AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ
ಲಾಲು ಪ್ರಸಾದ್​ ಯಾದವ್
Lakshmi Hegde
|

Updated on: Apr 17, 2021 | 1:45 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ​ ಲಾಲೂಪ್ರಸಾದ್ ಯಾದವ್​​ಗೆ ಜಾರ್ಖಂಡ ಹೈಕೋರ್ಟ್ ಇಂದು ಜಾಮೀನು ನೀಡಿದ್ದು, ಶೀಘ್ರವೇ ಲಾಲೂಪ್ರಸಾದ್ ಯಾದವ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ದೇಶದ ಪ್ರಮುಖ ಕೇಸ್​ಗಳಲ್ಲಿ ಒಂದಾದ ಈ ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ದೋಷಿಯೆಂದು ಸಾಬೀತಾಗಿ ಜೈಲು ಸೇರಿದ್ದರು. ಇದೀಗ ಜಾರ್ಖಂಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ವೈಯಕ್ತಿಕ ಬಾಂಡ್​ ವಿಧಿಸಿದ್ದು, ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗಬಾರದು, ವಿಳಾಸ, ಮೊಬೈಲ್​ನಂಬರ್​ಗಳನ್ನು ಬದಲಿಸಬಾರದು ಎಂದು ಸೂಚನೆ ನೀಡಿದೆ.

ಲಾಲೂಪ್ರಸಾದ್​ ಯಾದವ್​ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಪ್ರತ್ಯುತ್ತರ ಸಲ್ಲಿಸಲು ಸಿಬಿಐ ಅವಕಾಶ ಕೇಳಿತ್ತು. ಹೀಗಾಗಿ ಮುಂದೂಡಲಾಗಿತ್ತು. ಲಾಲೂ ಪ್ರಸಾದ್​ ಯಾದವ್​ ವಿರುದ್ಧ ಸಿಬಿಐ ಚೈಬಾಸಾ ಹಾಗೂ ದುಮ್ಕಾ ಖಜಾನೆ ಹಗರಣದಡಿ ಪ್ರಕರಣ ದಾಖಲಿಸಿತ್ತು. ಅದರಲ್ಲಿ ಚೈಬಾಸಾ ಹಗರಣಕ್ಕೆ ಸಂಬಂಧಪಟ್ಟಂತೆ 2020ರ ಅಕ್ಟೋಬರ್​ನಲ್ಲಿ ಜಾರ್ಖಂಡ ಹೈಕೋರ್ಟ್ ಲಾಲೂಗೆ ಜಾಮೀನು ನೀಡಿತ್ತು. ಆದರೆ ದುಮ್ಕಾ ಖಜಾನೆ ಹಗರಣದಲ್ಲಿ ಜಾಮೀನು ಸಿಗದ ಕಾರಣ ಅವರು ಜೈಲಿನಿಂದ ಹೊರಗೆ ಬಂದಿರಲಿಲ್ಲ. ಇದೀಗ ಈ ಪ್ರಕರಣದಲ್ಲೂ ಬೇಲ್​ ಸಿಕ್ಕಂತಾಗಿದ್ದು, ಸದ್ಯದ ಮಟ್ಟಿಗೆ ರಿಲೀಫ್​ ಸಿಕ್ಕಿದೆ.

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಲಾಲೂ ಪ್ರಸಾದ್ ಯಾದವ್ ಸದ್ಯ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವು ಪ್ರಕ್ರಿಯೆಗಳ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ: ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

 Immunity Booster Foods: ಕೊರೊನಾ ಕಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು 5 ಆಹಾರ ಪದಾರ್ಥಗಳು ಇಲ್ಲಿವೆ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ