AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ

ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ 18ರಿಂದ 35 ವರ್ಷ ವಯೋಮಾನದವರೇ ಹೆಚ್ಚಾಗಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ರಸ್ತೆ ಅಪಫಾತಗಳನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳತ್ತ ತೀವ್ರ ಗಮನ ಹರಿಸುತ್ತಿದೆ ಎಂದು ನಿತಿನ್ ಗಡ್ಕರಿ ತಿಳಿಸಿದರು.

ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
guruganesh bhat
| Edited By: |

Updated on: Mar 18, 2021 | 5:31 PM

Share

ದೆಹಲಿ: ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆಯೇ ಹೆಚ್ಚು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು. ಈ ಕುರಿತು ಅಂಕಿಅಂಶಗಳನ್ನು ತೆರೆದಿಟ್ಟ ಅವರು ಸುಮಾರು 1.46 ಲಕ್ಷ ಜನರು ಕೊರೊನಾ ಪಿಡುಗಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸುತ್ತದೆ. ಆದರೆ ರಸ್ತೆ ಅವಘಡಗಳಲ್ಲಿ 1.50 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು.

ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ 18ರಿಂದ 35 ವರ್ಷ ವಯೋಮಾನದವರೇ ಹೆಚ್ಚಾಗಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ರಸ್ತೆ ಅಪಫಾತಗಳನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳತ್ತ ತೀವ್ರ ಗಮನ ಹರಿಸುತ್ತಿದ್ದೇವೆ ಎಂದು ಅವರು ತಿಳಿಸಿದರು. ಇತ್ತೀಚಿಗೆ ವಿಶ್ವಬ್ಯಾಂಕ್ ಬಿಡುಗಡೆಗೊಳಿಸಿದ ವರದಿಯೊಂದರ ಪ್ರಕಾರ, ಭಾರತದಲ್ಲಿ ಪ್ರತಿವರ್ಷ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಪ್ರತಿವರ್ಷ 4.5 ಲಕ್ಷ ಅಪಫಾತಗಳು ಸಂಭವಿಸುತ್ತಿದ್ದು, ದೇಶದ ಜಿಡಿಪಿಯ ಶೇ 3.14ರಷ್ಟು ಭಾಗ ಈ ಅಪಘಾತಗಳಿಂದ ನಷ್ಟವಾಗುತ್ತದೆ ಎಂದು ಹೇಳಲಾಗಿತ್ತು.

ರಸ್ತೆ ಅಪಘಾತ ಕಡಿಮೆಗೊಳಿಸುವ ವಿಶ್ವಾಸ ದೇಶದಲ್ಲಿ 2025ರ ವೇಳೆಗೆ ರಸ್ತೆ ಅಪಘಾತ ಹಾಗೂ ಅಪಘಾತಗಳಿಂದ ಸಾವಿಗೀಡಾಗುವವರ ಪ್ರಮಾಣ ಶೇ 50ರಷ್ಟು ಕುಸಿಯಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಇತ್ತೀಚಿಗಷ್ಟೇ ಭರವಸೆ ವ್ಯಕ್ತಪಡಿಸಿದ್ದರು. ಭಾರತದಲ್ಲಿ ಪ್ರತಿನಿತ್ಯ ಸುಮಾರು 415 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸವಾಲು ನಮ್ಮ ಮುಂದಿದ್ದು ಸರ್ಕಾರ ಇದಕ್ಕಾಗಿ ಶ್ರಮಿಸಲಿದೆ ಎಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದರು.

ಕಳೆದ ಬಾರಿ ಸ್ವೀಡನ್​ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ 2030ರ ವೇಳೆಗೆ ಭಾರತದಲ್ಲಿ ರಸ್ತೆ ಅಪಘಾತಗಳಿಂದ ಯಾರೊಬ್ಬರೂ ಸಾಯದಂತೆ ನೋಡಿಕೊಳ್ಳುವ ಉದ್ದೇಶ ವ್ಯಕ್ತಪಡಿಸಲಾಗಿದೆ. ಅದರಂತೆ ನಾವು 2025ರೊಳಗೆ ಶೇ.50ರಷ್ಟು ರಸ್ತೆ ಅಪಘಾತ ಮತ್ತು ಅದರಿಂದಾಗುವ ಸಾವುಗಳನ್ನು ತಡೆಗಟ್ಟುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ತಮಿಳುನಾಡು ಈಗಾಗಲೇ ರಸ್ತೆ ಅಪಘಾತದ ಪ್ರಮಾಣವನ್ನು ಶೇ 53ರಷ್ಟು ತಗ್ಗಿಸಿದೆ. ಅದು ನಮಗೆ ಮಾದರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ದೇಶಾದ್ಯಂತ ರಸ್ತೆಗಳಲ್ಲಿನ ಅತಿ ಹೆಚ್ಚು ಅಪಾಯಕಾರಿ ಸ್ಥಳಗಳನ್ನು ಪತ್ತೆಹಚ್ಚಿ ಅವುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ₹14 ಸಾವಿರ ಕೋಟಿ ವ್ಯಯಿಸಲಿದೆ. ಇದಕ್ಕಾಗಿ ವಿಶ್ವ ಬ್ಯಾಂಕ್​ ಮತ್ತು ಏಷ್ಯನ್​ ಡೆವಲಪ್​ಮೆಂಟ್​ ಬ್ಯಾಂಕ್​ (ಎಡಿಬಿ) ತಲಾ ₹7 ಸಾವಿರ ಕೋಟಿ ವೆಚ್ಚದ ಎರಡು ಯೋಜನೆಗಳಿಗೆ ಒಪ್ಪಿಗೆ ಸೂಚಿಸಿವೆ. ಕೇಂದ್ರ ಹಣಕಾಸು ಸಚಿವಾಲಯದಿಂದಲೂ ಈ ಯೋಜನೆಗಳಿಗೆ ಶೀಘ್ರದಲ್ಲಿ ಅನುಮತಿ ಸಿಗುವ ನಿರೀಕ್ಷೆ ಇದೆ. ನಾವು ಈಗಾಗಲೇ ದಿನಕ್ಕೆ 30 ಕಿ.ಮೀ ರಸ್ತೆ ನಿರ್ಮಿಸುವ ಗುರಿ ತಲುಪಿದ್ದೇವೆ. ಮಾರ್ಚ್​ ಅಂತ್ಯದ ಒಳಗೆ ದಿನಕ್ಕೆ 40 ಕಿ.ಮೀನಷ್ಟು ರಸ್ತೆ ನಿರ್ಮಿಸುವ ಧ್ಯೇಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Electric Vehicles: ಪೆಟ್ರೋಲ್​, ಡೀಸೆಲ್​ ವಾಹನ ಬದಲು ಎಲೆಕ್ಟ್ರಿಕ್​ ವಾಹನ ಬಳಸಿದರೆ ಭಾರಿ ಹಣ ಉಳಿತಾಯ ಆಗುತ್ತೆ: ನಿತಿನ್​ ಗಡ್ಕರಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ