AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು

Rajasthan Crime: ಹತ್ಯೆಯಾದ ಮಹಿಳೆಯನ್ನು ಕಂಕುಬಾಯಿ ಎಂದು ಗುರುತಿಸಲಾಗಿದೆ. ಈಕೆಯ ಪತಿ ಮುಂಜಾನೆಯೇ ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಅವರಿಗೆ ತಿಂಡಿ ತೆಗೆದುಕೊಂಡು ಹೋಗಲು ಮನೆಯಿಂದ ಹೊರಟಿದ್ದರು.

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Nov 18, 2021 | 10:36 AM

Share

ಕೆಲವು ದಿನಗಳ ಹಿಂದೆ ಜೈಪುರದಲ್ಲಿ ಮಹಿಳೆಯೊಬ್ಬರ ಶವ ಕಾಲು ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ದನ ಮೇಯಿಸಲು ಹೋಗಿದ್ದ ಆಕೆಯ ಶವ ಸಿಕ್ಕಿತ್ತು..ನೋಡಿದರೆ ಕಾಲಿನ ಪಾದಗಳು ಇರಲಿಲ್ಲ. ಇದೀಗ ರಾಜಸ್ಥಾನದ ರಾಜ್​ಸಮಂದ್​ ಜಿಲ್ಲೆಯ ಚಾರ್ಭುಜಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 45 ವರ್ಷದ ಮಹಿಳೆಯೊಬ್ಬರ ಮೃತದೇಹ ಪಾದ ಕತ್ತರಿಸಿದ  ರೀತಿಯಲ್ಲಿ ಪತ್ತೆಯಾಗಿದೆ. ಇದೀಗ ಆತಂಕಕ್ಕಾಗಿ ಕಾರಣವಾಗಿದ್ದು, ಇದು ಬೆಳ್ಳಿಗಜ್ಜೆಗಾಗಿ ನಡೆಯುತ್ತಿರುವ ಕೊಲೆ, ಶೀಘ್ರವೇ ಆರೋಪಿಯನ್ನು ಬಂಧಿಸುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ಇದೀಗ ಹತ್ಯೆಯಾದ ಮಹಿಳೆಯನ್ನು ಕಂಕುಬಾಯಿ ಎಂದು ಗುರುತಿಸಲಾಗಿದೆ. ಈಕೆಯ ಪತಿ ಮುಂಜಾನೆಯೇ ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಅವರಿಗೆ ತಿಂಡಿ ತೆಗೆದುಕೊಂಡು ಹೋಗಲು ಮನೆಯಿಂದ ಹೊರಟಿದ್ದರು. ಆದರೆ ಅತ್ತ ಪತಿ ತಿಂಡಿಗಾಗಿ ಕಾಯುತ್ತಿದ್ದರೂ ಕಂಕುಬಾಯಿ ಹೋಗಲೇ ಇಲ್ಲ.  ಎಷ್ಟೇ ಹೊತ್ತಾದರೂ ಕಂಕುಬಾಯಿ ಬಾರದೆ ಇದ್ದಾಗ ಪತಿಯೇ ಮನೆಗೆ ವಾಪಸ್​ ಬಂದು, ಮಕ್ಕಳ ಬಳಿ ಅಮ್ಮ ಎಲ್ಲಿ ಎಂದು ಕೇಳಿದ್ದಾರೆ. ಆಗ ಮಕ್ಕಳು, ಅಮ್ಮ ನಿಮಗಾಗಿ ತಿಂಡಿ ತೆಗೆದುಕೊಂಡು ಮುಂಜಾನೆಯೇ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಅನುಮಾನಗೊಂಡ ಕಂಕುಬಾಯಿ ಪತಿ, ತಮ್ಮ ಕೆಲವು ಸಂಬಂಧಿಕರೊಂದಿಗೆ ಸೇರಿ ಹುಡುಕಿದ್ದಾರೆ. ರಾತ್ರಿಯವರೆಗೆ ಹುಡುಕಿದರೂ ಆಕೆಯ ಪತ್ತೆಯಾಗಲಿಲ್ಲ. ನಂತರ ಚರ್ಭುಂಜಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಅದಾದ ಮೇಲೆ ಹೊಲದಲ್ಲಿ ಅವರ ಮೃತದೇಹ ಸಿಕ್ಕಿದ್ದು, ಕಾಲಿನ ಪಾದಗಳು, ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಸಿಕ್ಕಿದೆ.

ಇದನ್ನೂ ಓದಿ: Viral Video: ಹೂವಿನ ಟೋಪಿ ಧರಿಸಿ ನಿದ್ರಿಸುತ್ತಿರುವ ಮುದ್ದಾದ ಬಾತುಕೋಳಿ; ಕ್ಯೂಟ್ ವಿಡಿಯೊ ನೋಡಿ

Published On - 9:58 am, Thu, 18 November 21

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್