AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
TV9 Web
| Edited By: |

Updated on:Dec 30, 2021 | 11:09 AM

Share

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ