AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು

Rajasthan Crime: ಹತ್ಯೆಯಾದ ಮಹಿಳೆಯನ್ನು ಕಂಕುಬಾಯಿ ಎಂದು ಗುರುತಿಸಲಾಗಿದೆ. ಈಕೆಯ ಪತಿ ಮುಂಜಾನೆಯೇ ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಅವರಿಗೆ ತಿಂಡಿ ತೆಗೆದುಕೊಂಡು ಹೋಗಲು ಮನೆಯಿಂದ ಹೊರಟಿದ್ದರು.

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Nov 18, 2021 | 10:36 AM

ಕೆಲವು ದಿನಗಳ ಹಿಂದೆ ಜೈಪುರದಲ್ಲಿ ಮಹಿಳೆಯೊಬ್ಬರ ಶವ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ದನ ಮೇಯಿಸಲು ಹೋಗಿದ್ದ ಆಕೆಯ ಶವ ಸಿಕ್ಕಿತ್ತು..ನೋಡಿದರೆ ಕಾಲಿನ ಪಾದಗಳು ಇರಲಿಲ್ಲ. ಇದೀಗ ರಾಜಸ್ಥಾನದ ರಾಜ್​ಸಮಂದ್​ ಜಿಲ್ಲೆಯ ಚಾರ್ಭುಜಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 45 ವರ್ಷದ ಮಹಿಳೆಯೊಬ್ಬರ ಮೃತದೇಹ ಪಾದ ಕತ್ತರಿಸಿದ  ರೀತಿಯಲ್ಲಿ ಪತ್ತೆಯಾಗಿದೆ. ಇದೀಗ ಆತಂಕಕ್ಕಾಗಿ ಕಾರಣವಾಗಿದ್ದು, ಇದು ಬೆಳ್ಳಿಗಜ್ಜೆಗಾಗಿ ನಡೆಯುತ್ತಿರುವ ಕೊಲೆ, ಶೀಘ್ರವೇ ಆರೋಪಿಯನ್ನು ಬಂಧಿಸುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ಇದೀಗ ಹತ್ಯೆಯಾದ ಮಹಿಳೆಯನ್ನು ಕಂಕುಬಾಯಿ ಎಂದು ಗುರುತಿಸಲಾಗಿದೆ. ಈಕೆಯ ಪತಿ ಮುಂಜಾನೆಯೇ ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಅವರಿಗೆ ತಿಂಡಿ ತೆಗೆದುಕೊಂಡು ಹೋಗಲು ಮನೆಯಿಂದ ಹೊರಟಿದ್ದರು. ಆದರೆ ಅತ್ತ ಪತಿ ತಿಂಡಿಗಾಗಿ ಕಾಯುತ್ತಿದ್ದರೂ ಕಂಕುಬಾಯಿ ಹೋಗಲೇ ಇಲ್ಲ.  ಎಷ್ಟೇ ಹೊತ್ತಾದರೂ ಕಂಕುಬಾಯಿ ಬಾರದೆ ಇದ್ದಾಗ ಪತಿಯೇ ಮನೆಗೆ ವಾಪಸ್​ ಬಂದು, ಮಕ್ಕಳ ಬಳಿ ಅಮ್ಮ ಎಲ್ಲಿ ಎಂದು ಕೇಳಿದ್ದಾರೆ. ಆಗ ಮಕ್ಕಳು, ಅಮ್ಮ ನಿಮಗಾಗಿ ತಿಂಡಿ ತೆಗೆದುಕೊಂಡು ಮುಂಜಾನೆಯೇ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಅನುಮಾನಗೊಂಡ ಕಂಕುಬಾಯಿ ಪತಿ, ತಮ್ಮ ಕೆಲವು ಸಂಬಂಧಿಕರೊಂದಿಗೆ ಸೇರಿ ಹುಡುಕಿದ್ದಾರೆ. ರಾತ್ರಿಯವರೆಗೆ ಹುಡುಕಿದರೂ ಆಕೆಯ ಪತ್ತೆಯಾಗಲಿಲ್ಲ. ನಂತರ ಚರ್ಭುಂಜಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಅದಾದ ಮೇಲೆ ಹೊಲದಲ್ಲಿ ಅವರ ಮೃತದೇಹ ಸಿಕ್ಕಿದ್ದು, ಕಾಲಿನ ಪಾದಗಳು, ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಸಿಕ್ಕಿದೆ.

ಇದನ್ನೂ ಓದಿ: Viral Video: ಹೂವಿನ ಟೋಪಿ ಧರಿಸಿ ನಿದ್ರಿಸುತ್ತಿರುವ ಮುದ್ದಾದ ಬಾತುಕೋಳಿ; ಕ್ಯೂಟ್ ವಿಡಿಯೊ ನೋಡಿ

Published On - 9:58 am, Thu, 18 November 21

ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ