AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: ಭಾರತದಲ್ಲಿ ಕೊರೊನಾ ಪೂರ್ವದಲ್ಲಿದ್ದ ಸಂಖ್ಯೆಗೆ ಬಂದ ರಸ್ತೆ ಅಪಘಾತ ಪ್ರಕರಣಗಳು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 2022 ರಲ್ಲಿ ಭಾರತದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯನ್ನು ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಇಲಾಖೆಗಳ ಪೊಲೀಸ್ ಅಧಿಕಾರಿಗಳು ನೀಡುತ್ತಾರೆ. ಈ ಡೇಟಾವನ್ನು ಏಷ್ಯಾ ಪೆಸಿಫಿಕ್ ರಸ್ತೆ ಅಪಘಾತ ಡೇಟಾ (APRAD) ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ.

Road Accidents: ಭಾರತದಲ್ಲಿ ಕೊರೊನಾ ಪೂರ್ವದಲ್ಲಿದ್ದ ಸಂಖ್ಯೆಗೆ ಬಂದ ರಸ್ತೆ ಅಪಘಾತ ಪ್ರಕರಣಗಳು
ಅಪಘಾತImage Credit source: Zee Business
Follow us
ನಯನಾ ರಾಜೀವ್
|

Updated on: Nov 01, 2023 | 12:35 PM

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 2022 ರಲ್ಲಿ ಭಾರತದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯನ್ನು ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಇಲಾಖೆಗಳ ಪೊಲೀಸ್ ಅಧಿಕಾರಿಗಳು ನೀಡುತ್ತಾರೆ. ಈ ಡೇಟಾವನ್ನು ಏಷ್ಯಾ ಪೆಸಿಫಿಕ್ ರಸ್ತೆ ಅಪಘಾತ ಡೇಟಾ (APRAD) ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ.

2022ರಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿವೆ ವರದಿಯ ಪ್ರಕಾರ, 2022 ರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಒಟ್ಟು 4,61,312 ರಸ್ತೆ ಅಪಘಾತಗಳು ದಾಖಲಾಗಿವೆ, ಇದರಲ್ಲಿ 1,68,491 ಜನರು ಸಾವನ್ನಪ್ಪಿದ್ದಾರೆ ಮತ್ತು 4,43,366 ಜನರು ಅಪಘಾತಗಳಲ್ಲಿ ಗಾಯಗೊಂಡಿದ್ದಾರೆ. 2021ಕ್ಕೆ ವರ್ಷಕ್ಕೆ ಹೋಲಿಸಿದರೆ, ಅಪಘಾತಗಳಲ್ಲಿ 11.9%, ಸಾವುಗಳಲ್ಲಿ 9.4% ಮತ್ತು ಗಾಯಾಳುಗಳಲ್ಲಿ 15.3% ಹೆಚ್ಚಳವಾಗಿದೆ.

ಇದೇ ರಸ್ತೆ ಅಪಘಾತಕ್ಕೆ ಕಾರಣ ವರದಿಯಲ್ಲಿ, ರಸ್ತೆ ಅಪಘಾತಗಳಿಗೆ ಅತಿ ಹೆಚ್ಚು ವೇಗ, ಅಜಾಗರೂಕ ಚಾಲನೆ, ಕುಡಿದು ವಾಹನ ಚಾಲನೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸದಿರುವುದು ಪ್ರಮುಖ ಕಾರಣಗಳಾಗಿವೆ. ಇಂತಹ ರಸ್ತೆ ಅಪಘಾತಗಳ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಸಾಧ್ಯವಾದಷ್ಟು ಜೀವಗಳನ್ನು ಉಳಿಸಬಹುದು. ಚಾಲಕರಿಗೆ ಅನೇಕ ರೀತಿಯ ಶಿಕ್ಷಣ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು.

ಅಪಘಾತ ತಡೆಯಲು ಹಲವು ಆಯಾಮಗಳಲ್ಲಿ ಪ್ರಯತ್ನಗಳು ನಡೆಯುತ್ತಿವೆ ರಸ್ತೆ ಅಪಘಾತಗಳನ್ನು ತಡೆಯಲು ಸಚಿವಾಲಯ ಹಲವು ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಸಚಿವಾಲಯವು ರಸ್ತೆಯಲ್ಲಿ ವಾಹನ ಚಲಾಯಿಸುವ ಜನರಿಗೆ ತರಬೇತಿ ನೀಡುತ್ತದೆ. ಇದಲ್ಲದೆ, ರಸ್ತೆ ಮೂಲಸೌಕರ್ಯ, ವಾಹನ ಗುಣಮಟ್ಟ, ಸಂಚಾರ ನಿಯಮಗಳ ಜಾರಿ ಮತ್ತು ಅಪಘಾತಗಳನ್ನು ತಡೆಗಟ್ಟುವ ಹಲವು ಅಂಶಗಳ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅನೇಕ ಕಾರಣಗಳಿಂದ ರಸ್ತೆ ಅಪಘಾತಗಳು ಸಂಭವಿಸುತ್ತವೆ, ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವುದು ಮುಖ್ಯವಾಗಿದೆ.

ತಮಿಳುನಾಡು, ತೆಲಂಗಾಣ, ಚತ್ತೀಸ್​ಗಢದಲ್ಲಿ ಅಪಘಾತ ಪ್ರಮಾಣ ಹೆಚ್ಚು ತಮಿಳುನಾಡು , ತೆಲಂಗಾಣ ಹಾಗೂ ಚತ್ತೀಸ್​ಗಢದಲ್ಲಿ ಅಪಘಾತದ ಪ್ರಮಾಣ ಹೆಚ್ಚಿದೆ ಎಂಬುದು ತಿಳಿದುಬಂದಿದೆ. ಕರ್ನಾಟಕವು ನಾಲ್ಕನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ತಲುಪಿದೆ. ಪಶ್ಚಿಮ ಬಂಗಾಳ, ದೆಹಲಿ, ಬಿಹಾರ, ಅಸ್ಸಾಂ, ಉತ್ತರಾಖಂಡ ಕೊನೆಯ ಮೂರು ಸ್ಥಾನದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ