AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲು

Locket Chatterjee:: ತೃಣಮೂಲ ಸಂಸದೆ ನುಸ್ರತ್ ಜಹಾನ್ ವಿವಾದದ ನಡುವೆಯೇ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಾಗಿದೆ.  ತೃಣಮೂಲ ಮೇಯರ್ ತುಳಸಿ ಸಿನ್ಹಾ ರಾಯ್ ಅವರು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ

ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲು
ಲಾಕೆಟ್
Follow us
ನಯನಾ ರಾಜೀವ್
|

Updated on:Aug 04, 2023 | 2:53 PM

ತೃಣಮೂಲ ಸಂಸದೆ ನುಸ್ರತ್ ಜಹಾನ್ ವಿವಾದದ ನಡುವೆಯೇ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ(Locket Chatterjee) ವಿರುದ್ಧ  ಜಾರಿನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ.  ತೃಣಮೂಲ ಮೇಯರ್ ತುಳಸಿ ಸಿನ್ಹಾ ರಾಯ್ ಅವರು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಚಾರ್ಜ್ ಶೀಟ್​ನಲ್ಲಿ ತಾವು ಸಮಾಜ ಸೇವಕ ಹಾಗೂ ವಕೀಲ ಎಂದು ನಮೂದಿಸಿದ್ದಾರೆ. ರೋಸ್ ವ್ಯಾಲಿ ಸಂಸ್ಥೆಯಿಂದ ಲಾಕೆಟ್ ಆರ್ಥಿಕವಾಗಿ ಲಾಭ ಮಾಡಿಕೊಂಡಿದ್ದಾರೆ ಎಂಬುದು ಲಾಕೆಟ್ ವಿರುದ್ಧ ತೃಣಮೂಲ ಮುಖಂಡರ ದೂರು. ತುಳಸಿ ಸಿನ್ಹಾ ರಾಯ್ ಅವರು ಇಡಿಗೆ ಸಂಬಂಧಿಸಿದ ಮಾಹಿತಿಯನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಶಂಕುದೇವ್ ಪಾಂಡಾ ಅವರೊಂದಿಗೆ ಇಡಿ ಕಚೇರಿಯಲ್ಲಿ ಕಾಣಿಸಿಕೊಂಡರು. ಐದು ದಿನಗಳ ನಂತರ ಬಿಜೆಪಿ ಸಂಸದರ ವಿರುದ್ಧ ದೂರುಗಳು ಕೇಳಿಬಂದಿವೆ.

ರೋಸ್ ವ್ಯಾಲಿ ಚಿಟ್ ಫಂಡ್ ನಿಂದ ಲಾಕೆಟ್ ಚಟರ್ಜಿ ಆರ್ಥಿಕವಾಗಿ ಲಾಭ ಮಾಡಿಕೊಂಡಿದ್ದಾರೆ ಎಂದು ತುಳಸಿ ಆರೋಪಿಸಿದ್ದಾರೆ. ಇಡಿ ಈ ರೋಸ್ ವ್ಯಾಲಿ-ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುತ್ತಿರುವುದರಿಂದ, ಅವರು ನಿಷ್ಪಕ್ಷಪಾತ ತನಿಖೆಗಾಗಿ ಇಡಿಗೆ ಮನವಿ ಮಾಡಿದರು. ಅಗತ್ಯ ಬಿದ್ದರೆ ಹೆಚ್ಚಿನ ಮಾಹಿತಿ ನೀಡುವ ಮೂಲಕ ತನಿಖಾಧಿಕಾರಿಗಳಿಗೆ ಸಹಕರಿಸಲು ಸಿದ್ಧ ಎಂದರು.

ಲಾಕೆಟ್ ಚಟರ್ಜಿ ಮಾತನಾಡಿ, ಮಮತಾ ಬ್ಯಾನರ್ಜಿ ಮತ್ತು ಅವರ ಕುಟುಂಬವು ಚಿಟ್ ಫಂಡ್‌ನ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಂಡಿದೆ. ತಮ್ಮ ಪಕ್ಷದ ಸಚಿವರು, ಶಾಸಕರು ಚಿಟ್ ಫಂಡ್ ಲಾಭ ಪಡೆದು ಜೈಲಿಗೆ ಹೋಗಿದ್ದಾರೆ. ತೃಣಮೂಲ ಪಕ್ಷದಲ್ಲಿ ಕಳ್ಳರು ತುಂಬಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:02 pm, Fri, 4 August 23

ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್