AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ. ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ […]

ಕೊರೊನಾ ಕಾಲದಲ್ಲಿ ನಡುರಾತ್ರಿ ಕೋರ್ಟ್ ಬಾಗಿಲು ತೆರೆಸಿ, ನಡೆಯಿತು ವಿಶೇಷ ಮದುವೆ!
ಸಾಧು ಶ್ರೀನಾಥ್​
|

Updated on: Apr 15, 2020 | 6:34 PM

Share

ಚಂಡೀಗಢ: ಕೊರೊನಾ ಸಮಯದಲ್ಲಿ ದೇಶಾದ್ಯಂತ ಲಾಕ್​ಡೌನ್ ಆಗಿ ಎಲ್ಲರು ಮನೆಯಲ್ಲೇ ಇರುವಂತಾಗಿದೆ. ಆದ್ರೆ ಹರಿಯಾಣದ ಜಿಲ್ಲಾಧಿಕಾರಿ ಕಚೇರಿ ಮಾತ್ರ ಏ.13ರ ರಾತ್ರಿ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ. ಭಾಷಾ ತಜ್ಞರಾಗಿ ಕೆಲಸ ಮಾಡುತ್ತಿರುವ ನಿರಂಜನ್ ಕಶ್ಯಪ್ ಹಾಗೂ ಡಾನಾ ಜೋಡಿ ಲಾಕ್​ಡೌನ್​ ನಡುವೆಯೂ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದಾರೆ.

ಈ ವಿಶೇಷ ಜೋಡಿಯು ಭಾಷಾ ಕಲಿಕೆ ಆಪ್ ಮುಖಾಂತರ 2017ರಲ್ಲಿ ಭೇಟಿಯಾಗಿದ್ದರು. ನಂತರ ಮುಂದಿನ ವರ್ಷವೇ ನಿಶ್ಚಿತಾರ್ಥ ಸಹ ನೆರವೇರಿತ್ತು. ನಂತರ ಮೆಕ್ಸಿಕೋಗೆ ವಾಪಸ್ ಹೋಗಿ ಎರಡು ವರ್ಷಗಳ ಕಾಲ ಡಾನಾ ಅಲ್ಲೇ ಇದ್ದರು.

ನಿರಂಜನ್ ಹುಟ್ಟುಹಬ್ಬ ನೆಪದಲ್ಲಿ ಡಾನಾ ಮತ್ತೊಮ್ಮೆ ಭಾರತಕ್ಕೆ ಬಂದುಹೋಗಿದ್ದರು. ಅದಾದ ಮೇಲೆ ಫೆ.11ರಂದು ಮದುವೆಗಾಗಿ ಡಾನಾ ಮತ್ತು ಆಕೆಯ ತಾಯಿ ಮೆಕ್ಸಿಕೋದಿಂದ ಭಾರತಕ್ಕೆ ಬಂದರು. ಫೆ.17ರಂದು ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಲು ರೋಹ್ಟಕ್ ನಿವಾಸಿ ನಿರಂಜನ್ ಹಾಗೂ ಮೆಕ್ಸಿಕೋ ದೇಶದ ಡಾನಾ ಜೋಹೆರಿ ಆಲಿವೆರೋಸ್ ಕ್ರೂಸ್ ಅರ್ಜಿ ಸಲ್ಲಿಸಿದ್ದರು.

ಅದರಂತೆ ಮಾರ್ಚ್​ 18ಕ್ಕೆ ನೋಟಿಸ್ ಅವಧಿ ಮುಕ್ತಾಯವಾಗಿತ್ತು. ಆದ್ರೆ ಮಾ.19ರಿಂದ ಲಾಕ್​ಡೌನ್ ಶುರುವಾದ್ದರಿಂದ ಮದುವೆಯಾಗಲು ಸಾಧ್ಯವಾಗಲಿಲ್ಲ. ನಂತರ ವಿವಾಹ ಸಂಬಂಧ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ, ವಿವಾಹ ಕೈಂಕರ್ಯಕ್ಕೆ ನೆರವು ಕೋರಿದರು.

ಈಗ ಲಾಕ್​ಡೌನ್ ಸಂದರ್ಭದಲ್ಲಿ ವಿವಾಹವಾಗಲು ಸಾಧ್ಯವಾಗಲಿಲ್ಲ. ಕೊನೆಗೂ… ಏಪ್ರಿಲ್ 13ರ ರಾತ್ರಿ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ವಿವಾಹ ನೆರವೇರಿತು ಎಂಬುದರ ಮೂಲಕ ನಿರಂಜನ್- ಡಾನಾ ಜೋಡಿ ಪ್ರೇಮ ಶುಭರಸ್ತು ಆಗಿದೆ!

Follow Us
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ