AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪರಿಸರ ಹದಗೆಟ್ಟಿದೆ, ವಿದೇಶದಲ್ಲಿ ನೆಲೆಸಲು ಮಕ್ಕಳಿಗೆ ಸಲಹೆ ನೀಡಿದ್ದೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ

ಭಾರತದ ಪರಿಸರ ಹದಗೆಟ್ಟಿದೆ ಹಾಗಾಗಿ ನನ್ನ ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ ನೀಡಿದ್ದೇನೆ ಎಂದು ಆರ್​ಜೆಡಿ ನಾಯಕ ಅಬ್ದುಲ್ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದ ಪರಿಸರ ಹದಗೆಟ್ಟಿದೆ, ವಿದೇಶದಲ್ಲಿ ನೆಲೆಸಲು ಮಕ್ಕಳಿಗೆ ಸಲಹೆ ನೀಡಿದ್ದೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ
Abdul Bari Siddiqui
TV9 Web
| Edited By: |

Updated on: Dec 23, 2022 | 9:53 AM

Share

ಭಾರತದ ಪರಿಸರ ಹದಗೆಟ್ಟಿದೆ ಹಾಗಾಗಿ ನನ್ನ ಮಕ್ಕಳಿಗೆ ವಿದೇಶದಲ್ಲಿ ನೆಲೆಸಲು ಸಲಹೆ ನೀಡಿದ್ದೇನೆ ಎಂದು ಆರ್​ಜೆಡಿ ನಾಯಕ ಅಬ್ದುಲ್ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನನ್ನ ಗಂಡು ಹೆಣ್ಣು ಮಕ್ಕಳಿಗೆ ವಿದೇಶದಲ್ಲಿ ಇರುವಂತೆ ಹೇಳಿದ್ದೇನೆ ಎಂದು ಹೇಳಿದ್ದಾರೆ. ಬಿಹಾರದ ಲಾಲು ಯಾದವ್ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ, ಸಾಧ್ಯವಾದರೆ ಅಲ್ಲಿಯೇ ನೆಲೆಸುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಆರ್‌ಜೆಡಿ ನಾಯಕ ‘ಭಾರತ ವಿರೋಧಿ’ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ, ಹಾಗಾದರೆ ಪಾಕಿಸ್ತಾನಕ್ಕೆ ತೆರಳಿ ಎಂದು ಸಲಹೆ ನೀಡಿದೆ.

ಮತ್ತಷ್ಟು ಓದಿ: Lalu Prasad Yadav: ಕಿಡ್ನಿ ಕಸಿಗೆ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್

ಸಿದ್ದಿಕಿ ಅವರ ಹೇಳಿಕೆಗಳು ಭಾರತ ವಿರೋಧಿಯಾಗಿದೆ. ಅವರು ತುಂಬಾ ಉಸಿರುಗಟ್ಟುತ್ತಿದ್ದರೆ, ಅವರು ರಾಜಕೀಯ ನಾಯಕರಾಗಿ ಇಲ್ಲಿ ಅನುಭವಿಸುತ್ತಿರುವ ಸವಲತ್ತುಗಳನ್ನು ತ್ಯಜಿಸಿ ಪಾಕಿಸ್ತಾನಕ್ಕೆ ಹೋಗಬೇಕು. ಯಾರೂ ಅವರನ್ನು ತಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ನಿಖಿಲ್ ಆನಂದ್ ಟೀಕಿಸಿದರು.

ಸಿದ್ಧಿಕಿ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಆಪ್ತ ಸಹಾಯಕರಾಗಿದ್ದಾರೆ ಮತ್ತು ಅವರ ಮಾತುಗಳು ಅವರ ಪಕ್ಷದ ಮುಸ್ಲಿಂ ತುಷ್ಟೀಕರಣದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಬಿಜೆಪಿ ಹೇಳಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ