AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲುಗೆ ಈ ವರ್ಷವೂ ಜೈಲೇ ಗತಿ; ಜಾಮೀನು ಪಡೆಯಲು ಇನ್ನೂ 8 ತಿಂಗಳು ಜೈಲಲ್ಲೇ ಕಳೆಯಬೇಕು!

ಮೂರು ಮೇವು ಹಗರಣದಲ್ಲಿ ಲಾಲು ಶಿಕ್ಷೆಗೆ ಒಳಗಾಗಿದ್ದಾರೆ. ಎರಡು ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತಿತ್ತು. ಆದರೆ, ದುಮಕಾ ಖಜಾನೆ ಪ್ರಕರಣದಲ್ಲಿ ಲಾಲುಗೆ ಜಾಮೀನು ಸಿಕ್ಕಿಲ್ಲ.

ಲಾಲುಗೆ ಈ ವರ್ಷವೂ ಜೈಲೇ ಗತಿ; ಜಾಮೀನು ಪಡೆಯಲು ಇನ್ನೂ 8 ತಿಂಗಳು ಜೈಲಲ್ಲೇ ಕಳೆಯಬೇಕು!
ಲಾಲು ಪ್ರಸಾದ್​ ಯಾದವ್ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 11, 2020 | 2:30 PM

Share

ನವದೆಹಲಿ: ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್​ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ  ಹೈಕೋರ್ಟ್​​ 6 ವಾರ ಮುಂದೂಡಿದೆ. ಈ ಮೂಲಕ ಈ ವರ್ಷವೂ ಲಾಲುಗೆ ಜಾಮೀನು ಅಲಭ್ಯವಾಗಿದೆ.

ಮೂರು ಮೇವು ಹಗರಣದಲ್ಲಿ ಲಾಲು ಶಿಕ್ಷೆಗೆ ಒಳಗಾಗಿದ್ದಾರೆ. ಎರಡು ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತಿತ್ತು. ಆದರೆ, ದುಮಕಾ ಖಜಾನೆ ಪ್ರಕರಣದಲ್ಲಿ ಲಾಲುಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಇನ್ನೂ ಒಂದುವರೆ ತಿಂಗಳು ಜೈಲಿನಲ್ಲೇ ಇರುವುದು ಅನಿವಾರ್ಯ ಆಗಿದೆ.

ದುಮಕಾ ಖಜಾನೆ ಹಗರಣದಲ್ಲಿ ಲಾಲುಗೆ 7 ಏಳು ವರ್ಷ ಶಿಕ್ಷೆ ಆಗಿದೆ. ಈ ಪ್ರಕರಣದಲ್ಲಿ ಅರ್ಧ ಶಿಕ್ಷೆ ಅಂದರೆ 42 ತಿಂಗಳು 28 ದಿನ ಪೂರೈಕೆ ಮಾಡಿದ್ದೇನೆ. ಹೀಗಾಗಿ ಜಾಮೀನು ನೀಡಿ ಎಂದು ಲಾಲು ಕೋರ್ಟ್​ಗೆ ಕೇಳಿದ್ದರು. ಆದರೆ, ಲಾಲು 34 ತಿಂಗಳು ಶಿಕ್ಷೆ ಮಾತ್ರ ಪೂರೈಸಿದ್ದಾರೆ. ಹೀಗಾಗಿ ಅರ್ಧ ಶಿಕ್ಷೆ ಪೂರೈಕೆ ಮಾಡಲು ಇನ್ನೂ 8 ತಿಂಗಳು ಆಗಬೇಕಿದೆ ಎಂದು ಸಿಬಿಐ ತಿಳಿಸಿತ್ತು.

ಆರು ವಾರ ಸಮಯಾವಕಾಶ ಕೇಳಿದ ವಕೀಲ:

ನಮ್ಮ ಲೆಕ್ಕಾಚಾರದ ಪ್ರಕಾರ ಲಾಲು 42 ತಿಂಗಳು ಜೈಲಿನಲ್ಲಿ ಇದ್ದರು. ಅವರು ಜೈಲಿನಲ್ಲಿ ಎಷ್ಟು ಸಮಯ ಕಳೆದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು  ದಾಖಲೆ ಸಮೇತ ಸಲ್ಲಿಕೆ ಮಾಡಲು ನಮಗೆ 8 ವಾರ ಸಮಯಾವಕಾಶ ಬೇಕು ಎಂದು ಲಾಲು ಪರ ವಕೀಲರು ಕೋರ್ಟ್​​ಗೆ ಕೇಳಿದರು. ಹೀಗಾಗಿ, ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ 8 ವಾರಗಳ ಕಾಲ ಮುಂದೂಡಿದೆ.

ಏನಿದು ಪ್ರಕರಣ?:

ಬಿಹಾರ ಮುಖ್ಯಮಂತ್ರಿಯಾಗಿದ್ದಾಗ ಲಾಲು ಬಹುದೊಡ್ಡ ಮೇವು ಹಗರಣ ಮಾಡಿದ್ದರು. ದುಮಕಾ ಖಜಾನೆಯಿಂದ ಲಾಲು 1995 ಡಿಸೆಂಬರ್​ ಹಾಗೂ 1996 ಜನವರಿ ತಿಂಗಳಲ್ಲಿ 3.76 ಕೋಟಿ ಹಣ ತೆಗೆದಿದ್ದರು. ಈ ಪ್ರಕರಣದಲ್ಲಿ ಲಾಲುಗೆ 7 ವರ್ಷ ಜೈಲು ಶಿಕ್ಷೆಯಾಗಿತ್ತು.

‘ದೋ ಹಜಾರ್ ಬೀಸ್-ಹಠಾವೋ ನಿತೀಶ್’ ಜೈಲಿಂದಲೇ ಲಾಲು ಪ್ರಸಾದ್ ಟ್ವೀಟ್

Follow Us
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ