AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕಿತಾ ಭಂಡಾರಿ ಕೊಲೆ ಪ್ರಕರಣ; ಹೃಷಿಕೇಶದ ರೆಸಾರ್ಟ್ ಮಾಲೀಕ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಉತ್ತರಾಖಂಡದ ರೆಸಾರ್ಟ್ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಉತ್ತರಾಖಂಡದ ಕೋಟ್ವಾರ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಂಕಿತಾ ಪೌರಿ ಜಿಲ್ಲೆಯ ನಿವಾಸಿಯಾಗಿದ್ದು, ಹೃಷಿಕೇಶದ ವನಂತರಾ ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಅತಿಥಿಗಳಿಗೆ ಹೆಚ್ಚುವರಿ ಸೇವೆ ನೀಡಲು ನಿರಾಕರಿಸಿದಾಗ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಆಕೆಯನ್ನು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಕಿತಾ ಭಂಡಾರಿ ಕೊಲೆ ಪ್ರಕರಣ; ಹೃಷಿಕೇಶದ ರೆಸಾರ್ಟ್ ಮಾಲೀಕ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ
Ankita Bhandari
ಸುಷ್ಮಾ ಚಕ್ರೆ
|

Updated on: May 30, 2025 | 3:14 PM

Share

ಡೆಹ್ರಾಡೂನ್, ಮೇ 30: ಸೆಪ್ಟೆಂಬರ್ 2022ರಿಂದ ದೇಶದ ಗಮನ ಸೆಳೆದಿರುವ ಹೈಪ್ರೊಫೈಲ್ ಅಂಕಿತಾ ಭಂಡಾರಿ (Ankita Bhandari) ಕೊಲೆ ಪ್ರಕರಣದಲ್ಲಿ ಕೋಟ್‌ದ್ವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಂದು (ಮೇ 30) ತನ್ನ ತೀರ್ಪು ಪ್ರಕಟಿಸಿದೆ. 2022ರಲ್ಲಿ 19 ವರ್ಷದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರ ಕೊಲೆಗೆ ಸಂಬಂಧಿಸಿದಂತೆ ಉತ್ತರಾಖಂಡದ ರೆಸಾರ್ಟ್ ಮಾಲೀಕ, ಇಬ್ಬರು ಉದ್ಯೋಗಿಗಳು ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ.

ಇಂದು ಕೋಟ್‌ದ್ವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಈ ಪ್ರಕರಣದ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದರು. ಇದಲ್ಲದೆ, ಮೃತ ಯುವತಿ ಅಂಕಿತಾ ಭಂಡಾರಿ ಅವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮೂವರಿಗೆ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ
Image
ನಮ್ಮ ಪ್ಲಾನ್​ಗೂ ಮೊದಲೇ ಭಾರತ ಬ್ರಹ್ಮೋಸ್ ದಾಳಿ ನಡೆಸಿತ್ತು; ಪಾಕ್ ಪ್ರಧಾನಿ
Image
ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?
Image
ಜಿಮ್ ಡಂಬಲ್​​ನಿಂದ ಹೆಂಡತಿಯ ತಲೆ ಜಜ್ಜಿದ ಗಂಡ: ತಾನೂ ಆತ್ಮಹತ್ಯೆಗೆ ಶರಣು
Image
ಕೊಲೆ ಮಾಡಿ, ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ

ಅಂಕಿತಾ ಅವರ ವಕೀಲ ಅಜಯ್ ಪಂತ್ ಈ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದು, “ಅಂಕಿತಾಳ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ತಪ್ಪಿತಸ್ಥರೆಂದು ಉತ್ತರಾಖಂಡದ ಕೋಟ್ದ್ವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ್​​ನ ರೆಸಾರ್ಟ್​​​ನಲ್ಲಿ ಯುವತಿಯ ಹತ್ಯೆ ಪ್ರಕರಣ: ಬಿಜೆಪಿ ನಾಯಕನ ಪುತ್ರ ಬಂಧನ

ಈ ಕೊಲೆಗೆ ಸಂಬಂಧಿಸಿದ ವಿಷಯಗಳು ಬಿಜೆಪಿ ನಾಯಕ ಮತ್ತು ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಅವರ ಪುತ್ರನೊಂದಿಗೆ ಸಂಬಂಧ ಹೊಂದಿವೆ ಎಂದು ಈ ಹಿಂದೆ ಆರೋಪಿಸಲಾಗಿತ್ತು.

ಅಂಕಿತಾ ಭಂಡಾರಿ ಯಾರು?:

ಪೌರಿ ಜಿಲ್ಲೆಯ ನಿವಾಸಿ ಅಂಕಿತಾ ಭಂಡಾರಿ ಹೃಷಿಕೇಶದ ವನಂತರಾ ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಮತ್ತು ಅವರ ಸಹಚರರಾದ ಸೌರಭ್ ಭಾಸ್ಕರ್ ಮತ್ತು ಅಂಕಿತ್ ವಿಐಪಿ ಅತಿಥಿಗೆ ಹೆಚ್ಚುವರಿ ಸೇವೆಗಳನ್ನು ನೀಡುವಂತೆ ಒತ್ತಡ ಹೇರಿದಾಗ ಅದಕ್ಕೆ ವಿರೋಧಿಸಿದ ಅಂಕಿತಾ ಅವರನ್ನು ಬ್ಯಾರೇಜ್‌ಗೆ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಸರಣಿ ಕೊಲೆ: ಐಪಿಎಸ್ ಅಧಿಕಾರಿಗಳ ಎತ್ತಂಗಡಿ, ಹೊಸಬರ ನೇಮಕ

ಅಂಕಿತಾ ಅವರನ್ನು ಪುಲ್ಕಿತ್ ಆರ್ಯ ಮತ್ತು ಅವರ ಸ್ನೇಹಿತರಾದ ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ಸೆಪ್ಟೆಂಬರ್ 18, 2022ರಂದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಂಕಿತಾ ಭಂಡಾರಿಯ ಶವವನ್ನು ಸೆಪ್ಟೆಂಬರ್ 24ರಂದು ಋಷಿಕೇಶದ ಚಿಲ್ಲಾ ಕಾಲುವೆಯಿಂದ ಹೊರಗೆ ತೆಗೆಯಲಾಯಿತು. ಅಧಿಕಾರಿಗಳು ಅವರ ಶವವನ್ನು ಪತ್ತೆಹಚ್ಚುವ ಮೊದಲು 6 ದಿನಗಳ ಕಾಲ ಆಕೆ ಕಾಣೆಯಾಗಿದ್ದರು. ಉಪ ಪೊಲೀಸ್ ಮಹಾನಿರ್ದೇಶಕ ಪಿ ರೇಣುಕಾ ದೇವಿ ನೇತೃತ್ವದ ಎಸ್‌ಐಟಿ ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿತು.

ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಪುಲ್ಕಿತ್ ಆರ್ಯ ಅವರ ತಂದೆ ವಿನೋದ್ ಆರ್ಯ ಬಿಜೆಪಿ ನಾಯಕರಾಗಿದ್ದು, ಅವರ ಮಗನ ಹೆಸರು ಕೊಲೆಯ ಪ್ರಮುಖ ಆರೋಪಿಯಾಗಿ ಕೇಳಿಬಂದ ತಕ್ಷಣ ಅವರನ್ನು ಪಕ್ಷದಿಂದ ಹೊರಹಾಕಲಾಯಿತು. ಅಂಕಿತಾ ಅವರ ಮೃತದೇಹವನ್ನು ಅವರ ಕೊಲೆಯಾದ ಕೆಲವು ದಿನಗಳ ನಂತರ ರೆಸಾರ್ಟ್ ಬಳಿಯ ಚಿಲ್ಲಾ ಬ್ಯಾರೇಜ್‌ನಿಂದ ವಶಪಡಿಸಿಕೊಳ್ಳಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ