AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ. ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ […]

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ
KUSHAL V
|

Updated on: Aug 18, 2020 | 6:05 PM

Share

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ.

ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ 2 ಸೇತುವೆಗಳ ನಿರ್ಮಾಣವನ್ನ ಪೂರ್ಣಗೊಳಿಸಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆಯಲ್ಲಿ ರಸ್ತೆ ನಿರ್ಮಾಣ ಕೈಗೊಂಡಿರುವ ಇಲಾಖೆಯು ಕಾಮಗಾರಿಯಲ್ಲಿ ಕೆಲವು ನೂತನ ತಂತ್ರಜ್ಞಾನವನ್ನೂ ಬಳಸಿದೆ. ಉದಾಹರಣೆಗೆ, ಲೇಹ್ ಪ್ರದೇಶದ ಸ್ಟೋಕ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಯಲ್ಲಿ ಪ್ಲಾಸ್ಟಿಕ್​ ತ್ಯಾಜ್ಯವನ್ನ ಬಳಸಲಾಗಿದೆ. ಡಾಂಬರೀಕರಣದ ವೇಳೆ ಪ್ಲಾಸ್ಟಿಕ್​ ಮಿಶ್ರಿತ ಡಾಂಬರು ಬಳಸುವುದರಿಂದ ರಸ್ತಗಳು ದೀರ್ಘ ಬಾಳಿಕೆ ಬರಲು ಸಹಕಾರಿಯಾಗಲಿದೆ.

ಒಟ್ನಲ್ಲಿ, ಕಾಶ್ಮೀರ ಕಣಿವೆ ಮತ್ತು ಲಡಾಖ್​ನಲ್ಲಿ ರಸ್ತೆ ಸಂಪರ್ಕಕ್ಕೆ ವೇಗ ಸಿಕ್ಕಿರುವುದು ಸ್ಥಳೀಯರ ಸಾಮಾಜಿಕ ಸ್ಥಿತಿ ಮತ್ತು ಆರ್ಥಿಕ ಏಳಿಗೆಗೆ ನೆರವಾಗುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನೆ ಸಹ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್