AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿಯುತ್ತಿದ್ದಂತೆ ಇಂಧನ ಬೆಲೆ ಏರಿಕೆ ಬಗ್ಗೆ ಸ್ಮೃತಿ ಇರಾನಿಯಲ್ಲಿ ಪ್ರಶ್ನೆ ಕೇಳಿದ ಕಾಂಗ್ರೆಸ್ ನಾಯಕಿ; ಹೇಗಿತ್ತು ಪ್ರತಿಕ್ರಿಯೆ?

ಮೋದಿಯವರ ಸಚಿವೆ ಸ್ಮೃತಿ ಇರಾನಿ ಗುವಾಹಟಿಗೆ ಹೋಗುವ ಮಾರ್ಗದಲ್ಲಿ ಮುಖಾಮುಖಿಯಾದರು. ಎಲ್‌ಪಿಜಿಯ ಏರುತ್ತಿರುವ ಬೆಲೆಗಳ ಬಗ್ಗೆ ಕೇಳಿದಾಗ, ಅವರು ಲಸಿಕೆಗಳು, ಪಡಿತರ ಮತ್ತು ಬಡವರನ್ನೂ ದೂಷಿಸಿದರು.ವಿಡಿಯೊದಲ್ಲಿ ಅವರು ಸಾಮಾನ್ಯ ಜನರ ದುಃಖಕ್ಕೆ ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ನೋಡಿ...

ವಿಮಾನ ಇಳಿಯುತ್ತಿದ್ದಂತೆ ಇಂಧನ ಬೆಲೆ ಏರಿಕೆ ಬಗ್ಗೆ ಸ್ಮೃತಿ ಇರಾನಿಯಲ್ಲಿ ಪ್ರಶ್ನೆ ಕೇಳಿದ ಕಾಂಗ್ರೆಸ್ ನಾಯಕಿ; ಹೇಗಿತ್ತು ಪ್ರತಿಕ್ರಿಯೆ?
ಸ್ಮೃತಿ ಇರಾನಿ
TV9 Web
| Edited By: |

Updated on: Apr 10, 2022 | 4:40 PM

Share

ದೆಹಲಿ: ಭಾನುವಾರ ದೆಹಲಿ-ಗುವಾಹಟಿ ವಿಮಾನದಲ್ಲಿ (Delhi-Guwahati flight) ಇಂಧನ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani)ಅವರನ್ನು ಕಾಂಗ್ರೆಸ್ ಮಹಿಳಾ ವಿಭಾಗದ ಕಾರ್ಯಕಾರಿ ಮುಖ್ಯಸ್ಥೆ ನೆಟ್ಟಾ ಡಿಸೋಜಾ (Netta D’Souza) ಪ್ರಶ್ನಿಸಿದ್ದಾರೆ. ಸ್ಮೃತಿ ಇರಾನಿ ಅವರಲ್ಲಿ ಪ್ರಶ್ನೆ ಕೇಳುತ್ತಿರುವ ವಿಡಿಯೊವನ್ನು ಡಿಸೋಜಾ ಟ್ವೀಟ್ ಮಾಡಿದ್ದಾರೆ. ಸಚಿವರನ್ನು ಟ್ಯಾಗ್ ಮಾಡಿರುವ  ಟ್ವೀಟ್‌ನಲ್ಲಿ, “ಮೋದಿಯವರ ಸಚಿವೆ ಸ್ಮೃತಿ ಇರಾನಿ ಗುವಾಹಟಿಗೆ ಹೋಗುವ ಮಾರ್ಗದಲ್ಲಿ ಮುಖಾಮುಖಿಯಾದರು. ಎಲ್‌ಪಿಜಿಯ ಏರುತ್ತಿರುವ ಬೆಲೆಗಳ ಬಗ್ಗೆ ಕೇಳಿದಾಗ, ಅವರು ಲಸಿಕೆಗಳು, ಪಡಿತರ ಮತ್ತು ಬಡವರನ್ನೂ ದೂಷಿಸಿದರು.ವಿಡಿಯೊದಲ್ಲಿ ಅವರು ಸಾಮಾನ್ಯ ಜನರ ದುಃಖಕ್ಕೆ ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ನೋಡಿ ಎಂದಿದ್ದಾರೆ. ವಿಡಿಯೊದಲ್ಲಿ ವಿಮಾನದಿಂದ ಇಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸ್ಮೃತಿ ಅವರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕಿ ನಮ್ಮ ದಾರಿಯನ್ನು ತಡೆಯುತ್ತಿದ್ದಾರೆ ಎಂದು ಮೊದಲಿಗೆ ಸ್ಮೃತಿ ಇರಾನಿ ಹೇಳಿದ್ದಾರೆ.  ಅಡುಗೆ ಅನಿಲ ಕೊರತೆ ಹಾಗೂ ಗ್ಯಾಸ್ ರಹಿತ ಸ್ಟೌವ್‌ಗಳ ಬಗ್ಗೆ ಕೇಳಿದ ಪ್ರಶ್ನೆಗೆ, ‘ದಯವಿಟ್ಟು ಸುಳ್ಳು ಹೇಳಬೇಡಿ’ ಎಂದು ಸಚಿವರು ಹೇಳುತ್ತಿರುವುದು ವಿಡಿಯೊದಲ್ಲಿದೆ. ನಂತರ ಆಕೆಯ ಜತೆ ವಾಕ್ ತರ್ಕ ಮಾಡಲಾಗುತ್ತಿದೆ ಎಂದು ಹೇಳುತ್ತಿರುವುದು ಕೇಳಿಸುತ್ತದೆ.

16 ದಿನಗಳಲ್ಲಿ 115 ಬಾರಿ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಲೀಟರ್‌ಗೆ ₹ 10ರಷ್ಟು ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಯಾವುದೇ ಏರಿಕೆಯಾಗಿಲ್ಲ. ದೆಹಲಿಯಲ್ಲಿ ಈಗ ಒಂದು ಲೀಟರ್ ಪೆಟ್ರೋಲ್ ₹ 105.41 ಕ್ಕೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ ₹ 96.67 ಕ್ಕೆ ಮಾರಾಟವಾಗುತ್ತಿದೆ. ನಾಲ್ಕು ಮಹಾನಗರಗಳ ಪೈಕಿ ಮುಂಬೈನಲ್ಲಿ ಇಂಧನ ಬೆಲೆಗಳು ಅತ್ಯಧಿಕವಾಗಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ ₹ 120.51 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ₹ 104.77 ಕ್ಕೆ ಮಾರಾಟವಾಗುತ್ತಿದೆ.

ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳು ಸ್ಥಿರವಾಗಿವೆ. ಇತ್ತೀಚೆಗಷ್ಟೇ ಚುನಾವಣೆ ನಡೆದ ನಾಲ್ಕು ರಾಜ್ಯಗಳನ್ನು ತನ್ನಲ್ಲೇ ಉಳಿಸಿಕೊಂಡಿರುವ ಬಿಜೆಪಿಯ ಚುನಾವಣಾ ತಂತ್ರವಾಗಿದೆ ಎಂದು ಪ್ರತಿಪಕ್ಷಗಳು ಹೇಳಿಕೊಂಡಿವೆ.  ರಷ್ಯಾ-ಉಕ್ರೇನ್ ಯುದ್ಧದ ಬೆಲೆ ಏರಿಕೆಗೆ ಕಾರಣವಾಗಿರುವ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಯುಎಸ್, ಯುಕೆ, ಕೆನಡಾ, ಜರ್ಮನಿ ಮತ್ತು ಶ್ರೀಲಂಕಾದಂತಹ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೇವಲ 5 ಪ್ರತಿಶತದಷ್ಟು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ. ಆದರೆ ಇದು ಶೇ 50 ರಷ್ಟು ಏರಿಕೆಯಾಗಿದೆ. ಯುದ್ಧದ ನಂತರ ಭಾರತದಲ್ಲಿ ಪೆಟ್ರೋಲ್ ಬೆಲೆಯ ಹೆಚ್ಚಳವು ತುಂಬಾ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕೊವಿಡ್-19 ಹೋಗಿಲ್ಲ, ರೂಪಗಳನ್ನು ಬದಲಾಯಿಸುತ್ತಾ ಮತ್ತೆ ಬರುತ್ತಿದೆ: ಪ್ರಧಾನಿ ಮೋದಿ

Follow Us
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು