲಯವು 33 ವರ್ಷದ ಸಂಜಯ್ ರಾಯ್​ನನ್ನು ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಘೋಷಿಸಿದೆ. ಕಳೆದ ವರ್ಷ ದೇಶವನ್ನು ಬೆಚ್ಚಿಬೀಳಿಸಿದ್ದ ಈ ಕ್ರೂರ ಘಟನೆಗೆ ಸೋಮವಾರ ಶಿಕ್ಷೆ ವಿಧಿಸಲಾಗುವುದು.

ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಸಂಜಯ್ ರಾಯ್ ಅಪರಾಧಿ ಎಂದು ಸಾಬೀತು
Sanjay Roy
ಸುಷ್ಮಾ ಚಕ್ರೆ
|

Updated on: Jan 18, 2025 | 4:57 PM

Share

ಕೊಲ್ಕತ್ತಾ: ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ವರ್ಷ 31 ವರ್ಷದ ಟ್ರೈನಿ ವೈದ್ಯೆ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಜಯ್ ರಾಯ್ ತಪ್ಪಿತಸ್ಥನೆಂದು ನ್ಯಾಯಾಲಯ ಘೋಷಿಸಿದೆ. 2024ರ ಆಗಸ್ಟ್ 9ರಂದು ನಡೆದ ವೈದ್ಯೆಯ ದುರಂತ ಸಾವು ಇಡೀ ದೇಶವನ್ನು ತಲ್ಲಣಗೊಳಿಸಿತ್ತು. ಈ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆ ನಡೆಸಿದ್ದರು. ಈ ಘಟನೆಯು ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಸಾಮೂಹಿಕ ಪ್ರತಿಭಟನೆಗೆ ಕಾರಣವಾಯಿತು. ನ್ಯಾಯಕ್ಕಾಗಿ ಒತ್ತಾಯಿಸಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಹೆಚ್ಚಿನ ಭದ್ರತೆಯನ್ನು ನೀಡುವಂತೆ ಒತ್ತಾಯಿಸಲಾಗಿತ್ತು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅಧ್ಯಕ್ಷತೆಯಲ್ಲಿ ಸೀಲ್ಡಾ ನ್ಯಾಯಾಲಯವು ಸಂಜಯ್ ರಾಯ್ ತಪ್ಪಿತಸ್ಥ ಎಂದು ತನ್ನ ತೀರ್ಪು ನೀಡಿತು. ಆತ ಅಪರಾಧಿ ಎಂದು ಘೋಷಿಸಲಾಗಿದ್ದರೂ ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಲಾಗುವುದು. ಆದರೆ, ಸಂಜಯ್ ರಾಯ್ ನ್ಯಾಯಾಲಯದಲ್ಲಿ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದರು. ನ್ಯಾಯಾಲಯದ ಕೋಣೆಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು. ಸುಮಾರು 300 ಸಿಬ್ಬಂದಿಯನ್ನು ಸುರಕ್ಷತೆಗಾಗಿ ನಿಯೋಜಿಸಲಾಗಿತ್ತು. ಇದು ಈ ಪ್ರಕರಣದ ಹೆಚ್ಚಿನ ಅಪಾಯದ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ.

ಇದನ್ನೂ ಓದಿ: ಆರ್​ಜಿ ಕರ್ ಹತ್ಯೆ; ತಿಲೋತ್ತಮ ಎದೆ ಮೇಲೆ ಕಚ್ಚಿದ ಗುರುತು, ಗುಪ್ತಾಂಗದಲ್ಲಿ ಇನ್ನೊಂದು ಮಹಿಳೆಯ ಡಿಎನ್​ಎ ಪತ್ತೆ

ಆಗಸ್ಟ್​ 9ರಂದು ಆರ್​ಜಿ ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಶವವು ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿತ್ತು. ಭೀಕರವಾಗಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ತನಿಖೆಯನ್ನು ಕೋಲ್ಕತ್ತಾ ಪೊಲೀಸರು ನಡೆಸಿದ್ದರು. ಆದರೆ ಕೊಲ್ಕತ್ತಾ ಹೈಕೋರ್ಟ್‌ನ ಹಸ್ತಕ್ಷೇಪದ ನಂತರ, ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಗೆ ವರ್ಗಾಯಿಸಲಾಯಿತು. ಸಿಬಿಐ ತನಿಖೆಯನ್ನು ಪೂರ್ಣಗೊಳಿಸಿ 45 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತು. ಅಪರಾಧಿಯಾಗಿ ಸಂಜಯ್ ರಾಯ್ ಪಾತ್ರವನ್ನು ಗಟ್ಟಿಗೊಳಿಸಲು 11 ಪ್ರಮುಖ ಪುರಾವೆಗಳನ್ನು ಮಂಡಿಸುವ ಮೂಲಕ ಸಿಬಿಐ ಆತನಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ