AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್ ಜಿಲ್ಲೆಯಲ್ಲಿ ನಡೆದಿದೆ.

Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಕುಸಿದ ಮೇಲ್ಛಾವಣಿ
TV9 Web
| Edited By: ವಿವೇಕ ಬಿರಾದಾರ|

Updated on:Jul 19, 2023 | 8:34 AM

Share

ಲಖನೌ: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಿಥಿಲಗೊಂಡ ಕಟ್ಟಡಗಳು ಧರೆಗೆ ಉರುಳುತ್ತಿವೆ. ಇದೀಗ ಉತ್ತರ ಪ್ರದೇಶದ (Uttar Pradesh) ಬುಲಂದ್​ಶಹರ್ ಜಿಲ್ಲೆಯ ನರಸೇನಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಮೇಲ್ಛಾವಣಿ ಕುಸಿದು (Roof Collapse) ದುರಂತ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ನರಸೇನಾ ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಶವಗಳನ್ನು ಹೊರತೆಗೆದಿದ್ದಾರೆ.

ಕೋಲ್ಡ್ ಸ್ಟೋರೇಜ್ ಚೇಂಬರ್‌ ಕುಸಿತ: 8 ಜನ ಸಾವು

ಇದೇ ವರ್ಷ ಮಾರ್ಚ್​​ ತಿಂಗಳಲ್ಲಿ ಉತ್ತರ ಪ್ರದೇಶದ  ಚಂಡೌಸಿ ಪಟ್ಟಣದಲ್ಲಿ ಇಂದಿರಾ ನಗರ ರಸ್ತೆಯಲ್ಲಿರುವ ಕೋಲ್ಡ್ ಸ್ಟೋರೇಜ್ ಚೇಂಬರ್‌ ಕುಸಿತವಾಗಿ ಎಂಟು ಜನರು ಸಾವನ್ನಪ್ಪಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಮತ್ತು ಪ್ರಕರಣದ ತನಿಖೆ ನಡೆಸಲು  ಸಮಿತಿ ರಚಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಹಿಂದೂ ಧರ್ಮಕ್ಕೆ ಮತಾಂತರವಾಗಲು ಬಯಸಿದ ಮುಸ್ಲಿಂ ಯುವಕ;ಇದು ಬರೀ ನೆಪ ಎಂದು ಆರೋಪಿಸಿದ ಪತ್ನಿ

ಈ ಬಗ್ಗೆ ಸರ್ಕಾರಿ ಅಧಿಕಾರಿ ಮಾತನಾಡಿ ಮುಖ್ಯಮಂತ್ರಿಗಳು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ತೀವ್ರವಾಗಿ ಗಾಯಗೊಂಡವರಿಗೆ 50,000 ರೂ. ಮತ್ತು ಗಾಯಗೊಂಡ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Wed, 19 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ