AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ. ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ […]

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 15, 2020 | 6:34 PM

Share

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ.

ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ ಕಾಲ ಡಾನಾ ಅಲ್ಲೇ ಇದ್ದರು.

ನಿರಂಜನ್ ಹುಟ್ಟುಹಬ್ಬ ನೆಪದಲ್ಲಿ ಡಾನಾ ಮತ್ತೊಮ್ಮೆ ಭಾರತಕ್ಕೆ ಬಂದುಹೋಗಿದ್ದರು. ಅದಾದ ಮೇಲೆ ಫೆ.11ರಂದು ಮದುವೆಗಾಗಿ ಡಾನಾ ಮತ್ತು ಆಕೆಯ ತಾಯಿ ಮೆಕ್ಸಿಕೋದಿಂದ ಭಾರತಕ್ಕೆ ಬಂದರು. ಫೆ.17ರಂದು ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಲು ರೋಹ್ಟಕ್ ನಿವಾಸಿ ನಿರಂಜನ್ ಹಾಗೂ ಮೆಕ್ಸಿಕೋ ದೇಶದ ಡಾನಾ ಜೋಹೆರಿ ಆಲಿವೆರೋಸ್ ಕ್ರೂಸ್ ಅರ್ಜಿ ಸಲ್ಲಿಸಿದ್ದರು.

ಅದರಂತೆ ಮಾರ್ಚ್​ 18ಕ್ಕೆ ನೋಟಿಸ್ ಅವಧಿ ಮುಕ್ತಾಯವಾಗಿತ್ತು. ಆದ್ರೆ ಮಾ.19ರಿಂದ ಲಾಕ್​ಡೌನ್ ಶುರುವಾದ್ದರಿಂದ ಮದುವೆಯಾಗಲು ಸಾಧ್ಯವಾಗಲಿಲ್ಲ. ನಂತರ ವಿವಾಹ ಸಂಬಂಧ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ, ವಿವಾಹ ಕೈಂಕರ್ಯಕ್ಕೆ ನೆರವು ಕೋರಿದರು.

ಈಗ ಲಾಕ್​ಡೌನ್ ಸಂದರ್ಭದಲ್ಲಿ ವಿವಾಹವಾಗಲು ಸಾಧ್ಯವಾಗಲಿಲ್ಲ. ಕೊನೆಗೂ… ಏಪ್ರಿಲ್ 13ರ ರಾತ್ರಿ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ವಿವಾಹ ನೆರವೇರಿತು ಎಂಬುದರ ಮೂಲಕ ನಿರಂಜನ್- ಡಾನಾ ಜೋಡಿ ಪ್ರೇಮ ಶುಭರಸ್ತು ಆಗಿದೆ!

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ