AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela: 10 ಲಕ್ಷ ಮಂದಿಗೆ ಉದ್ಯೋಗ, ಬೃಹತ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

Rozgar Mela: 10 ಲಕ್ಷ ಮಂದಿಗೆ ಉದ್ಯೋಗ, ಬೃಹತ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Updated By: Ganapathi Sharma|

Updated on: Oct 20, 2022 | 4:19 PM

Share

ನವದೆಹಲಿ: 10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ (Rozgar Mela) ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ ಎಂದು ಪ್ರಧಾನಿ ಕಾರ್ಯಾಲಯ (PMO) ಗುರುವಾರ ತಿಳಿಸಿದೆ.

ಯುವಕರಿಗೆ ಉದ್ಯೋಗ ನೀಡುವುದರ ಜತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.

ಇದನ್ನೂ ಓದಿ: Mission LiFE : ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ
Image
Wipro: ಕೇವಲ 10 ನಿಮಿಷಗಳಲ್ಲಿ ವಿಪ್ರೋದ 20 ಮಂದಿ ಉನ್ನತ ಸಿಬ್ಬಂದಿ ವಜಾ: ರಿಷದ್ ಪ್ರೇಮ್ ಜಿ
Image
Rupee Value: ಮತ್ತೆ ಪಾತಾಳಕ್ಕೆ ಕುಸಿದ ರೂಪಾಯಿ, ಡಾಲರ್ ವಿರುದ್ಧ 83.06ಕ್ಕೆ ಇಳಿಕೆ
Image
JioFiber: ಜಿಯೋಫೈಬರ್ ಡಬಲ್ ಫೆಸ್ಟಿವಲ್ ಬೋನಾಂಜಾ ಆಫರ್ ಬಂದಿದೆ! ವಿವರ ಇಲ್ಲಿದೆ
Image
Nestle India Q3 Results: ನೆಸ್ಲೆ ಇಂಡಿಯಾ ನಿವ್ವಳ ಲಾಭದಲ್ಲಿ 8% ಏರಿಕೆ, ಮಾರಾಟದಲ್ಲಿ 5 ವರ್ಷಗಳ ಗರಿಷ್ಠ ಸಾಧನೆ

ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡರಿಗೆ ಆಹ್ವಾನ

ಈ ನೇಮಕಾತಿಗಳಲ್ಲಿ ಕೆಲವನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಮಾಡಿಕೊಳ್ಳಲಿವೆ. ಉಳಿದವನ್ನು ಯುಪಿಎಸ್​ಸಿ, ಎಸ್​ಎಸ್​ಸಿ ಮತ್ತು ರೈಲ್ವೆ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡಿಕೊಳ್ಳಲಾಗುತ್ತಿದೆ ಎಂದು ಅದು ತಿಳಿಸಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು