AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿಗಾಗಿ ಬೀದಿಯಿಂದ ಸಂಸತ್ತಿನವರೆಗೂ ಆರ್‌ಜೆಡಿ ಹೋರಾಟ ನಡೆಸಲಿದೆ; ತೇಜಸ್ವಿ ಯಾದವ್ ಸವಾಲು

ಬಿಹಾರದ ಹೆಚ್ಚಿದ ಮೀಸಲಾತಿ ಮಿತಿಯನ್ನು 9ನೇ ಶೆಡ್ಯೂಲ್‌ಗೆ ಸೇರಿಸಬೇಕು, ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಬೇಕು ಮತ್ತು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮೀಸಲಾತಿಗಾಗಿ ಬೀದಿಯಿಂದ ಸಂಸತ್ತಿನವರೆಗೂ ಆರ್‌ಜೆಡಿ ಹೋರಾಟ ನಡೆಸಲಿದೆ; ತೇಜಸ್ವಿ ಯಾದವ್ ಸವಾಲು
ತೇಜಸ್ವಿ ಯಾದವ್
Follow us
ಸುಷ್ಮಾ ಚಕ್ರೆ
|

Updated on: Aug 03, 2024 | 10:49 PM

ಪಾಟ್ನಾ: ಬಿಹಾರದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೀಸಲಾತಿಗಾಗಿ ಬೀದಿಗಿಳಿದು ಸಂಸತ್ತಿನವರೆಗೆ ಹೋರಾಟ ನಡೆಸುವುದಾಗಿ ಪ್ರತಿಜ್ಞೆ ಮಾಡಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕಳೆದ 2 ದಿನಗಳಿಂದ ಈ ವಿಷಯದ ಬಗ್ಗೆ ದನಿ ಎತ್ತಿದ್ದು, ಬಿಹಾರದಲ್ಲಿ ವಂಚಿತ ಜಾತಿಗಳ ಕೋಟಾವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನ ತಪ್ಪುದಾರಿಗೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಯಾದವ್, ಸಮಾಜದ ವಂಚಿತ ಮತ್ತು ನಿರ್ಲಕ್ಷಿತ ವರ್ಗಗಳ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು ಜಾತಿ ಗಣತಿಗಾಗಿ ಪ್ರತಿಪಾದಿಸಲು ಆರ್​ಜೆಡಿಯ ದೀರ್ಘಕಾಲದ ಪ್ರಯತ್ನಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆಯಲ್ಲಿ ತೇಜಸ್ವಿ ಯಾದವ್ ಆಪ್ತನ ಕೈವಾಡ; ಬಿಹಾರದ ಡಿಸಿಎಂ ಆರೋಪ

ಬಿಹಾರದಲ್ಲಿ ಗ್ರ್ಯಾಂಡ್ ಅಲೈಯನ್ಸ್ ಸರ್ಕಾರ ರಚನೆಯಾದ ನಂತರ, 17 ತಿಂಗಳೊಳಗೆ ಜಾತಿ ಆಧಾರಿತ ಸಮೀಕ್ಷೆಯನ್ನು ನಡೆಸಿ ಪ್ರಕಟಿಸಲು ಯಶಸ್ವಿಯಾಯಿತು. ಜಾತಿ ಸಮೀಕ್ಷೆಯ ವರದಿಯನ್ನು ಆಧರಿಸಿ, ಬಿಹಾರದಲ್ಲಿ ಎಲ್ಲಾ ವರ್ಗಗಳಿಗೆ ಮೀಸಲಾತಿ ಮಿತಿಯನ್ನು ನವೆಂಬರ್ 2023ರಲ್ಲಿ ಶೇ. 75ಕ್ಕೆ ಹೆಚ್ಚಿಸಲಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಅತ್ಯಾಚಾರ ಪ್ರಕರಣ; ಡಿಎನ್‌ಎ ಪರೀಕ್ಷೆಯಿಂದ ನ್ಯಾಯ ಸಿಗುತ್ತದೆಯೇ ವಿನಃ ರಾಜಕೀಯದಿಂದಲ್ಲ ಎಂದ ಅಖಿಲೇಶ್ ಯಾದವ್

“ಡಿಸೆಂಬರ್ 2023ರಲ್ಲಿ ಪೂರ್ವ ಪ್ರಾದೇಶಿಕ ಕೌನ್ಸಿಲ್ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂವಿಧಾನದ 9 ನೇ ಶೆಡ್ಯೂಲ್‌ಗೆ ಸೇರಿಸಲು ವಿನಂತಿಸಲಾಯಿತು. ಇದನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಿರಾಕರಿಸಿತು” ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ, ಮೀಸಲಾತಿ ವಿಚಾರದಲ್ಲಿ ಆರ್‌ಜೆಡಿ ಬಿಹಾರ ಸರ್ಕಾರ ಮತ್ತು ಕೇಂದ್ರ ಎರಡನ್ನೂ ಗುರಿಯಾಗಿಸಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್