AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ

‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ
ಮೊಹಾಲಿಯಲ್ಲಿ ರಾಕೆಟ್​ ದಾಳಿ ನಡೆದಿದೆ.
TV9 Web
| Edited By: |

Updated on:May 10, 2022 | 8:07 AM

Share

ಮೊಹಾಲಿ: ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ಕಚೇರಿಯ ಮೇಲೆ ರಾಕೆಟ್ ದಾಳಿ ನಡೆದಿದೆ. ರಾಕೆಟ್ ಪ್ರೊಪೆಲ್​ಡ್ ಗ್ರೆನೇಡ್ (rocket-propelled grenade – RPG) ಮೂಲಕ ನಡೆದಿರುವ ಗ್ರೆನೇಡ್ ದಾಳಿಯಲ್ಲಿ ಗುಪ್ತಚರ ಇಲಾಖೆ ಕಟ್ಟಡದ ಗಾಜು ಒಡೆದು, ಪುಡಿಯಾಗಿದೆ. ಯಾವುದೇ ಜೀವಹಾನಿಯಾಗಿಲ್ಲ. ದಾಖಲೆಗಳು ಹಾಳಾಗಿಲ್ಲ. ‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಹಾಲಿಯ ಸೆಕ್ಟರ್ 77ರಲ್ಲಿರುವ ಎಸ್​ಎಎಸ್ ನಗರ ಪ್ರದೇಶದಲ್ಲಿರುವ ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ಇಲಾಖೆ ಮುಖ್ಯ ಕಚೇರಿಯ ಮೇಲೆ ರಾತ್ರಿ 7.45ಕ್ಕೆ ರಾಕೆಟ್ ದಾಳಿ ನಡೆದಿದೆ. ದಾಳಿಯಲ್ಲಿ ಯಾವುದೇ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಧಿವಿಜ್ಞಾನ ತಜ್ಞರೂ ಸ್ಥಳಕ್ಕೆ ಧಾವಿಸಿದ್ದು, ವಿಸ್ತೃತ ತನಿಖೆಗೆ ಆದೇಶ ನೀಡಲಾಗಿದೆ ಎಂದು ಮೊಹಾಲಿ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾಕೆಟ್​ ದಾಳಿ ಮಾದರಿಯ ಸ್ಫೋಟ ಸಂಭವಿಸಿದ್ದು, ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚಂಡಿಗಡದಿಂದ ಪೊಲೀಸ್ ಕ್ಷಿಪ್ರ ಕಾರ್ಯಪಡೆಯು ಮೊಹಾಲಿಗೆ ಭೇಟಿ ನೀಡಿದ್ದು, ಸ್ಥಳೀಯ ಪೊಲೀಸ್ ಸಿಬ್ಬಂದಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಇದನ್ನೂ ಓದಿ: ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿ ಬಾಂಬ್ ಸ್ಫೋಟಿಸಿದ ಮಹಿಳಾ ಬಾಂಬರ್ ಎಂಫಿಲ್ ವಿದ್ಯಾರ್ಥಿನಿ; ಆಕೆಯ ಕೃತ್ಯ ಬಗ್ಗೆ ಹೆಮ್ಮೆಯಿಂದ ಬೀಗುತ್ತಿರುವೆ ಎಂದ ಪತಿ

Published On - 8:06 am, Tue, 10 May 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ