AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪರಿಸರ ಹದಗೆಟ್ಟಿದೆ, ವಿದೇಶದಲ್ಲಿ ನೆಲೆಸಲು ಮಕ್ಕಳಿಗೆ ಸಲಹೆ ನೀಡಿದ್ದೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ

ಭಾರತದ ಪರಿಸರ ಹದಗೆಟ್ಟಿದೆ ಹಾಗಾಗಿ ನನ್ನ ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ ನೀಡಿದ್ದೇನೆ ಎಂದು ಆರ್​ಜೆಡಿ ನಾಯಕ ಅಬ್ದುಲ್ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದ ಪರಿಸರ ಹದಗೆಟ್ಟಿದೆ, ವಿದೇಶದಲ್ಲಿ ನೆಲೆಸಲು ಮಕ್ಕಳಿಗೆ ಸಲಹೆ ನೀಡಿದ್ದೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ
Abdul Bari Siddiqui
TV9 Web
| Updated By: ನಯನಾ ರಾಜೀವ್|

Updated on: Dec 23, 2022 | 9:53 AM

Share

ಭಾರತದ ಪರಿಸರ ಹದಗೆಟ್ಟಿದೆ ಹಾಗಾಗಿ ನನ್ನ ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ ನೀಡಿದ್ದೇನೆ ಎಂದು ಆರ್​ಜೆಡಿ ನಾಯಕ ಅಬ್ದುಲ್ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನನ್ನ ಗಂಡು ಹೆಣ್ಣು ಮಕ್ಕಳಿಗೆ ವಿದೇಶದಲ್ಲಿ ಇರುವಂತೆ ಹೇಳಿದ್ದೇನೆ ಎಂದು ಹೇಳಿದ್ದಾರೆ. ಬಿಹಾರದ ಲಾಲು ಯಾದವ್ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ, ಸಾಧ್ಯವಾದರೆ ಅಲ್ಲಿಯೇ ನೆಲೆಸುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಆರ್‌ಜೆಡಿ ನಾಯಕ ‘ಭಾರತ ವಿರೋಧಿ’ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಹಾಗಾದರೆ ಪಾಕಿಸ್ತಾನಕ್ಕೆ ತೆರಳಿ ಎಂದು ಸಲಹೆ ನೀಡಿದೆ.

ಮತ್ತಷ್ಟು ಓದಿ: Lalu Prasad Yadav: ಕಿಡ್ನಿ ಕಸಿಗೆ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್

ಸಿದ್ದಿಕಿ ಅವರ ಹೇಳಿಕೆಗಳು ಭಾರತ ವಿರೋಧಿಯಾಗಿದೆ. ಅವರು ತುಂಬಾ ಉಸಿರುಗಟ್ಟುತ್ತಿದ್ದರೆ, ಅವರು ರಾಜಕೀಯ ನಾಯಕರಾಗಿ ಇಲ್ಲಿ ಅನುಭವಿಸುತ್ತಿರುವ ಸವಲತ್ತುಗಳನ್ನು ತ್ಯಜಿಸಿ ಪಾಕಿಸ್ತಾನಕ್ಕೆ ಹೋಗಬೇಕು. ಯಾರೂ ಅವರನ್ನು ತಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ನಿಖಿಲ್ ಆನಂದ್ ಟೀಕಿಸಿದರು.

ಸಿದ್ಧಿಕಿ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಆಪ್ತ ಸಹಾಯಕರಾಗಿದ್ದಾರೆ ಮತ್ತು ಅವರ ಮಾತುಗಳು ಅವರ ಪಕ್ಷದ ಮುಸ್ಲಿಂ ತುಷ್ಟೀಕರಣದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಬಿಜೆಪಿ ಹೇಳಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ