AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನಡಿ ಬೀಳುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಹೊಟ್ಟೆ ನೆಲಕ್ಕೆ ತಾಗದಂತೆ ಬಚಾವ್​ ಮಾಡಿದರು

ಇಂಥ ಘಟನೆಗಳು ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುತ್ತವೆ. ಪ್ರಯಾಣಿಕರು ಅವಸರದಲ್ಲಿ ರೈಲು ಹತ್ತಲು ಅಥವಾ ಇಳಿಯಲು ಹೋಗಿ ಆಯತಪ್ಪುವುದು ಉಂಟು. ಅಂಥವರನ್ನು ಪಿಆರ್​ಎಫ್​​ ಸಿಬ್ಬಂದಿ ರಕ್ಷಿಸಿದ ಹಲವು ಉದಾಹರಣೆಗಳೂ ಇವೆ.

Video: ರೈಲಿನಡಿ ಬೀಳುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಹೊಟ್ಟೆ ನೆಲಕ್ಕೆ ತಾಗದಂತೆ ಬಚಾವ್​ ಮಾಡಿದರು
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
TV9 Web
| Edited By: |

Updated on: Oct 19, 2021 | 9:19 AM

Share

ಪ್ಲಾಟ್​ಫಾರ್ಮ್​ ಮತ್ತು ರೈಲಿನ ಮಧ್ಯೆ ಇದ್ದ ಖಾಲಿಜಾಗದಲ್ಲಿ ಬೀಳುತ್ತಿದ್ದ ಗರ್ಭಿಣಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಾನ್​ಸ್ಟೆಬಲ್​​ ಒಬ್ಬರು ರಕ್ಷಿಸಿದ ವಿಡಿಯೋ ಈಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಆ ರೈಲು ಸಣ್ಣಪ್ರಮಾಣದಲ್ಲಿ ಚಲಿಸುತ್ತಿತ್ತು. ಈ ಗರ್ಭಿಣಿ ಅದರಿಂದ ಇಳಿಯಲು ಪ್ರಯತ್ನಿಸಿದಾಗ ಆಯತಪ್ಪಿದ್ದಾರೆ. ಅಲ್ಲಿಯೇ ಆರ್​ಪಿಎಫ್​​ ಕಾನ್​​ಸ್ಟೆಬಲ್​ ಕೂಡಲೇ ಅವರನ್ನು ಹಿಡಿದುಕೊಂಡಿದ್ದಾರೆ. ಅವರೇನಾದರೂ ಹಿಡಿದುಕೊಳ್ಳದೆ ಇದ್ದರೆ ಗರ್ಭಿಣಿ ರೈಲಿನ ಅಡಿಗೆ ಆಗುತ್ತಿದ್ದರು. ಇಬ್ಬರೂ ಬಿದ್ದರೂ ಕೂಡ ಆಕೆಯ ಹೊಟ್ಟೆ ನೆಲಕ್ಕೆ ತಾಗದಂತೆ, ತಾವು ಅಡಿಗೆ ಬಿದ್ದು ರಕ್ಷಿಸಿದ್ದಾರೆ.   

ಇಂಥ ಘಟನೆಗಳು ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುತ್ತವೆ. ಪ್ರಯಾಣಿಕರು ಅವಸರದಲ್ಲಿ ರೈಲು ಹತ್ತಲು ಅಥವಾ ಇಳಿಯಲು ಹೋಗಿ ಆಯತಪ್ಪುವುದು ಉಂಟು. ಅಂಥವರನ್ನು ಪಿಆರ್​ಎಫ್​​ ಸಿಬ್ಬಂದಿ ರಕ್ಷಿಸಿದ ಹಲವು ಉದಾಹರಣೆಗಳೂ ಇವೆ. ಹಾಗೇ ಈ ಘಟನೆ ಕೂಡ ಸೋಮವಾರ ನಡೆದಿದ್ದು. ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗ್ತಿದೆ. ಆರ್​ಪಿಎಫ್​ ಕಾನ್​ಸ್ಟೆಬಲ್​ ಸಮಯಪ್ರಜ್ಞೆಗೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಕಲ್ಯಾಣ್​ ರೈಲ್ವೆ ಸ್ಟೇಶನ್​​ನಲ್ಲಿ. ಕಾನ್​ಸ್ಟೆಬಲ್​ ಹೆಸರು ಎಸ್​.ಆರ್​. ಕಂದೇಕಾರ್​.

ಇದನ್ನೂ ಓದಿ: ಈ ಮೂರು ರಾಶಿಯ ಜನ ಸುಲಭವಾಗಿ, ಶ್ರಮ ಪಡದೆ ಕೆಲಸ ಆಗಬೇಕು ಎಂದು ಇಚ್ಛಿಸುತ್ತಾರೆ? ಯಾವುವು ಆ ರಾಶಿಗಳು?

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು