AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ಪೊಲೀಸ್​ಗೆ ಯಾವುದೇ ಮಾನಸಿಕ ಅಸ್ವಸ್ಥತೆ ಇಲ್ಲ

ಜೈಪುರ-ಮುಂಬೈ ಸೆಂಟ್ರಲ್ ಸೂಪರ್​ಫಾಸ್ಟ್​ ಎಕ್ಸ್​ ಪ್ರೆಸ್​ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದ ರೈಲ್ವೆ ಪೊಲೀಸ್ ಅಧಿಕಾರಿಗೆ ಯಾವುದೇ ಮಾನಸಿಕ ಅಸ್ವಸ್ಥತೆ ಇಲ್ಲ ಎಂಬುದು ಸಾಬೀತಾಗಿದೆ. ರೈಲಿನಲ್ಲಿ ನಾಲ್ವರನ್ನು ಈತ ಗುಂಡಿಕ್ಕಿ ಹತ್ಯೆ ಮಾಡಿದ್ದ, ಜುಲೈ 31ರಂದು ಈ ಘಟನೆ ನಡೆದಿತ್ತು. ನಾಲ್ವರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಮಾನಸಿಕವಾಗಿ ಸ್ಥಿರವಾಗಿದ್ದಾನೆ ಮತ್ತು ತಾನು ಏನು ಮಾಡುತ್ತಿದ್ದೇನೆ ಎಂಬ ಅರಿವು ಅವನಿಗೆ ಎಂದು ಜಿಆರ್​ಪಿ(Government Railway Police) ಆರೋಪಪಟ್ಟಿ ಸಲ್ಲಿಸಿದೆ.

ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ಪೊಲೀಸ್​ಗೆ ಯಾವುದೇ ಮಾನಸಿಕ ಅಸ್ವಸ್ಥತೆ ಇಲ್ಲ
ರೈಲು
ನಯನಾ ರಾಜೀವ್
|

Updated on: Oct 23, 2023 | 8:20 AM

Share

ಜೈಪುರ-ಮುಂಬೈ ಸೆಂಟ್ರಲ್ ಸೂಪರ್​ಫಾಸ್ಟ್​ ಎಕ್ಸ್​ ಪ್ರೆಸ್​ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದ ರೈಲ್ವೆ ಪೊಲೀಸ್ ಅಧಿಕಾರಿಗೆ ಯಾವುದೇ ಮಾನಸಿಕ ಅಸ್ವಸ್ಥತೆ ಇಲ್ಲ ಎಂಬುದು ಸಾಬೀತಾಗಿದೆ. ರೈಲಿನಲ್ಲಿ ನಾಲ್ವರನ್ನು ಈತ ಗುಂಡಿಕ್ಕಿ ಹತ್ಯೆ ಮಾಡಿದ್ದ, ಜುಲೈ 31ರಂದು ಈ ಘಟನೆ ನಡೆದಿತ್ತು. ನಾಲ್ವರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಮಾನಸಿಕವಾಗಿ ಸ್ಥಿರವಾಗಿದ್ದಾನೆ ಮತ್ತು ತಾನು ಏನು ಮಾಡುತ್ತಿದ್ದೇನೆ ಎಂಬ ಅರಿವು ಅವನಿಗೆ ಎಂದು ಜಿಆರ್​ಪಿ(Government Railway Police) ಆರೋಪಪಟ್ಟಿ ಸಲ್ಲಿಸಿದೆ.

ತನಿಖಾಧಿಕಾರಿಗಳು ರೈಲಿನೊಳಗಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು ಅದರಲ್ಲಿ ಚೇತನ್ ಕಂಪಾರ್ಟ್​ಮೆಂಟ್​ನ ನಡುವೆ ಚಲಿಸುತ್ತಿರುವುದನ್ನು ಕಾಣಬಹುದಾಗಿದೆ ಆತ ಆ ನಾಲ್ವರನ್ನು ಹುಡುಕುತ್ತಿದ್ದ ಎಂಬುದು ಸ್ಪಷ್ಟವಾಗುತ್ತದೆ.

ಮಹಾರಾಷ್ಟ್ರದ ಪಾಲ್ಘಢ ನಿಲ್ದಾಣವನ್ನು ದಾಟುತ್ತಿದ್ದಂತೆ ರೈಲ್ವೆಯ ಎಎಸ್​ಐ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ರೈಲಿನಲ್ಲಿ ಚೇತನ್ ಸಿಂಗ್ ಎಂಬ ರೈಲ್ವೆ ರಕ್ಷಣಾ ಪಡೆಯ ಕಾನ್‌ಸ್ಟೆಬಲ್ ಈ ಗುಂಡಿನ ದಾಳಿ ನಡೆಸಿದ್ದು, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್, ಓರ್ವ ಆರ್‌ಪಿಎಫ್ ಸಿಬ್ಬಂದಿ ಹಾಗೂ ಜೈಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ಸೇರಿ ಒಟ್ಟು ನಾಲ್ಕು ಮಂದಿಯನ್ನು ಹತ್ಯೆ ಮಾಡಿದ್ದ.

ಮತ್ತಷ್ಟು ಓದಿ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರ್‌ಪಿಎಫ್ ಕಾನ್ಸ್‌ಟೇಬಲ್‌ ವಿರುದ್ಧ ಮತೀಯ ದ್ವೇಷ ಹರಡಿದ ಆರೋಪ

ಕೈಗೆ ಅಪಾಯಕಾರಿ ಆಯುಧಗಳನ್ನು ಕೊಟ್ಟು ಬಿಟ್ಟರೆ ಸಾಕಾಗುವುದಿಲ್ಲ. ಈ ಶಸ್ತ್ರಾಸ್ತ್ರ ಹೊಂದಿರುವ ಯೋಧರ, ಪೊಲೀಸರ ಸಾಮರ್ಥ್ಯದ ಜೊತೆ ಮಾನಸಿಕ ಯೋಗಕ್ಷೇಮವನ್ನು ಸಹ ನಿರ್ಣಯಿಸುವುದು ಪ್ರಮುಖವಾಗಿದೆ. ಕೆಲವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಸಂದರ್ಭದಲ್ಲೂ ಇಂತಹ ಕೃತ್ಯಗಳನ್ನು ಎಸಗಬಹುದು, ಹೀಗಾಗಿ ಮಾನಸಿಕ ಯೋಗಕ್ಷೇಮವನ್ನು ಕೂಡ ಮೌಲ್ಯ ಮಾಪನ ಮಾಡುತ್ತಿರಬೇಕು ಎನ್ನುವ ವಾದವೂ ಎದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ