AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಉದಯಪುರದಲ್ಲಿ ಜೀಪ್ ಕಣಿವೆಗೆ ಉರುಳಿ ಐವರು ಸಾವು, 13 ಮಂದಿಗೆ ಗಾಯ

ನಿನ್ನೆ ರಾತ್ರಿ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ.

Accident: ಉದಯಪುರದಲ್ಲಿ ಜೀಪ್ ಕಣಿವೆಗೆ ಉರುಳಿ ಐವರು ಸಾವು, 13 ಮಂದಿಗೆ ಗಾಯ
ಅಪಘಾತ
TV9 Web
| Edited By: |

Updated on: Apr 14, 2022 | 1:07 PM

Share

ನವದೆಹಲಿ: ರಾಜಸ್ಥಾನದ ಉದಯಪುರ (Udaipur) ಜಿಲ್ಲೆಯಲ್ಲಿ ಓವರ್‌ಲೋಡ್‌ ಆಗಿದ್ದ ಜೀಪ್‌ ಕಣಿವೆಗೆ ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ನೈ ಪೊಲೀಸ್ ಠಾಣಾ ವ್ಯಾಪ್ತಿಯ ನಂದೇಶ್ವರ ಮಹಾದೇವ ದೇವಸ್ಥಾನದ ಬಳಿ ಬುಧವಾರ ರಾತ್ರಿ ಈ ಭೀಕರ ಅಪಘಾತ (Road Accident) ಸಂಭವಿಸಿದೆ. ಟ್ವಿಟ್ಟರ್‌ನಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ನಿನ್ನೆ ರಾತ್ರಿ ನಡೆದ ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಚೌಧರಿ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಉದಯಪುರದ ಉದಯಪುರ- ಜಡೋಲ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಜನರ ಸಾವು ತುಂಬಾ ದುಃಖಕರವಾಗಿದೆ. ಅಗಲಿದ ಕುಟುಂಬಗಳಿಗೆ ನಾನು ತೀವ್ರ ಸಂತಾಪ ಸೂಚಿಸುತ್ತಿದ್ದೇನೆ. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

Crime News: ಅತ್ಯಾಚಾರ ಕೊಲೆಗಿಂತಲೂ ಘೋರವಾದುದು; ಪೋಕ್ಸೋ ನ್ಯಾಯಾಲಯದಿಂದ ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ