AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ. ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ […]

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 15, 2020 | 6:34 PM

Share

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ.

ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ ಕಾಲ ಡಾನಾ ಅಲ್ಲೇ ಇದ್ದರು.

ನಿರಂಜನ್ ಹುಟ್ಟುಹಬ್ಬ ನೆಪದಲ್ಲಿ ಡಾನಾ ಮತ್ತೊಮ್ಮೆ ಭಾರತಕ್ಕೆ ಬಂದುಹೋಗಿದ್ದರು. ಅದಾದ ಮೇಲೆ ಫೆ.11ರಂದು ಮದುವೆಗಾಗಿ ಡಾನಾ ಮತ್ತು ಆಕೆಯ ತಾಯಿ ಮೆಕ್ಸಿಕೋದಿಂದ ಭಾರತಕ್ಕೆ ಬಂದರು. ಫೆ.17ರಂದು ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಲು ರೋಹ್ಟಕ್ ನಿವಾಸಿ ನಿರಂಜನ್ ಹಾಗೂ ಮೆಕ್ಸಿಕೋ ದೇಶದ ಡಾನಾ ಜೋಹೆರಿ ಆಲಿವೆರೋಸ್ ಕ್ರೂಸ್ ಅರ್ಜಿ ಸಲ್ಲಿಸಿದ್ದರು.

ಅದರಂತೆ ಮಾರ್ಚ್​ 18ಕ್ಕೆ ನೋಟಿಸ್ ಅವಧಿ ಮುಕ್ತಾಯವಾಗಿತ್ತು. ಆದ್ರೆ ಮಾ.19ರಿಂದ ಲಾಕ್​ಡೌನ್ ಶುರುವಾದ್ದರಿಂದ ಮದುವೆಯಾಗಲು ಸಾಧ್ಯವಾಗಲಿಲ್ಲ. ನಂತರ ವಿವಾಹ ಸಂಬಂಧ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ, ವಿವಾಹ ಕೈಂಕರ್ಯಕ್ಕೆ ನೆರವು ಕೋರಿದರು.

ಈಗ ಲಾಕ್​ಡೌನ್ ಸಂದರ್ಭದಲ್ಲಿ ವಿವಾಹವಾಗಲು ಸಾಧ್ಯವಾಗಲಿಲ್ಲ. ಕೊನೆಗೂ… ಏಪ್ರಿಲ್ 13ರ ರಾತ್ರಿ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ವಿವಾಹ ನೆರವೇರಿತು ಎಂಬುದರ ಮೂಲಕ ನಿರಂಜನ್- ಡಾನಾ ಜೋಡಿ ಪ್ರೇಮ ಶುಭರಸ್ತು ಆಗಿದೆ!

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು