AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ. ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ […]

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ
KUSHAL V
|

Updated on: Aug 18, 2020 | 6:05 PM

Share

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ.

ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ 2 ಸೇತುವೆಗಳ ನಿರ್ಮಾಣವನ್ನ ಪೂರ್ಣಗೊಳಿಸಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆಯಲ್ಲಿ ರಸ್ತೆ ನಿರ್ಮಾಣ ಕೈಗೊಂಡಿರುವ ಇಲಾಖೆಯು ಕಾಮಗಾರಿಯಲ್ಲಿ ಕೆಲವು ನೂತನ ತಂತ್ರಜ್ಞಾನವನ್ನೂ ಬಳಸಿದೆ. ಉದಾಹರಣೆಗೆ, ಲೇಹ್ ಪ್ರದೇಶದ ಸ್ಟೋಕ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಯಲ್ಲಿ ಪ್ಲಾಸ್ಟಿಕ್​ ತ್ಯಾಜ್ಯವನ್ನ ಬಳಸಲಾಗಿದೆ. ಡಾಂಬರೀಕರಣದ ವೇಳೆ ಪ್ಲಾಸ್ಟಿಕ್​ ಮಿಶ್ರಿತ ಡಾಂಬರು ಬಳಸುವುದರಿಂದ ರಸ್ತಗಳು ದೀರ್ಘ ಬಾಳಿಕೆ ಬರಲು ಸಹಕಾರಿಯಾಗಲಿದೆ.

ಒಟ್ನಲ್ಲಿ, ಕಾಶ್ಮೀರ ಕಣಿವೆ ಮತ್ತು ಲಡಾಖ್​ನಲ್ಲಿ ರಸ್ತೆ ಸಂಪರ್ಕಕ್ಕೆ ವೇಗ ಸಿಕ್ಕಿರುವುದು ಸ್ಥಳೀಯರ ಸಾಮಾಜಿಕ ಸ್ಥಿತಿ ಮತ್ತು ಆರ್ಥಿಕ ಏಳಿಗೆಗೆ ನೆರವಾಗುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನೆ ಸಹ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ