AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಯುದ್ಧ ಮಾಡಿ, ಜತೆಗೆ ನಾವಿದ್ದೇವೆ ಎಂಬ ಘೋಷಣೆ ಕೂಗಿ ರಷ್ಯಾವನ್ನು ಬೆಂಬಲಿಸಿ ಮೆರವಣಿಗೆ ನಡೆಸಿದ ಹಿಂದೂ ಸೇನಾ

ನಮ್ಮ ನಾಗರಿಕರನ್ನು ರಕ್ಷಿಸಿ ಮತ್ತು ಯಾವಾಗಲೂ ಪಾಕಿಸ್ತಾನವನ್ನು ಬೆಂಬಲಿಸುವ ಮತ್ತು ನಮ್ಮ ಪರಮಾಣು ಕಾರ್ಯಕ್ರಮದ ವಿರುದ್ಧ ಮತ ಚಲಾಯಿಸಿದ ಫ್ಯಾಸಿಸ್ಟ್, ಜನಾಂಗೀಯ ಉಕ್ರೇನ್ ವಿರುದ್ಧ ರಷ್ಯಾವನ್ನು ಬೆಂಬಲಿಸುತ್ತೇವೆ ಎಂದ ಹಿಂದೂ ಸೇನಾ.

ನೀವು ಯುದ್ಧ ಮಾಡಿ, ಜತೆಗೆ ನಾವಿದ್ದೇವೆ ಎಂಬ ಘೋಷಣೆ ಕೂಗಿ ರಷ್ಯಾವನ್ನು ಬೆಂಬಲಿಸಿ ಮೆರವಣಿಗೆ ನಡೆಸಿದ ಹಿಂದೂ ಸೇನಾ
ಹಿಂದೂ ಸೇನಾ ನಡೆಸಿದ ಮೆರವಣಿಗೆ
TV9 Web
| Edited By: |

Updated on: Mar 06, 2022 | 7:44 PM

Share

ದೆಹಲಿ: ಬಲಪಂಥೀಯ ಸಂಘಟನೆಯಾದ ಹಿಂದೂ ಸೇನಾದ (Hindu Sena) ಸ್ವಯಂಸೇವಕರು ಭಾನುವಾರ ಮಧ್ಯ ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ರಷ್ಯಾವನ್ನು(Russia) ಬೆಂಬಲಿಸುವ ಘೋಷಣೆಗಳನ್ನು ಕೂಗಿ ಮೆರವಣಿಗೆ ನಡೆಸಿದರು.‘ರಷ್ಯಾ ತುಮ್ ಸಂಘರ್ಷ್ ಕರೋ, ಹಮ್ ತುಮ್ಹಾರೆ ಸಾಥ್ ಹೈ (ರಷ್ಯಾ ನೀವು ಯುದ್ಧಮಾಡಿ, ನಾವು ನಿಮ್ಮೊಂದಿಗೆ ಇದ್ದೇವೆ)’, ‘ಭಾರತ್ ಮಾತಾ ಕಿ ಜೈ’, ‘ಭಾರತ್-ರಷ್ಯಾ ದೋಸ್ತಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಾ ಸ್ವಯಂಸೇವಕರು ಸುಮಾರು ಒಂದು ಗಂಟೆ ಕಾಲ ಮೆರವಣಿಗೆ ನಡೆಸಿದರು.  ಹಿಂದೂ ಸೇನಾದ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಮಾತನಾಡಿ, “ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ನಿಲುವಿನ ಬಗ್ಗೆ ಹೇಳುವುದಿಲ್ಲ, ಭಾರತವು ಗೈರುಹಾಜರಾಗುವುದಕ್ಕಿಂತ ಹೆಚ್ಚಾಗಿ ರಷ್ಯಾ ಪರವಾಗಿ ಮತ ಚಲಾಯಿಸಿ ನಮ್ಮ ಬೂಟುಗಳನ್ನು ನೆಲದ ಮೇಲೆ ಇಡಬೇಕಿತ್ತು ಎಂದು ನಾವು ವೈಯಕ್ತಿಕವಾಗಿ ಭಾವಿಸುತ್ತೇವೆ. ನಮ್ಮ ನಾಗರಿಕರನ್ನು ರಕ್ಷಿಸಿ ಮತ್ತು ಯಾವಾಗಲೂ ಪಾಕಿಸ್ತಾನವನ್ನು ಬೆಂಬಲಿಸುವ ಮತ್ತು ನಮ್ಮ ಪರಮಾಣು ಕಾರ್ಯಕ್ರಮದ ವಿರುದ್ಧ ಮತ ಚಲಾಯಿಸಿದ ಫ್ಯಾಸಿಸ್ಟ್, ಜನಾಂಗೀಯ ಉಕ್ರೇನ್ ವಿರುದ್ಧ ರಷ್ಯಾವನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ.  “ಯಾವುದೇ ಯುದ್ಧ ಒಳ್ಳೆಯದಲ್ಲ, ಆದರೆ ನಾವು ಒಳ್ಳೆಯದು ಮತ್ತು ಉತ್ತಮವಾದವುಗಳ ನಡುವೆ ಆಯ್ಕೆ ಮಾಡಬೇಕಾದರೆ, ನಾವು ರಷ್ಯಾದ ಬೆಂಬಲಕ್ಕೆ ನಿಲ್ಲುತ್ತೇವೆ, ಏಕೆಂದರೆ ರಷ್ಯಾ ಯಾವಾಗಲೂ ಭಾರತದ ನಿಜವಾದ ಸ್ನೇಹಿತ” ಎಂದು ಅವರು ಹೇಳಿದರು. ಪ್ರತಿಭಟನೆಗೆ ಪೂರ್ವಾನುಮತಿ ಪಡೆಯದ ಕಾರಣ ಒಂದು ಪೊಲೀಸರು ಅವರನ್ನು ಚದುರಿಸಿದರು.

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮತ್ತು “ಅಖಂಡ ರಷ್ಯಾ”ಕ್ಕೆ ಬೆಂಬಲವನ್ನು ಘೋಷಿಸುವ ಮೂಲಕ ಹಿಂದೂ ಸೇನಾ ಈ ಹಿಂದೆ ನವದೆಹಲಿಯ ಮಂಡಿ ಹೌಸ್‌ನಲ್ಲಿರುವ ರಷ್ಯಾದ ಬರಹಗಾರ ಅಲೆಕ್ಸಾಂಡರ್ ಪುಷ್ಕಿನ್ ಅವರ ಪ್ರತಿಮೆಯ ಮೇಲೆ ಪೋಸ್ಟರ್‌ಗಳನ್ನು ಹಾಕಿತ್ತು.

ಇದನ್ನೂ ಓದಿ: ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಿದ್ದು ಚುನಾವಣೆ ಮೇಲೆ ಧನಾತ್ಮಕ ಪರಿಣಾಮ ಬೀರಲಿದೆ: ಅಮಿತ್ ಶಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ