AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಬಿಗ್ ರಿಲೀಫ್​; ಹೈಕೋರ್ಟ್​ನಿಂದ ಜಾಮೀನು, ಜೈಲುವಾಸ ಅಂತ್ಯ
ಲಾಲು ಪ್ರಸಾದ್​ ಯಾದವ್
Lakshmi Hegde
|

Updated on: Apr 17, 2021 | 1:45 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ​ ಲಾಲೂಪ್ರಸಾದ್ ಯಾದವ್​​ಗೆ ಜಾರ್ಖಂಡ ಹೈಕೋರ್ಟ್ ಇಂದು ಜಾಮೀನು ನೀಡಿದ್ದು, ಶೀಘ್ರವೇ ಲಾಲೂಪ್ರಸಾದ್ ಯಾದವ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ದೇಶದ ಪ್ರಮುಖ ಕೇಸ್​ಗಳಲ್ಲಿ ಒಂದಾದ ಈ ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ದೋಷಿಯೆಂದು ಸಾಬೀತಾಗಿ ಜೈಲು ಸೇರಿದ್ದರು. ಇದೀಗ ಜಾರ್ಖಂಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ವೈಯಕ್ತಿಕ ಬಾಂಡ್​ ವಿಧಿಸಿದ್ದು, ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗಬಾರದು, ವಿಳಾಸ, ಮೊಬೈಲ್​ನಂಬರ್​ಗಳನ್ನು ಬದಲಿಸಬಾರದು ಎಂದು ಸೂಚನೆ ನೀಡಿದೆ.

ಲಾಲೂಪ್ರಸಾದ್​ ಯಾದವ್​ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಪ್ರತ್ಯುತ್ತರ ಸಲ್ಲಿಸಲು ಸಿಬಿಐ ಅವಕಾಶ ಕೇಳಿತ್ತು. ಹೀಗಾಗಿ ಮುಂದೂಡಲಾಗಿತ್ತು. ಲಾಲೂ ಪ್ರಸಾದ್​ ಯಾದವ್​ ವಿರುದ್ಧ ಸಿಬಿಐ ಚೈಬಾಸಾ ಹಾಗೂ ದುಮ್ಕಾ ಖಜಾನೆ ಹಗರಣದಡಿ ಪ್ರಕರಣ ದಾಖಲಿಸಿತ್ತು. ಅದರಲ್ಲಿ ಚೈಬಾಸಾ ಹಗರಣಕ್ಕೆ ಸಂಬಂಧಪಟ್ಟಂತೆ 2020ರ ಅಕ್ಟೋಬರ್​ನಲ್ಲಿ ಜಾರ್ಖಂಡ ಹೈಕೋರ್ಟ್ ಲಾಲೂಗೆ ಜಾಮೀನು ನೀಡಿತ್ತು. ಆದರೆ ದುಮ್ಕಾ ಖಜಾನೆ ಹಗರಣದಲ್ಲಿ ಜಾಮೀನು ಸಿಗದ ಕಾರಣ ಅವರು ಜೈಲಿನಿಂದ ಹೊರಗೆ ಬಂದಿರಲಿಲ್ಲ. ಇದೀಗ ಈ ಪ್ರಕರಣದಲ್ಲೂ ಬೇಲ್​ ಸಿಕ್ಕಂತಾಗಿದ್ದು, ಸದ್ಯದ ಮಟ್ಟಿಗೆ ರಿಲೀಫ್​ ಸಿಕ್ಕಿದೆ.

ಲಾಲೂ ವಿರುದ್ಧ ಎರಡು ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅರ್ಧದಷ್ಟು ಶಿಕ್ಷೆ ಪೂರ್ಣಗೊಳಿಸಿದ್ದನ್ನು ಪರಿಗಣಿಸಿ ಜಾಮೀನು ನೀಡಬೇಕು ಎಂದು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಲಾಲೂ ಪ್ರಸಾದ್ ಯಾದವ್ ಸದ್ಯ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವು ಪ್ರಕ್ರಿಯೆಗಳ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ: ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

 Immunity Booster Foods: ಕೊರೊನಾ ಕಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು 5 ಆಹಾರ ಪದಾರ್ಥಗಳು ಇಲ್ಲಿವೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ