AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   

Bhupesh Baghel ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   
ಭೂಪೇಶ್ ಬಘೇಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 05, 2021 | 4:01 PM

Share

ಜಾಂಜ್‌ಗಿರಿ: “ಗೋವರ್ಧನ ಪೂಜೆ” ಉತ್ಸವದ ಆಚರಣೆಯ ಅಂಗವಾಗಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಇಂದು ಸಾರ್ವಜನಿಕವಾಗಿ “ಚಾಟಿಯೇಟು” ನೀಡಲಾಯಿತು. 60 ವರ್ಷದ ಭೂಪೇಶ್ ಬಘೇಲ್  ತನ್ನ ಬಲಗೈಯನ್ನು ಮುಂದೆ ಹಿಡಿದಿರುವ ವಿಡಿಯೊದಲ್ಲಿ ಒಬ್ಬ ವ್ಯಕ್ತಿ ಎಂಟು ಚಾಟಿ ಏಟುಗಳನ್ನು ನೀಡುತ್ತಿರುವುದನ್ನು ಕಾಣಬಹುದು. ಇದಾದ ನಂತರ ಮುಖ್ಯಮಂತ್ರಿಯು ನಂತರ ಬೀರೇಂದ್ರ ಠಾಕೂರ್ ಎಂಬ ಆ ವ್ಯಕ್ತಿಯನ್ನು ಅಪ್ಪಿಕೊಳ್ಳುತ್ತಿರುವುದು ವಿಡಿಯೊದಲ್ಲಿದೆ. ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುರ್ಗದಲ್ಲಿ ಗೋವರ್ಧನ ಪೂಜೆಯ ಆಚರಣೆಯ ಅಂಗವಾಗಿ ಚಾಟಿಯಿಂದ ಹೊಡೆಸಿಕೊಂಡಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವಿಡಿಯೊಗೆ ಶೀರ್ಷಿಕೆ ನೀಡಿದೆ.

ಈ ಆಚರಣೆಯು ಜಾಂಜ್‌ಗಿರಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದು, ಬಾಘೇಲ್ ಪ್ರತಿ ವರ್ಷ ಭೇಟಿ ನೀಡುತ್ತಾರೆ ಎಂದು ವರದಿಯಾಗಿದೆ. ಕಳೆದ ವರ್ಷದವರೆಗೆ ಬೀರೇಂದ್ರ ಠಾಕೂರ್ ಅವರ ತಂದೆಯೇ  ಈ ರೀತಿ ಮಾಡುತ್ತಿದ್ದರು ಎಂದು ಬಘೇಲ್ ಭಾಷಣದಲ್ಲಿ ಹೇಳಿದ್ದಾರೆ.

“ಈಗ ಭರೋಸಾ ಠಾಕೂರ್ ಅವರ ಮಗ ಈ ಸಂಪ್ರದಾಯವನ್ನು ನಡೆಸುತ್ತಿದ್ದಾನೆ. ನಮ್ಮ ಪೂರ್ವಜರು ಈ ಸಿಹಿಯಾದ ಪುಟ್ಟ ಸಂಪ್ರದಾಯಗಳನ್ನು ಹೊಂದಿದ್ದರು, ಅದು ನಮಗೆ ಬಹಳ ಜನಪ್ರಿಯವಾಗಿದೆ ಮತ್ತು ನಮಗೆ ಬಹಳಷ್ಟು ಸಂತೋಷವನ್ನು ನೀಡುತ್ತದೆ. ಹಳ್ಳಿಗಳಲ್ಲಿನ ಈ ಆಚರಣೆಗಳು ರೈತರ ಒಳಿತಿಗಾಗಿ ಆಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇದನ್ನೂ ಓದಿ: ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ