AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ. ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ […]

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ರಸ್ತೆ ನಿರ್ಮಾಣಕ್ಕೆ ದೊರಕಿತು ಮಿಂಚಿನ ವೇಗ
KUSHAL V
|

Updated on: Aug 18, 2020 | 6:05 PM

Share

ದೆಹಲಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಜಮ್ಮು-ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕವನ್ನು ಉತ್ತಮಗೊಳಿಸಲು ಮುಂದಾಗಿದೆ.

ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆ ಅಡಿಯಲ್ಲಿ ಜಮ್ಮು-ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 11,517 ಕಿ.ಮಿ ಒಳಗೊಂಡ 1,858 ರಸ್ತೆಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, 84 ಸೇತುವೆಗಳನ್ನು ಸಹ ನಿರ್ಮಿಸಿದೆ. ಜೊತೆಗೆ, ಪಕ್ಕದ ಲಡಾಖ್​ ಕೇಂದ್ರಾಡಳಿತ ಪ್ರದೇಶದಲ್ಲಿ 699 ಕಿ.ಮಿ ಒಳಗೊಂಡ 96 ರಸ್ತೆಗಳನ್ನು ಹಾಗೂ 2 ಸೇತುವೆಗಳ ನಿರ್ಮಾಣವನ್ನ ಪೂರ್ಣಗೊಳಿಸಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್​ ಯೋಜನೆಯಲ್ಲಿ ರಸ್ತೆ ನಿರ್ಮಾಣ ಕೈಗೊಂಡಿರುವ ಇಲಾಖೆಯು ಕಾಮಗಾರಿಯಲ್ಲಿ ಕೆಲವು ನೂತನ ತಂತ್ರಜ್ಞಾನವನ್ನೂ ಬಳಸಿದೆ. ಉದಾಹರಣೆಗೆ, ಲೇಹ್ ಪ್ರದೇಶದ ಸ್ಟೋಕ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಯಲ್ಲಿ ಪ್ಲಾಸ್ಟಿಕ್​ ತ್ಯಾಜ್ಯವನ್ನ ಬಳಸಲಾಗಿದೆ. ಡಾಂಬರೀಕರಣದ ವೇಳೆ ಪ್ಲಾಸ್ಟಿಕ್​ ಮಿಶ್ರಿತ ಡಾಂಬರು ಬಳಸುವುದರಿಂದ ರಸ್ತಗಳು ದೀರ್ಘ ಬಾಳಿಕೆ ಬರಲು ಸಹಕಾರಿಯಾಗಲಿದೆ.

ಒಟ್ನಲ್ಲಿ, ಕಾಶ್ಮೀರ ಕಣಿವೆ ಮತ್ತು ಲಡಾಖ್​ನಲ್ಲಿ ರಸ್ತೆ ಸಂಪರ್ಕಕ್ಕೆ ವೇಗ ಸಿಕ್ಕಿರುವುದು ಸ್ಥಳೀಯರ ಸಾಮಾಜಿಕ ಸ್ಥಿತಿ ಮತ್ತು ಆರ್ಥಿಕ ಏಳಿಗೆಗೆ ನೆರವಾಗುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನೆ ಸಹ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ