AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ. ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ […]

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ
KUSHAL V
|

Updated on: Aug 18, 2020 | 6:05 PM

Share

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ.

ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ 2 ಸೇತುವೆಗಳ ನಿರ್ಮಾಣವನ್ನ ಪೂರ್ಣಗೊಳಿಸಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆಯಲ್ಲಿ ರಸ್ತೆ ನಿರ್ಮಾಣ ಕೈಗೊಂಡಿರುವ ಇಲಾಖೆಯು ಕಾಮಗಾರಿಯಲ್ಲಿ ಕೆಲವು ನೂತನ ತಂತ್ರಜ್ಞಾನವನ್ನೂ ಬಳಸಿದೆ. ಉದಾಹರಣೆಗೆ, ಲೇಹ್ ಪ್ರದೇಶದ ಸ್ಟೋಕ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಯಲ್ಲಿ ಪ್ಲಾಸ್ಟಿಕ್​ ತ್ಯಾಜ್ಯವನ್ನ ಬಳಸಲಾಗಿದೆ. ಡಾಂಬರೀಕರಣದ ವೇಳೆ ಪ್ಲಾಸ್ಟಿಕ್​ ಮಿಶ್ರಿತ ಡಾಂಬರು ಬಳಸುವುದರಿಂದ ರಸ್ತಗಳು ದೀರ್ಘ ಬಾಳಿಕೆ ಬರಲು ಸಹಕಾರಿಯಾಗಲಿದೆ.

ಒಟ್ನಲ್ಲಿ, ಕಾಶ್ಮೀರ ಕಣಿವೆ ಮತ್ತು ಲಡಾಖ್​ನಲ್ಲಿ ರಸ್ತೆ ಸಂಪರ್ಕಕ್ಕೆ ವೇಗ ಸಿಕ್ಕಿರುವುದು ಸ್ಥಳೀಯರ ಸಾಮಾಜಿಕ ಸ್ಥಿತಿ ಮತ್ತು ಆರ್ಥಿಕ ಏಳಿಗೆಗೆ ನೆರವಾಗುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನೆ ಸಹ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ