AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ: ಆಟೋ ಸಮೇತ ಬಾವಿಗೆ ಉರುಳಿದ ಬಸ್‌, 26 ಮಂದಿ ದಾರುಣ ಸಾವು!

ಮುಂಬೈ: ಮಹಾರಾಷ್ಟ್ರದ ನಾಸಿಕ್ ಸಮೀಪ ನಿನ್ನೆ ಸಂಜೆ ಭೀಕರ ಅಪಘಾತ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ಆಟೋ ಮತ್ತು ಬಸ್ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಉರುಳಿವೆ. ಮೊದಲು ಆಟೋ ಬಿದ್ದಿದ್ದು, ಬಳಿಕ ಬಸ್ ಅದರ ಮೇಲೆ ಉರುಳಿದೆ. ಸಂಪೂರ್ಣ ಬಸ್‌ ಬಾವಿಯೊಳಗೆ ಹೋಗಿದೆ. ಭೀಕರ ಅಪಘಾತದಲ್ಲಿ 26 ಜನ ಪ್ರಾಣ ಬಿಟ್ಟಿದ್ದು 19ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ನಾಸಿಕ್‌ ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್‌ನ ಒಂದು ಟೈರ್ […]

ಅಪಘಾತ: ಆಟೋ ಸಮೇತ ಬಾವಿಗೆ ಉರುಳಿದ ಬಸ್‌, 26 ಮಂದಿ ದಾರುಣ ಸಾವು!
Follow us
ಸಾಧು ಶ್ರೀನಾಥ್​
|

Updated on:Jan 29, 2020 | 11:41 AM

ಮುಂಬೈ: ಮಹಾರಾಷ್ಟ್ರದ ನಾಸಿಕ್ ಸಮೀಪ ನಿನ್ನೆ ಸಂಜೆ ಭೀಕರ ಅಪಘಾತ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ಆಟೋ ಮತ್ತು ಬಸ್ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಉರುಳಿವೆ. ಮೊದಲು ಆಟೋ ಬಿದ್ದಿದ್ದು, ಬಳಿಕ ಬಸ್ ಅದರ ಮೇಲೆ ಉರುಳಿದೆ. ಸಂಪೂರ್ಣ ಬಸ್‌ ಬಾವಿಯೊಳಗೆ ಹೋಗಿದೆ. ಭೀಕರ ಅಪಘಾತದಲ್ಲಿ 26 ಜನ ಪ್ರಾಣ ಬಿಟ್ಟಿದ್ದು 19ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ನಾಸಿಕ್‌ ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್‌ನ ಒಂದು ಟೈರ್ ಸ್ಫೋಟಗೊಂಡು ಚಾಲಕ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ಎರಡೂ ವಾಹನಗಳು ಬಾವಿಗೆ ಬಿದ್ದಿದೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ರಕ್ಷಣಾ ತಂಡಗಳು 30 ಜನರನ್ನು ರಕ್ಷಣೆ ಮಾಡಲಾಗಿದೆ. ಬಾವಿಯೊಳಗೆ ಹರಸಾಹಸ ಪಟ್ಟು ಪ್ರಯಾಣಿಕರನ್ನ ಕಾಪಾಡಲಾಗಿದೆ.

ಆಟೋ ಮತ್ತು ಬಸ್‌ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಭರವಸೆ ನೀಡಿದೆ. ಬಾವಿಯೊಳಗೆ ಬಿದ್ದ ಆಟೋ ಮತ್ತು ಬಸ್‌ ದುರಂತವನ್ನ ನೋಡಿ ಮಹಾರಾಷ್ಟ್ರದ ಜನ ಬೆಚ್ಚಿಬಿದ್ದಿದ್ದು, ಈ ದುರಂತಕ್ಕೆ ಹೊಣೆ ಯಾರು ಅನ್ನೋ ಪ್ರಶ್ನೆ ಜನರನ್ನು ಕಾಡುತ್ತಿದೆ.

https://www.instagram.com/p/B75Jw59Htfz/?utm_source=ig_web_copy_link

Published On - 10:00 am, Wed, 29 January 20

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ