AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಎಎಪಿ ಶಾಸಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಫೇಸ್‌ಬುಕ್ ಲೈವ್‌ನಲ್ಲಿ ನಟಿ-ರಾಜಕಾರಣಿ ಹೇಮಾ ಮಾಲಿನಿ ಬಗ್ಗೆ ಟೀಕೆ ಮಾಡಿದ್ದಕ್ಕಾಗಿ ಎಎಪಿ ಶಾಸಕ ನರೇಶ್ ಬಲ್ಯಾನ್ ಅವರನ್ನು ದೆಹಲಿಯ ಬಿಜೆಪಿ ಟೀಕಿಸಿದೆ. ಉತ್ತಮ್ ನಗರದ ರಸ್ತೆಗಳನ್ನು ಹೇಮಾ ಮಾಲಿನಿಯ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಎಎಪಿ ಶಾಸಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ
ನರೇಶ್
ನಯನಾ ರಾಜೀವ್
|

Updated on: Nov 05, 2024 | 11:21 AM

Share

ರಸ್ತೆಯನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದ ಆಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಫೇಸ್‌ಬುಕ್ ಲೈವ್‌ನಲ್ಲಿ ನಟಿ-ರಾಜಕಾರಣಿ ಹೇಮಾ ಮಾಲಿನಿ ಬಗ್ಗೆ ಟೀಕೆ ಮಾಡಿದ್ದಕ್ಕಾಗಿ ಎಎಪಿ ಶಾಸಕ ನರೇಶ್ ಬಲ್ಯಾನ್ ಅವರನ್ನು ದೆಹಲಿಯ ಬಿಜೆಪಿ ಟೀಕಿಸಿದೆ. ಉತ್ತಮ್ ನಗರದ ರಸ್ತೆಗಳನ್ನು ಹೇಮಾ ಮಾಲಿನಿಯ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ನಲ್ಲಿ ಆಪ್‌ ಶಾಸಕ ಈ ತಿಂಗಳೊಳಗಾಗಿ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು, ಉತ್ತಮ್​ನಗರದ ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಯಂತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಅಗೌರವ ತೋರಿದ ಶಾಸಕರನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಉಚ್ಚಾಟಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಎಎಪಿ ಶಾಸಕಿ ಸ್ವಾತಿ ಮಲಿವಾಲ್ ಮತ್ತು ಮಾಜಿ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ಅವರು ಬಲ್ಯಾನ್ ಅವರ ಹೇಳಿಕೆಯನ್ನು ಸ್ತ್ರೀದ್ವೇಷ ಎಂದು ಖಂಡಿಸಿದರು.

ಮತ್ತಷ್ಟು ಓದಿ:ಆಮ್ ಆದ್ಮಿ ಪಕ್ಷಕ್ಕೆ ವಿದೇಶಗಳಿಂದ 7 ಕೋಟಿ ದೇಣಿಗೆ; ಗೃಹ ಸಚಿವಾಲಯಕ್ಕೆ ಪತ್ರ ಬರೆದ ಇಡಿ

ಸ್ವಾತಿ ಮಲಿವಾಲ್​ ಮಾತನಾಡಿ, ಉತ್ತಮನಗರದ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿವೆ ಆದರೆ ಈ ವ್ಯಕ್ತಿ ಹತ್ತು ವರ್ಷಗಳಿಂದ ಮಲಗಿದ್ದಾನೆ. ಹೆಣ್ಣನ್ನು ವಸ್ತುವನ್ನಾಗಿ ಪರಿಗಣಿಸುವ ಇಂತಹ ಅಗ್ಗದ ಚಿಂತನೆಗೆ ಸಮಾಜದಲ್ಲಿ ಸ್ಥಾನವಿಲ್ಲ. ಮಹಿಳಾ ವಿರೋಧಿ ಚಿಂತನೆ ಹೊಂದಿರುವ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಬಾಲ್ಯಾನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಎಪಿಯನ್ನು ಒತ್ತಾಯಿಸಿದ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ, ಇಂತಹ ಜನರನ್ನು ವ್ಯವಸ್ಥೆಯಿಂದ ಹೊರಹಾಕಬೇಕು ಎಂದು ಪ್ರತಿಪಾದಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ